Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:2 - ಕನ್ನಡ ಸಮಕಾಲಿಕ ಅನುವಾದ

2 ನೀನು ದುಡುಕಿ ಮಾತನಾಡಬೇಡ, ದೇವರ ಮುಂದೆ ಮಾತನಾಡಲು ನಿನ್ನ ಹೃದಯವು ಆತುರಪಡದೇ ಇರಲಿ. ದೇವರು ಪರಲೋಕದಲ್ಲಿದ್ದಾರೆ. ನೀನಾದರೋ ಭೂಮಿಯ ಮೇಲೆ ಇರುವೆ, ಆದಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ಬಾಯಿಂದ ದುಡುಕಬೇಡ ಮತ್ತು ದೇವರ ಮುಂದೆ ಮಾತನಾಡಲು ನಿನ್ನ ಹೃದಯದಲ್ಲಿ ಆತುರಪಡಬೇಡ. ದೇವರು ಪರಲೋಕದಲ್ಲಿದ್ದಾನೆ. ನೀನು ಭೂಮಿಯಲ್ಲಿದ್ದಿ, ಆದಕಾರಣ ನಿನ್ನ ಮಾತುಗಳು ಕಡಿಮೆಯಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದುಡುಕಿ ಮಾತನಾಡಬೇಡ. ದೇವರ ಸನ್ನಿಧಿಯಲ್ಲಿ ಮಾತುಕೊಡಲು ಆತುರಪಡಬೇಡ. ದೇವರು ಇರುವುದು ಪರಲೋಕದಲ್ಲಿ, ನೀನಿರುವುದಾದರೋ ಭೂಲೋಕದಲ್ಲಿ. ಆದುದರಿಂದ ನಿನ್ನ ಮಾತುಗಳಿಗೆ ಮಿತಿಯಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಬಾಯಿದುಡುಕಬೇಡ, ದೇವರ ಮುಂದೆ ಮಾತಾಡಲು ನಿನ್ನ ಹೃದಯದಲ್ಲಿ ಆತುರಪಡದಿರು; ದೇವರು ಆಕಾಶದಲ್ಲಿದ್ದಾನಲ್ಲವೆ, ನೀನು ಭೂವಿುಯಲ್ಲಿದ್ದೀ; ಆದಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರಿಗೆ ಹರಕೆ ಮಾಡುವಾಗ ಎಚ್ಚರಿಕೆಯಿಂದಿರಿ. ನೀವು ದೇವರೊಂದಿಗೆ ಮಾತಾಡುವಾಗ ಎಚ್ಚರಿಕೆಯಿಂದಿರಿ. ನಿಮ್ಮ ಮನೋದ್ವೇಗಗಳು ನಿಮ್ಮನ್ನು ಮಾತಿನಲ್ಲಿ ದುಡುಕಿಸದಂತೆ ನೋಡಿಕೊಳ್ಳಿ. ದೇವರು ಪರಲೋಕದಲ್ಲಿರುವುದರಿಂದ ಮತ್ತು ನೀವು ಈ ಲೋಕದಲ್ಲಿರುವುದರಿಂದ ನಿಮ್ಮ ಮಾತುಗಳು ಮಿತವಾಗಿರಲಿ. ಈ ನುಡಿ ಸತ್ಯವಾದದ್ದೇ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:2
21 ತಿಳಿವುಗಳ ಹೋಲಿಕೆ  

ಆದರೆ ನೀವು ಪ್ರಾರ್ಥನೆ ಮಾಡುವಾಗ ಯೆಹೂದ್ಯರಲ್ಲದವರಂತೆ ವ್ಯರ್ಥವಾಗಿ ಹೇಳಿದ್ದನ್ನೇ ಪದೇಪದೇ ಹೇಳಬೇಡಿರಿ. ತಮ್ಮ ಅನೇಕ ಮಾತುಗಳ ದೆಸೆಯಿಂದ ತಮ್ಮ ಪ್ರಾರ್ಥನೆಯನ್ನು ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ.


ಅತಿಯಾದ ಮಾತುಗಳಿಂದ ಪಾಪವು ಕೊನೆಗೊಳ್ಳುವುದಿಲ್ಲ. ಆದರೆ ಜ್ಞಾನವಂತನು ತನ್ನ ನಾಲಿಗೆಯನ್ನು ತಡೆಯುವನು.


ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ, ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ, ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.


“ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ: “ ‘ಪರಲೋಕದಲ್ಲಿರುವ ನಮ್ಮ ತಂದೆಯೇ, ನಿಮ್ಮ ನಾಮವು ಪರಿಶುದ್ಧವೆಂದು ಎಣಿಸಲಾಗಲಿ,


ಬಹು ಕನಸುಗಳೂ ಬಹು ಮಾತುಗಳೂ ವ್ಯರ್ಥವಾದವುಗಳು. ಆದ್ದರಿಂದ ನೀನು ದೇವರಿಗೆ ಭಯಪಡು.


ಆಗ ಅಬ್ರಹಾಮನು, “ಇಗೋ, ಮಣ್ಣೂ, ಬೂದಿಯೂ ಆಗಿರುವ ನಾನು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ.


ಏಕೆಂದರೆ ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವುದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ, ಅವನು ಪರಿಪೂರ್ಣನೂ ತನ್ನ ಇಡೀ ದೇಹವನ್ನೇ ಸ್ವಾಧೀನದಲ್ಲಿಟ್ಟುಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.


ಬಹಳ ಚಿಂತೆ ಇದ್ದಾಗಲೂ ಕನಸು ಬರುತ್ತದೆ. ಮೂಢನು ಮಾತಾಡಿದರೆ ಸಾಕು, ಬಹು ಮಾತುಗಳು ಬರುತ್ತವೆ.


ದುಡುಕಿ ಪ್ರತಿಷ್ಠೆಗಾಗಿ ದೇವರಿಗೆ ಹರಕೆ ಮಾಡಿಕೊಂಡು ಆಮೇಲೆ ವಿಚಾರಿಸುವುದು ಉರುಲಾಗಿದೆ.


ಆಗ ಯಾಕೋಬನು ಪ್ರಮಾಣಮಾಡಿ, “ದೇವರು ನನ್ನ ಸಂಗಡ ಇದ್ದು, ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ, ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ ನನಗೆ ಕೊಟ್ಟು,


ನಮ್ಮ ದೇವರು ಪರಲೋಕದಲ್ಲಿದ್ದಾರೆ; ಅವರು ಇಚ್ಛಿಸುವುದನ್ನೆಲ್ಲಾ ಮಾಡುತ್ತಾರೆ.


ಆಗ ಅವನು, “ಯೆಹೋವ ದೇವರೇ, ನಿಮಗೆ ಕೋಪಬಾರದೆ ಇರಲಿ. ಇನ್ನು ಒಂದೇ ಸಾರಿ ಮಾತನಾಡುತ್ತೇನೆ. ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಿದರೆ,” ಎಂದಾಗ, ದೇವರು, “ಹತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವುದಿಲ್ಲ,” ಎಂದರು.


ಅವನು, “ಯೆಹೋವ ದೇವರಿಗೆ ಕೋಪಬಾರದೆ ಇರಲಿ, ನಾನು ಮಾತನಾಡುತ್ತೇನೆ. ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಇದ್ದರೆ,” ಎಂದಾಗ, ದೇವರು, “ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ, ನಾಶಮಾಡುವುದಿಲ್ಲ,” ಎಂದರು.


ಯೆಫ್ತಾಹನು ಯೆಹೋವ ದೇವರಿಗೆ ಒಂದು ಪ್ರಮಾಣವನ್ನು ಮಾಡಿ, “ನೀನು ಅಮ್ಮೋನಿಯರನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ,


“ನೀನೇನು ಕೇಳಿದರೂ ಕೊಡುತ್ತೇನೆ, ನನ್ನ ರಾಜ್ಯದಲ್ಲಿ ಅರ್ಧದಷ್ಟು ಕೇಳಿಕೊಂಡರೂ ಕೊಡುತ್ತೇನೆ,” ಎಂದು ಪ್ರಮಾಣ ಮಾಡಿದನು.


ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವುದು. ಆಗ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ದೇವರಿಗೆ ನಾನು ಖಂಡಿತವಾಗಿ ಕೊಡುವೆನು,” ಎಂದನು.


ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ, ಒಳ್ಳೆಯದನ್ನಾಗಲಿ ಮಾಡುವುದನ್ನು ತನ್ನ ತುಟಿಗಳಿಂದ ಉಚ್ಛರಿಸಿದರೆ, ಒಬ್ಬ ಮನುಷ್ಯನು ಪ್ರಮಾಣದೊಡನೆ ಉಚ್ಚರಿಸಿದ್ದು ಯಾವುದೇ ಆಗಿರಲಿ, ಅದು ಅವನಿಗೆ ತಿಳಿಯದೆ ಇದ್ದು, ತರುವಾಯ ಅದು ಅವನಿಗೆ ತಿಳಿದಾಗ, ಇವುಗಳೊಂದರಲ್ಲಿ ಅವನು ಅಪರಾಧಿಯಾಗಿರುವನು.


ಜ್ಞಾನಿಯ ಮಾತುಗಳು ಹಿತಕರ. ಆದರೆ ಬುದ್ಧಿಹೀನನ ಮಾತುಗಳು ಅವನಿಗೆ ವಿನಾಶಕರ.


ಅವನ ಮಾತುಗಳು ಆರಂಭದಲ್ಲಿ ಮೂಢತನವಾಗಿರುವುದು. ಅವನ ಮಾತಿನ ಅಂತ್ಯವು ಹುಚ್ಚುತನವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು