Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 4:14 - ಕನ್ನಡ ಸಮಕಾಲಿಕ ಅನುವಾದ

14 ಆ ಯುವಕನು ಸೆರೆಮನೆಯಿಂದ ರಾಜ್ಯವನ್ನಾಳುವುದಕ್ಕಾಗಿ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಂಥ ಯುವಕನೊಬ್ಬನು ರಾಜನಾಗಲು ಸೆರೆಮನೆಯಿಂದ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಂಥ ಯುವಕನೊಬ್ಬನನ್ನು ರಾಜನನ್ನಾಗಿಸಲು ಸೆರೆಮನೆಯಿಂದ ಕರೆ ತರಲಾಯಿತು. ರಾಜ್ಯದಲ್ಲಿ ಒಬ್ಬ ಬಡ ಪ್ರಜೆಯಾಗಿ ಹುಟ್ಟಿದವನು ಆತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಂಥ ಯುವಕನೊಬ್ಬನು ರಾಜನಾಗಲು ಸೆರೆಮನೆಯಿಂದ ತರಲ್ಪಟ್ಟನು; ಹೌದು, ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ಬಡಯುವಕನು ದೇಶದ ಒಂದು ಬಡಕುಟುಂಬದಲ್ಲಿ ಹುಟ್ಟಿದ್ದಿರಬಹುದು ಅಥವಾ ದೇಶವನ್ನು ಆಳುವುದಕ್ಕಾಗಿ ಸೆರೆಮನೆಯಿಂದ ಬಿಡುಗಡೆ ಮಾಡಲ್ಪಟ್ಟಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 4:14
15 ತಿಳಿವುಗಳ ಹೋಲಿಕೆ  

ಆಗ ಫರೋಹನು ಯೋಸೇಫನನ್ನು ಕರೆತರುವಂತೆ ಸೇವಕರನ್ನು ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.


ದೇವರು ತಗ್ಗಿದವರನ್ನು ಉನ್ನತದಲ್ಲಿಡುತ್ತಾರೆ; ದುಃಖವುಳ್ಳವರನ್ನು ಭದ್ರತೆಗೆ ಒಯ್ಯುತ್ತಾರೆ.


ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಧ್ವನಿ ಉಂಟಾಯಿತು: “ಅರಸನಾದ ನೆಬೂಕದ್ನೆಚ್ಚರನೇ, ನಿನ್ನ ವಿಷಯವಾದ ದೈವೋಕ್ತಿ ಏನೆಂದರೆ: ನಿನ್ನ ರಾಜ್ಯವು ನಿನ್ನಿಂದ ತೆಗೆಯಲಾಗುವುದು.


ಯಾರ ವಿಷಯವಾಗಿ ನಾವು ಅವನ ನೆರಳಿನ ಕೆಳಗೆ ಬೇರೆ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿಕೊಂಡೆವೋ, ನಮ್ಮ ಮೂಗಿನ ಉಸಿರಾದ ಆ ಯೆಹೋವ ದೇವರ ಅಭಿಷಿಕ್ತನು ಅವರ ಬಲೆಗಳಲ್ಲಿ ಸಿಕ್ಕಿಕೊಂಡನು.


ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದರು. ತರುವಾಯ ಅವನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ ಅವನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಆಗ ಯೆಹೂದದ ಅರಸನಾದ ಯೆಹೋಯಾಖೀನನೂ, ಅವನ ತಾಯಿಯೂ, ಅವನ ಸೇವಕರೂ, ಅವನ ಪ್ರಧಾನರೂ, ಅವನ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಶರಣಾದರು. ಬಾಬಿಲೋನಿನ ಅರಸನು ತನ್ನ ಆಳಿಕೆಯ ಎಂಟನೆಯ ವರ್ಷದಲ್ಲಿ ಯೆಹೋಯಾಕೀನನನ್ನು ಸೆರೆಹಿಡಿದನು.


ಯೆಹೋಯಾಕೀಮನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು. ಅವನಿಗೆ ಬದಲಾಗಿ ಅವನ ಮಗ ಯೆಹೋಯಾಖೀನನು ಅರಸನಾದನು.


ಸೂರ್ಯನ ಕೆಳಗೆ ಜೀವಿಸಿ ನಡೆದಾಡಿದವರೆಲ್ಲರೂ ಅರಸನ ಪ್ರತಿಯಾಗಿ ಯುವಕನನ್ನು ಹಿಂಬಾಲಿಸಿದ್ದನ್ನೂ ನಾನು ನೋಡಿದೆನು.


ದೇವರು ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುತ್ತಾರೆ. ಭಿಕ್ಷುಕನನ್ನು ತಿಪ್ಪೆ ಗುಂಡಿಯಿಂದ ತೆಗೆದು ಉನ್ನತಕ್ಕೇರಿಸುವವರೂ ಆಗಿದ್ದಾರೆ. ಅವರನ್ನು ಪ್ರಧಾನರ ಮಧ್ಯದಲ್ಲಿ ಕೂಡ್ರಿಸುತ್ತಾರೆ. ಘನತೆಯ ಸಿಂಹಾಸನವನ್ನು ಬಾಧ್ಯವಾಗಿ ಕೊಡುತ್ತಾರೆ. “ಭೂಮಿಯ ಆಧಾರ ಸ್ತಂಭಗಳು ಯೆಹೋವ ದೇವರದ್ದೇ. ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು