Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 6:10 - ಕನ್ನಡ ಸಮಕಾಲಿಕ ಅನುವಾದ

10 ಜಗತ್ತಿನಲ್ಲಿ ಇರುವ ಎಲ್ಲದಕ್ಕೂ ಈಗಾಗಲೇ ಹೆಸರನ್ನು ಇಡಲಾಗಿದೆ. ಮನುಷ್ಯನು ಯಾರು ಎಂದೂ ಗೊತ್ತಾಗಿದೆ. ತನಗಿಂತ ಬಲಿಷ್ಟನೊಂದಿಗೆ ಯಾರೂ ಹೋರಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮನುಷ್ಯನು ಎಂಥವನಾದರೂ ಪೂರ್ವದಲ್ಲಿ ಅವನಿಗೆ ವಿಧಿಸಲ್ಪಟ್ಟ ಹೆಸರಿನಿಂದ ಅವನು ಮಣ್ಣಿನವನೇ ಎಂದು ಗೊತ್ತಾಗಿದೆ. ತನಗಿಂತ ಬಲಿಷ್ಠನ ಸಂಗಡ ಹೋರಾಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈಗ ಇರುವ ಪ್ರತಿಯೊಂದು ಹಿಂದಿನಿಂದಲೇ ಹೆಸರುವಾಸಿಯಾಗಿದೆ. ಮನುಷ್ಯನು ಯಾರೆಂದು ಗೊತ್ತಿದೆ. ತನಗಿಂತ ಬಲಿಷ್ಠನ ಸಂಗಡ ವಾದಿಸಲು ಅವನಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮನುಷ್ಯನು ಎಂಥವನಾದರೂ ಪೂರ್ವದಲ್ಲಿ ಅವನಿಗೆ ವಿಧಿಸಲ್ಪಟ್ಟ ಹೆಸರಿನಿಂದ ಅವನು ಮಣ್ಣಿನವನೇ ಎಂದು ಗೊತ್ತಾಗಿದೆ. ತನಗಿಂತ ಬಲಿಷ್ಠನ ಸಂಗಡ ಹೋರಾಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10-11 ಮನುಷ್ಯನು ಕೇವಲ ಮನುಷ್ಯನಾಗಿ ಸೃಷ್ಟಿಸಲ್ಪಟ್ಟಿದ್ದಾನೆ. ಅದರ ಬಗ್ಗೆ ವಾದಮಾಡುವುದರಿಂದ ಉಪಯೋಗವಿಲ್ಲ. ಅಲ್ಲದೆ ಮನುಷ್ಯನು ದೇವರೊಂದಿಗೆ ವಾದಮಾಡಲಾರನು. ಯಾಕೆಂದರೆ ದೇವರು ಮನುಷ್ಯನಿಗಿಂತಲೂ ಬಲಿಷ್ಠನಾಗಿದ್ದಾನೆ. ಆದ್ದರಿಂದ ವಾದವು ಕೇವಲ ನಿರರ್ಥಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 6:10
18 ತಿಳಿವುಗಳ ಹೋಲಿಕೆ  

“ದೇವರು ನನ್ನಂಥ ಕೇವಲ ಮನುಷ್ಯನಲ್ಲ, ನಾನು ದೇವರೊಂದಿಗೆ ವಾದಿಸುವುದು ಹೇಗೆ? ನಾವಿಬ್ಬರೂ ನ್ಯಾಯಾಲಯದ ಮುಂದೆ ಕೂಡಿ ವಾದಿಸುವುದು ಹೇಗೆ?


“ಸರ್ವಶಕ್ತರಾದ ದೇವರೊಂದಿಗೇ ತಪ್ಪು ಕಂಡುಹಿಡಿಯುವ ನೀನು, ದೇವರಿಗೇ ಪಾಠ ಕಲಿಸಿಕೊಡುವೆಯಾ? ದೇವರ ಮೇಲೆಯೇ ಆರೋಪಿಸುವ ನೀನು ಈಗ ಉತ್ತರಕೊಡು!”


“ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು. ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”


ಇರುವಂಥದ್ದು ಈಗಾಗಲೇ ಇತ್ತು, ಬರುವಂಥದ್ದು ಆಗಲೇ ಇದೆ. ಗತಿಸಿಹೋದದ್ದನ್ನು ದೇವರು ಪುನಃಸ್ಥಾಪಿಸುವರು.


ದೇವರು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ಕೊಡಲಿಲ್ಲ ಎಂದು ನೀನು ದೇವರೊಂದಿಗೆ ವ್ಯಾಜ್ಯವಾಡುವುದೇಕೆ?


“ನಿಶ್ಚಯವಾಗಿ ಮನುಷ್ಯನು ಮಾಯಾರೂಪದಿಂದ ನಡೆದಾಡುತ್ತಾನೆ; ಅವನು ಸಡಗರದಿಂದ ಐಶ್ವರ್ಯವನ್ನು ರಾಶಿಯಾಗಿ ಕೂಡಿಸಿಕೊಳ್ಳುತ್ತಾನೆ; ಆದರೆ ಅದನ್ನು ಅನುಭವಿಸುವವರು ಯಾರೋ ಅರಿಯನು.


ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ, ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ;


ಆಗ ಯೆಹೋವ ದೇವರು ಮನುಷ್ಯನನ್ನು ಕರೆದು ಅವನಿಗೆ, “ನೀನು ಎಲ್ಲಿದ್ದೀ?” ಎಂದರು.


ನಾವು ಹೀಗೆ ದೇವರನ್ನು ಅಸೂಯೆಗೆಬ್ಬಿಸಬಹುದೇ? ನಾವು ದೇವರಿಗಿಂತಲೂ ಬಲಿಷ್ಠರಾಗಿದ್ದೇವೆಯೋ?


ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.


ಮಾತು ಹೆಚ್ಚಿದಷ್ಟೂ, ಕಡಿಮೆ ಅರ್ಥೈಸುತ್ತವೆ, ಅದರಿಂದ ಯಾರಿಗೆ ಏನು ಲಾಭ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು