Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:4 - ಕನ್ನಡ ಸಮಕಾಲಿಕ ಅನುವಾದ

4 ಅಳುವುದಕ್ಕೆ ಒಂದು ಸಮಯ, ನಗುವುದಕ್ಕೆ ಒಂದು ಸಮಯ. ಗೋಳಾಡುವುದಕ್ಕೆ ಒಂದು ಸಮಯ, ಕುಣಿದಾಡುವುದಕ್ಕೆ ಒಂದು ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅಳುವ ಸಮಯ, ನಗುವ ಸಮಯ. ಗೋಳಾಡುವ ಸಮಯ, ಕುಣಿದಾಡುವ ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:4
23 ತಿಳಿವುಗಳ ಹೋಲಿಕೆ  

ಸಂತೋಷ ಪಡುವವರೊಂದಿಗೆ ಸಂತೋಷಪಡಿರಿ, ಅಳುವವರೊಂದಿಗೆ ಅಳಿರಿ.


ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ, ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ.


ಅವರ ಕೋಪವು ಕ್ಷಣಮಾತ್ರವೇ; ಆದರೆ ಅವರ ದಯೆಯು ಜೀವಮಾನವೆಲ್ಲಾ ಇರುತ್ತದೆ; ರಾತ್ರಿಯಲ್ಲಿ ದುಃಖ ಬಂದಿದ್ದರೂ; ಬೆಳಿಗ್ಗೆ ಆನಂದವು ಬರುವುದು.


ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯನ್ನು ಹಿಂಬಾಲಿಸಿ ಹೊರಹೊರಟರು.


ದೈವಿಕ ದುಃಖವು ಪಶ್ಚಾತ್ತಾಪವನ್ನು ತಂದು ರಕ್ಷಣೆಗೆ ನಡೆಸುತ್ತದೆ. ಆ ಪಶ್ಚಾತ್ತಾಪದಲ್ಲಿ ವಿಷಾಧವಿರುವುದಿಲ್ಲ. ಆದರೆ ಪ್ರಾಪಂಚಿಕ ದುಃಖವು ಮರಣಕ್ಕೆ ನಡೆಸುತ್ತದೆ.


ಕರ್ತದೇವರು ತಮ್ಮ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಯವರೂ ಬಂಧುಗಳೂ ಕೇಳಿ, ಆಕೆಯ ಕೂಡ ಸಂತೋಷಪಟ್ಟರು.


“ ‘ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ; ನಾವು ಶೋಕಗೀತೆ ಹಾಡಿದೆವು, ನೀವು ಗೋಳಾಡಲಿಲ್ಲ,’ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ.


ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ದುಃಖಪಡುವುದುಂಟೇ? ಆದರೆ ಮದುಮಗನು ಅಗಲಬೇಕಾಗುವ ದಿವಸಗಳು ಬರುತ್ತವೆ; ಆಗ ಅವರು ಉಪವಾಸ ಮಾಡುವರು.


ಯೆಹೋವ ದೇವರ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ, ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ನೋಡಿ, ಅರಸನಾದ ದಾವೀದನು ಯೆಹೋವ ದೇವರ ಮುಂದೆ ಕುಣಿದಾಡುವುದನ್ನು ಕಂಡು, ತನ್ನ ಹೃದಯದಲ್ಲಿ ಅವನನ್ನು ತಿರಸ್ಕರಿಸಿದಳು.


ಆಗ ಸಾರಳು, “ದೇವರು ನನ್ನನ್ನು ನಗುವಂತೆ ಮಾಡಿದ್ದಾರೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು.


ನೀವು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರುಗಿಸಿದ್ದೀರಿ; ನೀವು ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಹರ್ಷವಸ್ತ್ರವನ್ನು ನನಗೆ ಧರಿಸಿದ್ದೀರಿ.


ಕಲ್ಲುಗಳನ್ನು ಎಸೆಯುವುದಕ್ಕೆ ಒಂದು ಸಮಯ, ಕಲ್ಲುಗಳನ್ನು ಕೂಡಿಸುವುದಕ್ಕೆ ಒಂದು ಸಮಯ. ಅಪ್ಪಿಕೊಳ್ಳುವುದಕ್ಕೆ ಒಂದು ಸಮಯ, ತಡೆದಿರುವುದಕ್ಕೂ ಒಂದು ಸಮಯ.


ಸುಖ ದಿನದಲ್ಲಿ ಸಂತೋಷವಾಗಿರು. ಆದರೆ ದುಃಖ ದಿನದಲ್ಲಿ ಇದನ್ನು ಯೋಚಿಸು: ದೇವರು ಇವುಗಳನ್ನು ಒಂದರ ಮೇಲೊಂದನ್ನು ಬರಮಾಡುತ್ತಾರೆ. ಹೀಗೆ ಮನುಷ್ಯನು ತನ್ನ ಆಯುಸ್ಸನ್ನು ಕಳೆದ ಮೇಲೆ ಭವಿಷ್ಯವನ್ನು ಗ್ರಹಿಸಲಾರನು.


ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾರೆ.


ಯೆರೂಸಲೇಮಿನ ಸಂಗಡ ನೀವು ಮೃದುವಾಗಿ ಮಾತನಾಡಿರಿ. ಅದರ ಕಠಿಣ ಸೇವೆ ತೀರಿತೆಂದೂ, ಅದರ ಪಾಪಕ್ಕೆ ಪ್ರಾಯಶ್ಚಿತ್ತವಾಗಿದೆ, ಎಂದು ಘೋಷಿಸಿರಿ, ಏಕೆಂದರೆ ಅದು ಎಲ್ಲಾ ಪಾಪಗಳಿಗೂ ಯೆಹೋವ ದೇವರ ಕೈಯಿಂದ ಎರಡರಷ್ಟು ಹೊಂದಿದ್ದಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು