Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 12:11 - ಕನ್ನಡ ಸಮಕಾಲಿಕ ಅನುವಾದ

11 ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗಿರುತ್ತವೆ. ಅವರು ಸಂಗ್ರಹಿಸಿದ ವಚನಗಳು ಒಬ್ಬ ಆತ್ಮಿಕ ಕುರುಬನಿಂದ ನೆಟ್ಟ ಮೊಳೆಗಳ ಹಾಗೆ ಕೊಡಲಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು, ಸಂಗ್ರಹ ವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು ಇವೆರಡು ಒಬ್ಬನೇ ಕುರುಬನಿಂದ ಕೊಡಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಜ್ಞಾನಿಗಳ ನುಡಿಗಳು ಮೊನೆಗೋಲುಗಳು, ಅವರು ಸಂಗ್ರಹಿಸಿದ ವಚನಗಳು ಬಿಗಿಯಾಗಿ ಜಡಿದ ಮೊಳೆಗಳು. ಅವುಗಳ ಮೂಲಕರ್ತನು ಎಲ್ಲರ ಏಕೈಕ ಮೇಷಪಾಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು; ಸಂಗ್ರಹವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು; ಒಬ್ಬನೇ ಕರ್ತನಿಂದ ಬಂದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಜ್ಞಾನಿಯ ನುಡಿಗಳು ಪ್ರಾಣಿಗಳನ್ನು ಮುನ್ನಡೆಸುವ ಚಾವಟಿಗಳಂತಿವೆ. ಅವನ ಉಪದೇಶಗಳು ಮುರಿಯದ ಮೊಳೆಗಳಂತಿವೆ. ಅವುಗಳೆಲ್ಲ ಒಬ್ಬನೇ ಕುರುಬನಿಂದ (ದೇವರಿಂದ) ಬಂದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 12:11
21 ತಿಳಿವುಗಳ ಹೋಲಿಕೆ  

ಯಾಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಕ್ರಿಯಾತ್ಮಕವಾದದ್ದು, ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು, ಪ್ರಾಣ ಮತ್ತು ಆತ್ಮಗಳ ಕೀಲು ಮಜ್ಜೆಗಳನ್ನು ವಿಭಾಗಿಸುವಷ್ಟರ ಮಟ್ಟಿಗೆ ಛೇದಿಸುವಂಥದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸಿ ತೀರ್ಪು ನೀಡುವಂಥದ್ದು ಆಗಿದೆ.


ಜನರು ಇದನ್ನು ಕೇಳಿದಾಗ ಅವರಿಗೆ ಹೃದಯದಲ್ಲಿ ಅಲಗು ನೆಟ್ಟಂತಾಗಿ, “ಸಹೋದರರೇ, ನಾವೇನು ಮಾಡಬೇಕು?” ಎಂದು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ ಕೇಳಿದರು.


ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.


“ನನ್ನ ವಾಕ್ಯ ಬೆಂಕಿಗೆ ಸಮಾನ, ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ.” ಇದು ಯೆಹೋವ ದೇವರಾದ ನನ್ನ ನುಡಿ.


ನಾವು ಹೋರಾಡುವಾಗ ಉಪಯೋಗಿಸುವ ಆಯುಧಗಳು ಲೋಕದವುಗಳಲ್ಲ. ಅವುಗಳಿಗೆ ಕೋಟೆಗಳನ್ನೇ ಕೆಡವಿ ಹಾಕುವ ದೈವಿಕ ಶಕ್ತಿ ಇದೆ.


ಯೇಸು ಅವನಿಗೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಇವುಗಳು ತಿಳಿಯುವುದಿಲ್ಲವೋ?


ಅವರು ತಮ್ಮ ಮಂದೆಯನ್ನು ಕುರುಬನಂತೆ ಮೇಯಿಸುವರು. ಕುರಿಮರಿಗಳನ್ನು ಕೂಡಿಸಿ, ಅವುಗಳನ್ನು ತಮ್ಮ ಎದೆಗಪ್ಪಿಕೊಳ್ಳುವರು, ಎಳೆಯ ಮರಿಗಳನ್ನು ಮೆಲ್ಲಗೆ ನಡಿಸುವರು.


ಜ್ಞಾನಿಗಳ ಮಾತುಗಳನ್ನು ಕಿವಿಗೊಟ್ಟು ಕೇಳು; ನನ್ನ ಬೋಧನೆಯನ್ನು ನಿನ್ನ ಹೃದಯವು ಅನ್ವಯಿಸಲಿ.


ಜ್ಞಾನೋಕ್ತಿಗಳನ್ನು, ಸಾಮ್ಯಗಳನ್ನು, ಜ್ಞಾನಿಗಳ ಮಾತು ಹಾಗೂ ಒಗಟುಗಳನ್ನು ಅರ್ಥಮಾಡಿಕೊಳ್ಳಲು ಇವು ಬರೆಯಲಾಗಿವೆ.


“ನಾನೇ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ನನ್ನ ಕುರಿಗಳು ನನ್ನನ್ನು ತಿಳಿದಿವೆ.


ಆದರೆ ಫರಿಸಾಯರು ಹಾಗೂ ಸದ್ದುಕಾಯರಲ್ಲಿ ಅನೇಕರು ದೀಕ್ಷಾಸ್ನಾನಕ್ಕಾಗಿ ಬರುವುದನ್ನು ಕಂಡು, ಯೋಹಾನನು ಅವರಿಗೆ: “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?


ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು. ಅವನು ತನ್ನ ತಂದೆಯ ಮನೆಗೆ ವೈಭವವುಳ್ಳ ಸಿಂಹಾಸನವಾಗಿರುವನು.


ಮಂದೆಯಂತೆ ಯೋಸೇಫ್ಯರನ್ನು ನಡೆಸುವ ಇಸ್ರಾಯೇಲರ ಕುರುಬ ಆಗಿರುವ ದೇವರೇ, ಕಿವಿಗೊಡಿರಿ. ಕೆರೂಬಿಗಳ ಮಧ್ಯದಲ್ಲಿ ಆಸೀನವಾಗಿರುವ ದೇವರೇ ಪ್ರಕಾಶಿಸಿರಿ.


ಯೆಹೋವ ದೇವರು ನನ್ನ ಕುರುಬ ಆಗಿದ್ದಾರೆ, ನನಗೆ ಕೊರತೆಯೇ ಇಲ್ಲ.


ಪ್ರಧಾನ ಕುರುಬ ಆಗಿರುವವರು ಪ್ರತ್ಯಕ್ಷರಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.


ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.


“ಈಗ ನಮ್ಮ ಯೆಹೋವ ದೇವರೇ, ಸ್ವಲ್ಪ ಹೊತ್ತು ನಮಗೆ ದಯೆತೋರಿ ನಮ್ಮ ದಾಸತ್ವದಿಂದ ನಮಗೆ ಬಿಡುಗಡೆ ಕೊಟ್ಟಿದ್ದೀರಿ. ನಮ್ಮ ಕಣ್ಣುಗಳನ್ನು ಬೆಳಗಿಸಿ, ತಮ್ಮ ಪರಿಶುದ್ಧ ಸ್ಥಾನದಲ್ಲಿ ನೆಲೆಗೊಳಿಸುವಂತೆ ಮಾಡಿದ್ದೀರಿ


ಆದರೆ ಅವನ ಬಿಲ್ಲು ಸ್ಥಿರವಾಗಿ ನಿಲ್ಲುವುದು. ಅವನ ಬಲವಾದ ತೋಳುಗಳು ಚುರುಕಾಗಿ ನಿಂತವು. ಇದಕ್ಕೆ ಕಾರಣ ಯಾಕೋಬನಿಗೆ ಸರ್ವಶಕ್ತರಾಗಿರುವ ದೇವರ ಹಸ್ತವೇ; ಇದಕ್ಕೆ ಕಾರಣ ಇಸ್ರಾಯೇಲನ ಬಂಡೆಯಾಗಿರುವ ಕುರುಬ.


ಮೂಢರ ಹಾಡನ್ನು ಕೇಳುವುದಕ್ಕಿಂತ, ಜ್ಞಾನಿಗಳ ಗದರಿಕೆಯನ್ನು ಕೇಳುವುದು ಲೇಸು.


ಜ್ಞಾನಿಯ ಮಾತುಗಳು ಹಿತಕರ. ಆದರೆ ಬುದ್ಧಿಹೀನನ ಮಾತುಗಳು ಅವನಿಗೆ ವಿನಾಶಕರ.


ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ, ಜ್ಞಾನದ ಕೊರತೆಯಿಂದ ಬುದ್ಧಿಹೀನರು ಸಾಯುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು