ಪ್ರಸಂಗಿ 5:1 - ಕನ್ನಡ ಸಮಕಾಲಿಕ ಅನುವಾದ1 ದೇವರ ಆಲಯಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂರ್ಖರು ಅರ್ಪಿಸುವ ಯಜ್ಞಕ್ಕಿಂತ, ದೇವರ ಸಮೀಪವಾಗಿದ್ದು ಅವರಿಗೆ ಕಿವಿಗೊಟ್ಟು ಆಲಿಸುವುದು ಲೇಸು. ತಾವು ತಪ್ಪು ಮಾಡುತ್ತಿದ್ದಾರೆಂದು ಮೂಢರಿಗೆ ತಿಳಿಯುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವುದು ಲೇಸು. ತಾವು ತಪ್ಪು ಮಾಡುತ್ತಿದ್ದೇವೆಂಬುದು ಮೂಢರಿಗೆ ಗೊತ್ತೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನೀನು ದೇವಾಲಯವನ್ನು ಪ್ರವೇಶಿಸುವಾಗ ಎಚ್ಚರಿಕೆವಹಿಸು. ಮೂಢರು ಅರ್ಪಿಸುವ ಬಲಿಗಿಂತ ದೇವರ ಸಾನ್ನಿಧ್ಯ ಸೇರಿ ಕಿವಿಗೊಟ್ಟು ಆಲಿಸುವುದು ಲೇಸು. ತಾವು ಮಾಡುವುದು ಸರಿಯಲ್ಲ ಎಂದು ಆ ಮೂಢರಿಗೆ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವದು ಲೇಸು; ತಾವು ಮಾಡುವದು ಅಧರ್ಮವೆಂದು ಮೂಢರಿಗೆ ಗೊತ್ತೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವರನ್ನು ಆರಾಧಿಸಲು ಹೋಗುವಾಗ ಎಚ್ಚರಿಕೆಯಿಂದಿರಿ. ಮೂಢರಂತೆ ಯಜ್ಞಗಳನ್ನು ಅರ್ಪಿಸುವುದಕ್ಕಿಂತ ದೇವರಿಗೆ ಕಿವಿಗೊಡುವುದೇ ಉತ್ತಮ. ಮೂಢರು ದುಷ್ಕೃತ್ಯಗಳನ್ನು ಮಾಡುತ್ತಲೇ ಇರುವರು; ಆದರೆ ಅವರಿಗೆ ಅದು ಗೊತ್ತೇ ಇಲ್ಲ. ಅಧ್ಯಾಯವನ್ನು ನೋಡಿ |
ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡುವವನ ಹಾಗಿದ್ದಾನೆ. ಕುರಿಮರಿಯನ್ನು ಬಲಿ ಕೊಡುವವನು, ನಾಯಿಯ ಕುತ್ತಿಗೆಯನ್ನು ಕಡಿಯುವವನ ಹಾಗಿದ್ದಾನೆ. ಕಾಣಿಕೆಯನ್ನು ಅರ್ಪಿಸುವವನು, ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಹಾಕುವವನು, ವಿಗ್ರಹವನ್ನು ಪೂಜಿಸುವವನ ಹಾಗಿದ್ದಾನೆ. ಹೀಗೆ, ಅವರು ಸ್ವಂತ ಮಾರ್ಗಗಳನ್ನು ಆಯ್ದುಕೊಂಡಿದ್ದಾರೆ. ಅವರ ಪ್ರಾಣವು ಅವರ ಅಸಹ್ಯಗಳಲ್ಲಿ ಹರ್ಷಿಸುತ್ತವೆ.