Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 11:2 - ಕನ್ನಡ ಸಮಕಾಲಿಕ ಅನುವಾದ

2 ನಿನ್ನ ಹಣವನ್ನು ಏಳೆಂಟು ಮಂದಿಗೆ ವೆಚ್ಚಮಾಡು. ಏಕೆಂದರೆ ಭೂಮಿಯ ಮೇಲೆ ಮುಂದೆ ಯಾವ ವಿಪತ್ತು ಬರುವುದೋ ನಿನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀನು ಅದನ್ನು ಏಳು ಮತ್ತು ಎಂಟು ಮಂದಿಗೆ ಹಂಚಿಬಿಡು. ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿನ್ನ ಹಣವನ್ನು ವಿಭಾಗಿಸಿ ಏಳೆಂಟು ಸ್ಥಳಗಳಲ್ಲಿ ಇಡು. ಏಕೆಂದರೆ ಎಲ್ಲಿ, ಎಂಥ ಕೇಡು ಸಂಭವಿಸಬಹುದೆಂದು ನಿನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಏಳು ಮಂದಿಗೆ, ಹೌದು, ಎಂಟು ಮಂದಿಗೆ ಹಂಚಿಬಿಡು; ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿನ್ನಲ್ಲಿರುವುದನ್ನೆಲ್ಲ ಒಳ್ಳೆಯ ಕಾರ್ಯಗಳಿಗೆ ಉಪಯೋಗಿಸು; ಲೋಕಕ್ಕೆ ಮುಂದೆ ಸಂಭವಿಸುವ ಕೇಡು ನಿನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 11:2
22 ತಿಳಿವುಗಳ ಹೋಲಿಕೆ  

ಈ ಆರು ವಿಷಯಗಳನ್ನು ಯೆಹೋವ ದೇವರು ಹಗೆ ಮಾಡುತ್ತಾರೆ; ಹೌದು, ಏಳು ದೇವರಿಗೆ ಅಸಹ್ಯವಾಗಿವೆ, ಅವು ಯಾವವೆಂದರೆ:


ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಡುವರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು; ಅವನ ಬಲವು ಘನದಿಂದ ಉನ್ನತವಾಗುವುದು.


ದೇವರು ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವರು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.


ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”


ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂಬಂತೆ ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ಕಷ್ಟ ಅನುಭವಿಸುವವರ ಸಂಗಡ ನೀವು ಸಹ ಕಷ್ಟ ಅನುಭವಿಸುವವರೆಂಬಂತೆ ನೆನೆಸಿರಿ.


ಈ ದಿನಗಳು ಕೆಟ್ಟವುಗಳಾಗಿರುವುದರಿಂದ, ಸರ್ವ ಸದಾವಕಾಶಗಳನ್ನೂ ಸದ್ವಿನಿಯೋಗಿಸಿಕೊಳ್ಳಿರಿ.


ಪ್ರಿಯರೇ, ಒಬ್ಬ ಮನುಷ್ಯನು ಯಾವುದಾದರೊಂದು ಪಾಪದಲ್ಲಿ ಸಿಕ್ಕಿಬಿದ್ದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕ ಆತ್ಮದಿಂದ ಪುನಃ ಸ್ಥಾಪಿಸಿರಿ. ಆದರೆ ನೀನು ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.


ಅವರು ಒಂದು ದಿನದಲ್ಲಿ ಏಳು ಸಾರಿ ಪಾಪಮಾಡಿ, ಏಳು ಸಾರಿಯೂ ನಿನ್ನ ಬಳಿಗೆ ಬಂದು, ‘ನಾನು ಪಶ್ಚಾತ್ತಾಪಪಡುತ್ತೇನೆ,’ ಎಂದು ಹೇಳಿದರೆ ನೀನು ಅವರನ್ನು ಕ್ಷಮಿಸಬೇಕು,” ಎಂದರು.


ಅದಕ್ಕೆ ಯೇಸು, “ಏಳು ಸಲವಲ್ಲ, ಏಳೆಪ್ಪತ್ತು ಸಲ ಎಂದು ನಾನು ನಿಮಗೆ ಹೇಳುತ್ತೇನೆ.


ಕೇಳುವವನಿಗೆ ಕೊಡು, ನಿನ್ನಿಂದ ಸಾಲ ಕೇಳುವವನ ಕಡೆಯಿಂದ ಮುಖ ತಿರುಗಿಸಿಕೊಳ್ಳಬೇಡ.


ಆತನೇ ಅವರ ಸಮಾಧಾನವಾಗಿರುವನು. ಅಸ್ಸೀರಿಯದವನು ನಮ್ಮ ನಾಡಿಗೆ ಮುತ್ತಿಗೆ ಹಾಕುವಾಗ ನಮ್ಮ ಕೋಟೆಗಳ ಮೂಲಕ ಸೈನ್ಯವಾಗಿ ಹೋಗುವಾಗ ನಾವು ಅವನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಸೇನಾಪತಿಗಳನ್ನೂ ಎಬ್ಬಿಸುವೆವು.


ಆ ದಿನಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆದ ಕಾಲವಾಗಿಯೂ, ಅವರ ದುಃಖ ಸಂತೋಷವೂ, ಗೋಳಾಟ ಉತ್ಸವವೂ ಬದಲಾದ ದಿನವಾಗಿಯೂ ಕೊಂಡಾಡುವಂತೆ ಆ ಪತ್ರದಲ್ಲಿ ಬರೆದಿತ್ತು. ಆದ್ದರಿಂದ ಆ ದಿನ ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ, ಬಡವರಿಗೆ ದಾನಗಳನ್ನು ಮಾಡುವ ದಿನವಾಗಿಯೂ ಪಾಲಿಸಬೇಕೆಂದೂ ಆ ಪತ್ರದಲ್ಲಿ ಬರೆದಿತ್ತು.


ಆದಕಾರಣ ಗ್ರಾಮಗಳಲ್ಲಿಯೂ ಬಯಲು ಪ್ರಾಂತಗಳ ಪಟ್ಟಣಗಳಲ್ಲಿಯೂ ವಾಸವಾಗಿರುವ ಯೆಹೂದ್ಯರು ಆದಾರ್ ಮಾಸದ ಹದಿನಾಲ್ಕನೆಯ ದಿನವನ್ನು ಶುಭದಿನವಾಗಿಯೂ, ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ ಆಚರಿಸಿದರು.


ಇದಲ್ಲದೆ ಎಜ್ರನು ಅವರಿಗೆ, “ನೀವು ಹೋಗಿ ಒಳ್ಳೆಯ ಆಹಾರವನ್ನು ತಿಂದು, ಸಿಹಿಯಾದದ್ದನ್ನು ಕುಡಿಯಿರಿ, ತಮಗಾಗಿ ಸಿದ್ಧಮಾಡಿಕೊಳ್ಳದವರಿಗೆ ಒಂದು ಪಾಲನ್ನು ಕಳುಹಿಸಿಕೊಡಿರಿ. ಈ ದಿನವು ನಮ್ಮ ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ನೀವು ವ್ಯಥೆಪಡಬೇಡಿರಿ. ಯೆಹೋವ ದೇವರ ಆನಂದವೇ ನಿಮ್ಮ ಬಲ,” ಎಂದು ಹೇಳಿದನು.


ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ; ಆತನು ಅವನ ಉಪಕಾರಕ್ಕಾಗಿ ಪ್ರತ್ಯುಪಕಾರ ಮಾಡುವನು.


ಮೋಡಗಳು ಮಳೆಯಿಂದ ತುಂಬಿದ್ದರೆ, ಅವು ಭೂಮಿಯ ಮೇಲೆ ಸುರಿದುಬಿಡುತ್ತವೆ. ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ, ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವುದು.


ಒಬ್ಬನು ಅನೇಕ ವರ್ಷಗಳು ಬದುಕಿ, ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಕತ್ತಲೆಯ ದಿನಗಳನ್ನು ನೆನಪಿಸಿಕೊಳ್ಳಲಿ, ಏಕೆಂದರೆ ಅಂಥ ದಿನಗಳು ಬಹಳ. ಮುಂದಾಗುವುದೆಲ್ಲವೂ ವ್ಯರ್ಥವೇ.


ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ,” ಎಂದು ನೀನು ಹೇಳುವ ವರ್ಷಗಳು ಸಮೀಪಿಸುವುದಕ್ಕೆ ಮೊದಲು, ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ದೇವರನ್ನು ಸ್ಮರಿಸು.


ನಿನ್ನ ಸೇವಕರನ್ನು ಕೇಳು. ಅವರು ನಿನಗೆ ಹೇಳುವರು. ಆದ್ದರಿಂದ ಈಗ ಈ ಯುವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಲಿ. ಏಕೆಂದರೆ ಒಳ್ಳೆಯ ದಿವಸದಲ್ಲಿ ಬಂದೆವು. ನಿನ್ನ ಕೈಯಲ್ಲಿ ದೊರಕುವುದನ್ನು ನಿನ್ನ ಸೇವಕರಿಗೂ, ನಿನ್ನ ಪುತ್ರನಾದ ದಾವೀದನಿಗೂ ದಯಪಾಲಿಸು ಎಂದು ಅವನಿಗೆ ಹೇಳಿರಿ,’ ” ಎಂದು ಅವರನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು