Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:4 - ಕನ್ನಡ ಸಮಕಾಲಿಕ ಅನುವಾದ

4 ನಾನು ಮಹಾ ಯೋಜನೆಗಳನ್ನು ನಡೆಸಿದೆನು: ನಾನು ನನಗಾಗಿ ಮನೆಗಳನ್ನು ಕಟ್ಟಿಸಿಕೊಂಡೆನು. ನಾನು ದ್ರಾಕ್ಷಿತೋಟಗಳನ್ನು ನೆಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಮಹತ್ಕಾರ್ಯಗಳನ್ನು ನಡೆಸಿದೆನು. ಮನೆಗಳನ್ನು ಕಟ್ಟಿಕೊಂಡೆನು ಮತ್ತು ದ್ರಾಕ್ಷಿತೋಟಗಳನ್ನು ನೆಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮಹತ್ಕಾರ್ಯಗಳನ್ನು ಎಸಗಿದೆ; ಮನೆಮಾರುಗಳನ್ನು ಕಟ್ಟಿಸಿಕೊಂಡೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮತ್ತು ವಿಶೇಷ ಕಾರ್ಯಗಳನ್ನು ನಡಿಸಿದೆನು; ಮನೆಗಳನ್ನು ಕಟ್ಟಿಸಿಕೊಂಡೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೊಡ್ಡಕಾರ್ಯಗಳನ್ನು ಮಾಡಲಾರಂಭಿಸಿದೆ; ನನಗೋಸ್ಕರ ಮನೆಗಳನ್ನು ಕಟ್ಟಿಸಿದೆ; ದ್ರಾಕ್ಷಿತೋಟಗಳನ್ನು ಮಾಡಿಸಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:4
17 ತಿಳಿವುಗಳ ಹೋಲಿಕೆ  

ಆಗ ಅರಸನು, “ನಾನು ನನ್ನ ಪರಾಕ್ರಮದ ಬಲದಿಂದಲೂ, ನನ್ನ ಮಹಿಮೆಯ ಕೀರ್ತಿಗಾಗಿಯೂ ಕಟ್ಟಿಸಿದ ಮಹಾ ಬಾಬಿಲೋನು ಇದಲ್ಲವೇ?” ಎಂದನು.


ನನ್ನ ಪ್ರಿಯನ ದ್ರಾಕ್ಷಿತೋಟದ ವಿಷಯವಾದ ಹಾಡನ್ನು ನನ್ನ ಪ್ರಾಣ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದ ಬಳಿಯಲ್ಲಿ ನನ್ನ ಅತಿ ಪ್ರಿಯನಿಗೆ ದ್ರಾಕ್ಷಿ ತೋಟವಿದೆ.


ನಾವು ಬೆಳಗ್ಗೆ ಹೊರಟು, ದ್ರಾಕ್ಷಿ ತೋಟಗಳಿಗೆ ಹೋಗೋಣ ಬಾ. ದ್ರಾಕ್ಷಿ ಚಿಗುರಿದೆಯೋ, ಅದರ ಹೂ ಅರಳಿದೆಯೋ ದಾಳಿಂಬೆ ಹೂಬಿಟ್ಟಿದೆಯೋ ನೋಡೋಣ ಬಾ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಅರ್ಪಿಸುವೆನು.


ನನ್ನ ಪ್ರಿಯನು ನನಗೆ ಏನ್ಗೆದಿಯ ದ್ರಾಕ್ಷಿ ತೋಟಗಳಲ್ಲಿರುವ ಗೋರಂಟಿ ಹೂಗೊಂಚಲಿನಂತೆ ಇರುವನು.


ಜಮೀನುಗಳಿಗೆ ತಮ್ಮ ಹೆಸರುಗಳನ್ನು ಇಟ್ಟುಕೊಳ್ಳುತ್ತಾರೆ. ಆದರೂ ಸಮಾಧಿಯೇ ಅವರಿಗೆ ಶಾಶ್ವತಮಂದಿರವು. ಅದೇ ಅವರ ತಲತಲಾಂತರಕ್ಕೂ ನಿವಾಸಸ್ಥಾನ.


ತಗ್ಗಿನ ದೇಶದಲ್ಲಿಯೂ, ಬಯಲು ದೇಶದಲ್ಲಿಯೂ ಅವನಿಗೆ ಬಹು ಪಶುಗಳಿದ್ದವು. ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಹಾಗೆಯೇ ಪರ್ವತಗಳಲ್ಲಿಯೂ, ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿಗರೂ, ದ್ರಾಕ್ಷಿ ವ್ಯವಸಾಯದವರೂ ಇದ್ದರು. ಏಕೆಂದರೆ ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.


ಸೊಲೊಮೋನನು, “ಯೆಹೋವ ದೇವರ ಒಡಂಬಡಿಕೆಯ ಮಂಜೂಷವಿದ್ದ ಸ್ಥಳಗಳು ಪರಿಶುದ್ಧವಾಗಿರುವುದರಿಂದ, ನನ್ನ ಹೆಂಡತಿಯು ಇಸ್ರಾಯೇಲಿನ ಅರಸನಾದ ದಾವೀದನ ಅರಮನೆಯಲ್ಲಿ ವಾಸವಾಗಿರಕೂಡದು,” ಎಂದು ಹೇಳಿ ಸೊಲೊಮೋನನು ಫರೋಹನ ಮಗಳನ್ನು ದಾವೀದನ ಪಟ್ಟಣದಲ್ಲಿರಿಸದೆ ತಾನು ಆಕೆಗೋಸ್ಕರ ಕಟ್ಟಿಸಿದ ಅರಮನೆಯಲ್ಲಿ ಅವಳನ್ನು ಇರಿಸಿದನು.


ರಾಮಾ ಊರಿನ ಶಿಮ್ಮೀ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳುತ್ತಿದ್ದನು. ದ್ರಾಕ್ಷಿ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಪ್ಮೀಯನಾದ ಜಬ್ದೀ ಜವಾಬ್ದಾರಿಯಾಗಿದ್ದನು.


ಅಲ್ಲದೆ ಅವನಿಗೆ, “ನನ್ನ ತಂದೆ ಮತ್ತು ನಿನ್ನ ತಂದೆಯ ನಡುವೆ ಇದ್ದಂತೆ ನನ್ನ ಮತ್ತು ನಿನ್ನ ನಡುವೆ ಒಡಂಬಡಿಕೆ ಉಂಟು. ಇಗೋ ನಾನು ಬೆಳ್ಳಿಬಂಗಾರವನ್ನು ದಾನವಾಗಿ ನಿನಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ, ನೀನು ಅವನ ಸಂಗಡ ಮಾಡಿದ ಒಡಂಬಡಿಕೆಯನ್ನು ಮುರಿಯಬೇಕು,” ಎಂದನು.


ಸೊಲೊಮೋನನು ಯೆಹೋವ ದೇವರ ಆಲಯವನ್ನೂ, ತನ್ನ ಅರಮನೆಯನ್ನೂ ತಾನು ಬಯಸಿದ್ದೆಲ್ಲವನ್ನೂ ಸಾಧಿಸಿದನು.


ಅಬ್ಷಾಲೋಮನು ಜೀವದಿಂದಿರುವಾಗ, “ನನ್ನ ಹೆಸರನ್ನು ಜ್ಞಾಪಕಾರ್ಥವಾಗಿ ಉಳಿಸಲು ನನಗೆ ಮಗನಿಲ್ಲ,” ಎಂದು ಹೇಳಿ, ಅವನು ತಗ್ಗಿನಲ್ಲಿರುವ ಒಂದು ಕಲ್ಲಿನ ಸ್ತಂಭವನ್ನು ತರಿಸಿ, ಅದನ್ನು ಅರಸನ ಕಣಿವೆಯಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಈ ದಿನದವರೆಗೂ ಅಬ್ಷಾಲೋಮನ ಸ್ಮಾರಕಸ್ತಂಭ ಎಂದು ಕರೆಯಲಾಗುತ್ತದೆ.


ಅನಂತರ ಅವರು, “ಬನ್ನಿರಿ, ನಾವು ಭೂಮಿಯ ಮೇಲೆ ಪಟ್ಟಣವನ್ನು ಕಟ್ಟೋಣ. ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನು ನಮಗೋಸ್ಕರವಾಗಿ ಕಟ್ಟಿಕೊಂಡು, ನಮಗೆ ಹೆಸರು ಸಂಪಾದಿಸಿಕೊಳ್ಳೋಣ. ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರುವುದಕ್ಕೆ ಆಸ್ಪದವಾಗುವದಿಲ್ಲ,” ಎಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು