Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:10 - ಕನ್ನಡ ಸಮಕಾಲಿಕ ಅನುವಾದ

10 ಹಣವನ್ನು ಪ್ರೀತಿಸುವವರಿಗೆ ಎಷ್ಟು ಹಣ ಇದ್ದರೂ ಸಾಕಾಗದು. ಆಸ್ತಿಯನ್ನು ಪ್ರೀತಿಸುವವನು ತನ್ನ ಆದಾಯದಿಂದ ತೃಪ್ತಿಗೊಳ್ಳುವುದಿಲ್ಲ. ಇದೂ ಸಹ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗುವುದಿಲ್ಲ ಮತ್ತು ಸಮೃದ್ಧಿಯನ್ನು ಬಯಸುವವನಿಗೆ ಆದಾಯವೆಷ್ಟಾದರೂ ಸಾಲುವುದಿಲ್ಲ. ಇದೂ ಸಹ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹಣದಾಸೆಯುಳ್ಳವನಿಗೆ ಎಷ್ಟು ಹಣ ಇದ್ದರೂ ತೃಪ್ತಿಯಿಲ್ಲ. ಆಸ್ತಿ ಬಯಸುವವನಿಗೆ ಎಷ್ಟು ಆದಾಯವಿದ್ದರೂ ನೆಮ್ಮದಿಯಿಲ್ಲ. ಇದೂ ಸಹ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗದು; ಸಮೃದ್ಧಿಯನ್ನು ಬಯಸುತ್ತಲೇ ಇರುವವನಿಗೆ ಆದಾಯವೆಷ್ಟಾದರೂ ಸಾಲದು. ಇದು ಸಹ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಹಣದಾಸೆಯುಳ್ಳವನು ತನ್ನಲ್ಲಿ ಎಷ್ಟೇ ಹಣವಿದ್ದರೂ ತೃಪ್ತನಾಗಲಾರನು. ಐಶ್ವರ್ಯದಾಸೆಯುಳ್ಳವನು ಎಷ್ಟೇ ಸಂಪಾದಿಸಿದರೂ ತೃಪ್ತನಾಗುವುದಿಲ್ಲ. ಇದು ಸಹ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:10
21 ತಿಳಿವುಗಳ ಹೋಲಿಕೆ  

ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಬೇರಾಗಿದೆ. ಕೆಲವರು ಹಣಕ್ಕಾಗಿ ಆತುರಪಟ್ಟು ನಂಬಿಕೆಯಿಂದ ದೂರಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ.


ಅನಂತರ ಯೇಸು ಜನರಿಗೆ, “ಎಚ್ಚರಿಕೆ! ನೀವು ಎಲ್ಲಾ ಲೋಭದಿಂದ ನಿಮ್ಮನ್ನು ಕಾಪಾಡಿಕೊಳ್ಳಿರಿ; ಏಕೆಂದರೆ ಜೀವನವು ಸಮೃದ್ಧಿಯಾದ ಆಸ್ತಿಗೆ ಆಧಾರವಾದದ್ದಲ್ಲ,” ಎಂದರು.


“ಭೂಲೋಕದಲ್ಲಿ ನಿಮಗೋಸ್ಕರ ಆಸ್ತಿಪಾಸ್ತಿಯನ್ನು ಕೂಡಿಸಿಡಬೇಡಿರಿ, ಇಲ್ಲಿ ಅದಕ್ಕೆ ನುಸಿ ಮತ್ತು ಕಿಲುಬು ಹಿಡಿದು ಹಾಳಾಗುವುದು ಇಲ್ಲವೆ ಕಳ್ಳರು ಕನ್ನಾಕೊರೆದು ಕದಿಯುವರು.


ಜೊತೆಗಾರನಿಲ್ಲದೆ ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದನು. ಅವನಿಗೆ ಮಗನಾಗಲಿ, ಸಹೋದರನಾಗಲಿ ಇರಲಿಲ್ಲ. ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ತನ್ನ ಸಂಪತ್ತಿನಿಂದ ಅವನ ಕಣ್ಣು ತೃಪ್ತಿ ಹೊಂದಿರಲಿಲ್ಲ. ಅವನು, “ನಾನು ಸುಖಸಂತೋಷವನ್ನು ತೊರೆದು, ಯಾರಿಗೋಸ್ಕರ ಕಷ್ಟಪಡುತ್ತಲೇ ಇದ್ದೇನೆ?” ಎಂದುಕೊಂಡನು. ಇದು ಕೂಡ ವ್ಯರ್ಥವೇ, ಪ್ರಯಾಸದ ಕೆಲಸವೇ ಸರಿ.


ಮನುಷ್ಯನು ಪಡುವ ಎಲ್ಲಾ ಪ್ರಯಾಸವನ್ನೂ ಸಾಧಿಸುವ ಎಲ್ಲಾ ಕಾರ್ಯಗಳನ್ನೂ ನೋಡಿದಾಗ ಇವು ಪರಸ್ಪರ ಮತ್ಸರಕ್ಕೆ ಕಾರಣವೆಂದು ನಾನು ತಿಳಿದುಕೊಂಡೆನು. ಇದು ಕೂಡ ಗಾಳಿಯನ್ನು ಬೆನ್ನಟ್ಟಿದ ಹಾಗೆ ವ್ಯರ್ಥವೇ.


ಅನ್ಯಾಯದ ಸುಲಿಗೆಯಲ್ಲಿ ಭರವಸೆ ಇಡಬೇಡಿರಿ. ಸೂರೆಮಾಡಿದ್ದರಲ್ಲಿ ಗರ್ವಪಡಬೇಡಿರಿ. ಆಸ್ತಿಯು ಹೆಚ್ಚಾದರೆ ಅದರ ಮೇಲೆ ಮನಸ್ಸಿಡಬೇಡಿರಿ.


ಏಕೆಂದರೆ ದೇವರು ಮೆಚ್ಚಿದವರಿಗೆ ಅವರು ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾರೆ. ಆದರೆ ದೇವರು ತಮಗೆ ಮೆಚ್ಚುಗೆಯಾದವನಿಗೆ ಕೊಡತಕ್ಕ ಐಶ್ವರ್ಯವನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ಪಾಪಿಗೆ ಕೊಡುತ್ತಾರೆ. ಏಕೆಂದರೆ ಇದು ಸಹ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


“ಇಗೋ, ದೇವರನ್ನು ತನ್ನ ಬಲವನ್ನಾಗಿ ಮಾಡಿಕೊಳ್ಳದೆ, ತನ್ನ ಅಧಿಕ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡು ಇತರರನ್ನು ನಾಶಮಾಡಿದ ಮನುಷ್ಯನು ಇವನೇ!”


ನನ್ನ ಕೈಗಳು ನಡೆಸಿದವುಗಳೆಲ್ಲವನ್ನೂ ನಾನು ಸಾಧಿಸಲು ಪ್ರಯಾಸಪಟ್ಟದ್ದನ್ನೂ ಪರಿಶೀಲಿಸಿ ನೋಡಿದೆ. ಗಾಳಿಯನ್ನು ಬೆನ್ನಟ್ಟಿದಂತೆ ಎಲ್ಲವೂ ವ್ಯರ್ಥವಾಗಿತ್ತು. ಸೂರ್ಯನ ಕೆಳಗೆ ಯಾವುದೂ ಲಾಭಕರವಾಗಿ ಕಾಣಲಿಲ್ಲ.


ಇವನ ಆಧಿಪತ್ಯಕ್ಕೆ ಒಳಪಟ್ಟ ಜನರ ಸಂಖ್ಯೆಯು ಅಪಾರ. ಆದರೆ ಯುವಕನ ಆಳ್ವಿಕೆಯ ಮುಂಚೆ ಇದ್ದವರು ಮತ್ತು ತರುವಾಯ ಬಂದವರು ಇವನನ್ನು ಮೆಚ್ಚಲಿಲ್ಲ. ಇದು ಸಹ ಗಾಳಿಯನ್ನು ಬೆನ್ನಟ್ಟಿದಂತೆ ವ್ಯರ್ಥವೇ.


ಏಕೆಂದರೆ ಮೃಗಗಳಿಗೆ ಸಂಭವಿಸುವುದು ಮನುಷ್ಯರಿಗೂ ಸಂಭವಿಸುತ್ತದೆ. ಇಬ್ಬರಿಗೂ ಒಂದೇ ಸಂಗತಿ ಸಂಭವಿಸುತ್ತದೆ. ಒಂದು ಹೇಗೆ ಸಾಯುತ್ತದೋ ಹಾಗೆ ಇನ್ನೊಂದೂ ಸಾಯುತ್ತದೆ. ಎಲ್ಲಕ್ಕೂ ಒಂದೇ ಪ್ರಾಣ ಇದೆ. ಆ ರೀತಿಯಲ್ಲಿ ಮೃಗಕ್ಕಿಂತ ಮನುಷ್ಯನಿಗೆ ಹೆಚ್ಚು ಶ್ರೇಷ್ಠತೆ ಇಲ್ಲ. ಎಲ್ಲವೂ ವ್ಯರ್ಥ.


ಪ್ರತಿಯೊಬ್ಬನ ಪ್ರಯಾಸ ಅವನ ಹೊಟ್ಟೆಗಾಗಿಯೇ, ಆದರೆ ಅವನ ಹಸಿವು ತೃಪ್ತಿಹೊಂದುವುದಿಲ್ಲ.


ಆಗ ಜ್ಞಾನವನ್ನೂ ಮನಗುಂದುವಿಕೆಯನ್ನೂ ಬುದ್ಧಿಹೀನತೆಯನ್ನೂ ತಿಳಿದುಕೊಳ್ಳುವಂತೆ ನಾನು ಮನಸ್ಸಿಟ್ಟೆನು, ಅದರ ಜೊತೆಗೆ ಇದು ಸಹ ಗಾಳಿಯನ್ನು ಬೆನ್ನಟ್ಟಿದಂತೆ, ಎಂದು ನಾನು ಅರಿತುಕೊಂಡೆನು.


ಬಲಿಷ್ಠನೇ, ನೀನು ಕೆಟ್ಟತನದಲ್ಲಿ ಹೆಚ್ಚಳ ಪಡುವುದೇಕೆ? ದೇವರ ದೃಷ್ಟಿಯಲ್ಲಿ ಅಪಕೀರ್ತಿಯಾದವನೇ, ದೇವರ ಅನಂತ ಕೃಪೆಯು ಯಾವಾಗಲೂ ಇರುವದು.


ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿವೆ. ಇದನ್ನು ಮನುಷ್ಯನು ವಿವರಿಸಲಾರನು. ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು, ಕೇಳುವುದರಿಂದ ಕಿವಿಯು ದಣಿಯದು.


ನನ್ನ ಕಣ್ಣು ಬಯಸಿದ್ದೆಲ್ಲವನ್ನು ಅದರಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ. ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು. ಇದು ನನ್ನ ಎಲ್ಲಾ ಪ್ರಯಾಸದಿಂದ ನನಗೆ ಬಂದ ಬಹುಮಾನ.


ಭೂಮಿಯಿಂದ ಲಾಭವು ಎಲ್ಲರಿಗೂ ಇದೆ. ಹೊಲಗದ್ದೆಗಳಿಂದ ಅರಸನಿಗೂ ಲಾಭವಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು