Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 4:13 - ಕನ್ನಡ ಸಮಕಾಲಿಕ ಅನುವಾದ

13 ಬುದ್ಧಿಯ ಹೇಳಿಕೆಗೆ ಕಿವಿಗೊಡದ ಮೂಢ ಮುದಿ ಅರಸನಿಗಿಂತ ಬಡವನಾದರೂ ಜ್ಞಾನಿಯಾದ ಒಬ್ಬ ಯುವಕನೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಎಚ್ಚರಿಕೆಯ ಮಾತಿಗೆ ಕಿವಿಗೊಡದ ಮುದಕನೂ, ಮೂಢನೂ ಆದ ಅರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬುದ್ಧಿಮಾತಿಗೆ ಕಿವಿಗೊಡದ ಮೂರ್ಖನಾದ ಮುದಿಯರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಎಚ್ಚರದ ಮಾತಿಗೆ ಕಿವಿಗೊಡುವದನ್ನು ಬಿಟ್ಟ ಮೂರ್ಖನಾದ ಮುದಿಯರಸನಿಗಿಂತ ಜ್ಞಾನಿಯಾದ ಬಡ ಯೌವನಸ್ಥನೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜ್ಞಾನಿಯಾದ ಬಡಯುವಕನು ಎಚ್ಚರದ ಮಾತಿಗೆ ಕಿವಿಗೊಡದ ಮೂಢ ವೃದ್ಧರಾಜನಿಗಿಂತ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 4:13
11 ತಿಳಿವುಗಳ ಹೋಲಿಕೆ  

ಪ್ರವಾದಿಯು ಅರಸನ ಸಂಗಡ ಮಾತನಾಡುತ್ತಿರುವಾಗಲೇ ಅರಸನು ಅವನಿಗೆ, “ಅರಸನ ಆಲೋಚನಾ ಮಂತ್ರಿಯನ್ನಾಗಿ ನಿನ್ನನ್ನು ನೇಮಿಸಿದವರು ಯಾರು? ಸುಮ್ಮನಿರು! ನೀನು ಏಕೆ ಮರಣಹೊಂದಬೇಕೆಂದಿರುವೆ?” ಎಂದನು. ಆಗ ಪ್ರವಾದಿಯು, “ನೀನು ನನ್ನ ಯೋಚನೆಯನ್ನು ಕೇಳದೆ ಇದನ್ನು ಮಾಡಿದ್ದರಿಂದ, ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾರೆಂದು ನಾನು ಬಲ್ಲೆನು,” ಎಂದನು.


ಬುದ್ಧಿಹೀನನ ವಕ್ರ ತುಟಿಗಳಿಗಿಂತ, ನಿರ್ದೋಷವಾಗಿ ನಡೆಯುವ ಬಡವನು ಉತ್ತಮ.


ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರವಾಗಿರುವವನಿಗಿಂತ ನಿರ್ದೋಷಿಯಾಗಿ ನಡೆಯುವ ದರಿದ್ರನು ಶ್ರೇಷ್ಠನು.


ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು.


ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ, ತನ್ನ ಸಹೋದರರ ಸಂಗಡ ಅಂದರೆ, ತನ್ನ ತಂದೆಯ ಹೆಂಡತಿಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಮಕ್ಕಳ ಸಂಗಡ ಕುರಿಮಂದೆಗಳನ್ನು ಕಾಯುತ್ತಿದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.


ಒಬ್ಬಂಟಿಗನ ಮೇಲೆ ಜಯ ಸಾಧಿಸಲು, ಇಬ್ಬರು ಎದುರಾಗಿ ನಿಲ್ಲಬಹುದು. ಆದರೆ ಮೂರು ಹುರಿಯ ಹಗ್ಗವು ಬೇಗನೆ ಕಿತ್ತು ಹೋಗುವುದಿಲ್ಲ.


ಪಟ್ಟಣದ ಹತ್ತು ಮಂದಿ ಅಧಿಕಾರಿಗಳ ಸ್ಥಿರತೆಗಿಂತ, ಜ್ಞಾನವು ಜ್ಞಾನಿಯನ್ನು ಹೆಚ್ಚಾಗಿ ಸ್ಥಿರಪಡಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು