Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:23 - ಕನ್ನಡ ಸಮಕಾಲಿಕ ಅನುವಾದ

23 ಅವನ ದಿನಗಳೆಲ್ಲಾ ವ್ಯಸನವೇ. ಅವನ ಪ್ರಯಾಸವು ದುಃಖವೇ. ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ವಿಶ್ರಾಂತಿಯಿಲ್ಲ. ಇದೂ ಕೂಡ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವನ ದಿನಗಳೆಲ್ಲಾ ವ್ಯಸನವೇ. ಅವನ ಕೆಲಸವು ತೊಂದರೆಯೇ. ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ವಿಶ್ರಾಂತಿಯಿಲ್ಲ. ಇದೂ ಸಹ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವನ ಮನಸ್ಸಿಗೆ ನೆಮ್ಮದಿ ಇಲ್ಲ, ಇದು ಸಹ ವ್ಯರ್ಥವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವನ ದಿನಗಳೆಲ್ಲಾ ವ್ಯಸನಮಯವೇ, ಅವನ ಕೆಲಸವು ತೊಂದರೆಯೇ; ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ನಿಲುಗಡೆಯಿಲ್ಲ. ಇದೂ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅವನ ಜೀವಮಾನವೆಲ್ಲಾ ಅವನಿಗೆ ವ್ಯಸನವಿರುವುದು; ಕೆಲಸದಲ್ಲೆಲ್ಲಾ ಕಷ್ಟವಿರುವುದು; ರಾತ್ರಿಯಲ್ಲಿಯೂ ಮನಸ್ಸಿಗೆ ವಿಶ್ರಾಂತಿಯಿರದು. ಇದೂ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:23
20 ತಿಳಿವುಗಳ ಹೋಲಿಕೆ  

“ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನೂ, ಕಷ್ಟಸಂಕಟಗಳಿಂದ ತುಂಬಿದವನೂ ಆಗಿದ್ದಾನೆ.


ಆದರೂ ಕಿಡಿಗಳು ಹಾರುವ ಪ್ರಕಾರವೇ, ಮನುಷ್ಯನು ಶ್ರಮೆಹೊಂದಲು ಹುಟ್ಟುತ್ತಾನೆ.


ನೀವು ಆಹಾರಕ್ಕಾಗಿ ಶ್ರಮೆಪಟ್ಟು, ಬೆಳಿಗ್ಗೆ ಬೇಗ ಏಳುವುದೂ, ರಾತ್ರಿ ತಡವಾಗಿ ಮಲಗುವುದೂ ವ್ಯರ್ಥವೇ, ದೇವರು ತಮ್ಮನ್ನು ಪ್ರೀತಿಸುವವರಿಗೆ ನಿದ್ರೆಯಿಂದಿರುವಾಗಲೂ ಅವಶ್ಯಕತೆಗಳನ್ನು ಒದಗಿಸಿಕೊಡುತ್ತಾರೆ.


ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು.


ಆಮೇಲೆ ಅರಸನು ತನ್ನ ಅರಮನೆಗೆ ಹಿಂದಿರುಗಿ, ಉಪವಾಸದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳನ್ನು ಅವನ ಮುಂದೆ ತರಲಿಲ್ಲ. ಅರಸನಿಗೆ ನಿದ್ರೆ ಬರಲಿಲ್ಲ.


ಪ್ರಯಾಸ ಪಡುವವನು ಸ್ವಲ್ಪ ತಿಂದರೂ ಹೆಚ್ಚು ತಿಂದರೂ ಅವನು ಹಾಯಾಗಿ ನಿದ್ರಿಸುತ್ತಾನೆ. ಆದರೆ ಐಶ್ವರ್ಯವಂತನ ಸಮೃದ್ಧಿಯು ಅವನನ್ನು ನಿದ್ರೆ ಮಾಡಗೊಡಿಸದು.


ಏಕೆಂದರೆ ಬಹು ಜ್ಞಾನವಿದ್ದಲ್ಲಿ ಬಹು ಸಂಕಟ, ಹೆಚ್ಚು ತಿಳುವಳಿಕೆ ಇದ್ದಲ್ಲಿ ಹೆಚ್ಚು ವ್ಯಥೆ ಇದೆ.


ನೀವು ನಮ್ಮನ್ನು ಬಾಧಿಸಿದಷ್ಟು ಕಾಲ ಹರ್ಷಗೊಳಿಸಿರಿ. ನಾವು ತೊಂದರೆಯನ್ನು ನೋಡಿದಷ್ಟು ವರ್ಷಗಳು ನಮ್ಮನ್ನು ಸಂತೋಷಪಡಿಸಿರಿ.


ದೇವರೇ, ರಾತ್ರಿ ಹಗಲು ನಿಮ್ಮ ಕೈ ನನ್ನ ಮೇಲೆ ಭಾರವಾಗಿತ್ತು; ನನ್ನ ಬಲವು ಬೇಸಿಗೆಯ ಬಿಸಿಲಿನಲ್ಲಿ ಕುಂದಿಹೋಗುವಂತೆ ಆಯಿತು.


ಆ ರಾತ್ರಿ ಅರಸನಿಗೆ ನಿದ್ರೆ ಬರಲಿಲ್ಲ. ಆದ್ದರಿಂದ ಅರಸನು ಇತಿಹಾಸ ಘಟನೆಗಳನ್ನು ಬರೆದಿಟ್ಟಿದ್ದ ಗ್ರಂಥವನ್ನು ತೆಗೆದುಕೊಂಡು ಬರಲು ಹೇಳಿದನು.


ಯಾಕೋಬನು ಫರೋಹನಿಗೆ, “ನಾನು ಲೋಕದಲ್ಲಿ ಸಂಚಾರಮಾಡಿದ್ದು ನೂರಮೂವತ್ತು ವರುಷಗಳೇ. ನನ್ನ ವರ್ಷಗಳು ಕಡಿಮೆಯಾದರೂ ಕಠಿಣವಾದವುಗಳು ಆಗಿವೆ. ಅವು ನನ್ನ ಪಿತೃಗಳ ಪ್ರಯಾಣದ ವರ್ಷಗಳಿಗೆ ಸಮವಾಗಿಲ್ಲ,” ಎಂದನು.


ಅನಂತರ ದೇವರು ಆದಾಮನಿಗೆ ಹೀಗೆ ಹೇಳಿದರು, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, “ನಿನ್ನ ನಿಮಿತ್ತ ಭೂಮಿಗೆ ಶಾಪ ಬಂತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ದುಡಿದು, ಅದರ ಹುಟ್ಟುವಳಿಯನ್ನು ಉಣ್ಣುವೆ.


ಆಕಾಶದ ಕೆಳಗೆ ನಡೆಯುವ ಕೆಲಸಗಳನ್ನೆಲ್ಲಾ ಜ್ಞಾನದಿಂದ ವಿಚಾರಿಸಿ, ವಿಮರ್ಶಿಸುವುದಕ್ಕೆ ನಾನು ನನ್ನ ಮನಸ್ಸು ಮಾಡಿದೆ. ದೇವರು ಮಾನವರ ಮೇಲೆ ಈ ಕಷ್ಟಕರವಾದ ಪ್ರಯಾಸವನ್ನು ಹೊರಿಸಿದ್ದಾರೆ.


ನನ್ನ ಕೈಗಳು ನಡೆಸಿದವುಗಳೆಲ್ಲವನ್ನೂ ನಾನು ಸಾಧಿಸಲು ಪ್ರಯಾಸಪಟ್ಟದ್ದನ್ನೂ ಪರಿಶೀಲಿಸಿ ನೋಡಿದೆ. ಗಾಳಿಯನ್ನು ಬೆನ್ನಟ್ಟಿದಂತೆ ಎಲ್ಲವೂ ವ್ಯರ್ಥವಾಗಿತ್ತು. ಸೂರ್ಯನ ಕೆಳಗೆ ಯಾವುದೂ ಲಾಭಕರವಾಗಿ ಕಾಣಲಿಲ್ಲ.


ತನ್ನ ಜೀವಮಾನವೆಲ್ಲಾ ಅವನು ಕತ್ತಲೆಯಲ್ಲಿ ಕಳೆಯುತ್ತಾನೆ. ಅವನಿಗೆ ವ್ಯಾಧಿಯೊಂದಿಗೆ ಬಹಳ ವ್ಯಥೆಯೂ ಕ್ರೋಧವೂ ಇರುತ್ತದೆ.


ಜ್ಞಾನವನ್ನು ತಿಳಿದುಕೊಳ್ಳುವುದಕ್ಕೂ ಭೂಮಿಯ ಮೇಲೆ ಮಾಡುವ ಪರಿಶ್ರಮವನ್ನು ನೋಡುವುದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು. ಜನರು ರಾತ್ರಿ ಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ಹಚ್ಚಗೊಡದವರೂ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು