Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 6:12 - ಕನ್ನಡ ಸಮಕಾಲಿಕ ಅನುವಾದ

12 ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ಎಲ್ಲಾ ದಿವಸಗಳಲ್ಲಿ ಅವನಿಗೆ ಯಾವುದು ಒಳ್ಳೆಯದೆಂದು ಯಾರಿಗೆ ಗೊತ್ತು? ಅವನು ಹೊರಟುಹೋದ ಮೇಲೆ ಸೂರ್ಯನ ಕೆಳಗೆ ಏನಾಗುತ್ತದೆಂದು ಅವನಿಗೆ ಯಾರು ಹೇಳಬಲ್ಲರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಮೇಲೆಂದು ಯಾರಿಗೆ ಗೊತ್ತು? ತಾನು ಸತ್ತುಹೋದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮಾನವನ ಜೀವಮಾನ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಹಿತವೆಂದು ಯಾರಿಗೆ ಗೊತ್ತು? ತಾನು ಕಾಲವಾದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಳ್ಳಲು ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವದು ಮೇಲೆಂದು ಯಾರಿಗೆ ಗೊತ್ತು? ತಾನು ಕಾಲವಾದ ಮೇಲೆ ಇಹಲೋಕದಲ್ಲಿ ಏನಾಗುವದೆಂದು ಅವನು ಯಾರಿಂದ ತಿಳಿದುಕೊಂಡಾನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮನುಷ್ಯನ ಅಲ್ಪಕಾಲದ ಜೀವನದಲ್ಲಿ ಅವನಿಗೆ ಯಾವುದು ಉತ್ತಮವೆಂದು ಯಾರಿಗೆ ಗೊತ್ತು? ಅವನ ಜೀವನವು ನೆರಳಿನಂತೆ ಕಳೆದುಹೋಗುವುದು. ಮುಂದೆ ಏನಾಗುವುದೆಂದು ಯಾರೂ ಅವನಿಗೆ ಹೇಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 6:12
28 ತಿಳಿವುಗಳ ಹೋಲಿಕೆ  

ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.


ಆದಕಾರಣ ಮನುಷ್ಯನು ತನ್ನ ಕೆಲಸ ಕಾರ್ಯಗಳಲ್ಲಿ ಆನಂದಿಸುವುದಕ್ಕಿಂತ ಉತ್ತಮವಾದದ್ದು ಯಾವುದೂ ಇಲ್ಲವೆಂದು ನಾನು ನೋಡಿದೆನು. ಏಕೆಂದರೆ ಇದೇ ಅವನ ಪಾಲು. ಆದ್ದರಿಂದ ತನ್ನ ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?


ಅವನು ಹೂವಿನ ಹಾಗೆ ಅರಳಿ ಬಾಡುವನು; ಅವನು ನೆರಳಿನಂತೆ ಓಡಿಹೋಗುತ್ತಾನೆ, ಶಾಶ್ವತವಾಗಿರುವದಿಲ್ಲ.


ಮನುಷ್ಯನು ಕೇವಲ ಉಸಿರಿನಂತಿದ್ದಾನೆ; ಅವನ ದಿವಸಗಳು ಅಳಿದು ಹೋಗುವ ನೆರಳಿನ ಹಾಗಿವೆ.


ದುಷ್ಟರು ದೇವರಿಗೆ ಭಯಪಡುವುದಿಲ್ಲ. ಆದ್ದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ. ನೆರಳಿನ ಹಾಗಿರುವ ದುಷ್ಟರ ದಿನಗಳು ಹೆಚ್ಚುವುದಿಲ್ಲ.


ಏಕೆಂದರೆ ಮುಂದೆ ಆಗುವುದೇನೆಂದು ಯಾರಿಗೂ ತಿಳಿಯದು. ಮುಂದೆ ಏನಾಗುವುದೆಂದು ಮನುಷ್ಯನಿಗೆ ತಿಳಿಸುವವರು ಯಾರು ಇಲ್ಲ.


ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯದವರೂ ಆಗಿದ್ದೇವೆ; ಏಕೆಂದರೆ ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿನಂತಿವೆ.


ನಿಮ್ಮ ಕೈಯಿಂದಲೇ ನಿಮಗೆ ಅರ್ಪಿಸಿದೆವು. ಏಕೆಂದರೆ ನಾವು ನಿಮ್ಮ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ, ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಇವೆ; ನಿರೀಕ್ಷೆಯು ಇಲ್ಲ.


ಈಗ ನಾವು ಎಲ್ಲಾ ವಿಷಯವನ್ನೂ ಕೇಳಿ ಮುಗಿಯಿತು. ದೇವರಿಗೆ ಭಯಪಡು ಮತ್ತು ದೇವರ ಆಜ್ಞೆಗಳನ್ನು ಪಾಲಿಸು. ಇದೇ ಮನುಷ್ಯನ ಪ್ರಮುಖ ಕರ್ತವ್ಯ.


ಅವರ ಪ್ರೀತಿಯೂ ಅವರ ದ್ವೇಷವೂ ಅವರ ಅಸೂಯೆ ಕೂಡ, ಅವರು ಸತ್ತಾಗಲೇ ಅಳಿದುಹೋಗುತ್ತವೆ. ಸೂರ್ಯನ ಕೆಳಗೆ ನಡೆಯುವ ಯಾವ ಸಂಗತಿಗಳಲ್ಲಿಯೂ ಸತ್ತವರಿಗೆ ಇನ್ನೆಂದಿಗೂ ಪಾಲು ಇಲ್ಲ.


ಆಕಾಶದ ಕೆಳಗೆ ಮನುಷ್ಯರು ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಹಿತ ಎಂದು ನಾನು ತಿಳಿದುಕೊಳ್ಳಲು ಬಯಸಿದೆ. ನನ್ನ ಮನಸ್ಸು ಇನ್ನೂ ಜ್ಞಾನದಿಂದಿರುವಾಗಲೇ ದ್ರಾಕ್ಷಾರಸದಿಂದ ಸಂತೋಷ ಪಡೋಣ, ಮೂರ್ಖತನವನ್ನು ಅಪ್ಪಿಕೊಳ್ಳೋಣ ಎಂದುಕೊಂಡೆ.


ನಾನು ಇಳಿಯುವ ನೆರಳಿನ ಹಾಗೆ ಆಗಿದ್ದೇನೆ; ಮಿಡತೆಯ ಹಾಗೆ ಹಾರಾಡುತ್ತಿದ್ದೇನೆ.


ನನ್ನ ದಿವಸಗಳು ಸಾಯಂಕಾಲದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತಿದ್ದೇನೆ.


ನಾನಾದರೋ ನೀತಿಯಲ್ಲಿ ನಿಮ್ಮ ಮುಖವನ್ನು ನೋಡುವೆನು. ನಾನು ಎಚ್ಚೆತ್ತಾಗ ನಿಮ್ಮ ಹೋಲಿಕೆಯನ್ನೇ ಕಂಡು ತೃಪ್ತನಾಗುವೆನು.


ಯೆಹೋವ ದೇವರೇ, “ನಮಗೆ ಒಳ್ಳೆಯದನ್ನು ಮಾಡುವವರು ಯಾರು?” ಎಂದು ಕೇಳುವವರು ಅನೇಕರಿದ್ದಾರೆ. ನಿಮ್ಮ ಮುಖಪ್ರಕಾಶವು ನಮ್ಮ ಮೇಲೆ ಬೆಳಗಲಿ.


ಮಕ್ಕಳು ಘನತೆಯನ್ನು ಹೊಂದಿದರೆ, ಅದು ಸತ್ತವರಿಗೆ ತಿಳಿಯುವುದಿಲ್ಲ; ಅವರ ಮಕ್ಕಳು ಕಡಿಮೆ ಸ್ಥಿತಿಗೆ ಬಂದರೆ ಸಹ, ಅದನ್ನು ಸತ್ತವರು ಗ್ರಹಿಸಿಕೊಳ್ಳುವುದಿಲ್ಲ.


ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ. ಹೌದು, ನ್ಯಾಯವನ್ನು ಕೈಗೊಳ್ಳುವದೂ ಕರುಣೆಯನ್ನು ಪ್ರೀತಿಸುವುದೂ ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ?


ನನ್ನ ಆಯುಸ್ಸು ಎಷ್ಟು ಕಡಿಮೆ ಎಂದು ಜ್ಞಾಪಕಮಾಡಿಕೊಳ್ಳಿರಿ. ನಿರ್ಮಿಸಿದ ಎಲ್ಲಾ ಮನುಷ್ಯರೂ ವ್ಯರ್ಥವಾಗಿದ್ದಾರೆ.


ಅವರು ಪ್ರೀತಿಸುವ ಯಾಕೋಬಿನ ಘನತೆಯಾಗಿರುವ ನಮ್ಮ ಬಾಧ್ಯತೆಯನ್ನು ನಮಗಾಗಿ ಆಯ್ದುಕೊಂಡಿದ್ದಾರೆ.


ಯೆಹೋವ ದೇವರೇ, ನೀವೇ ನನ್ನ ಪಾಲೂ, ನನ್ನ ಪಾತ್ರೆಯೂ ಆಗಿದ್ದೀರಿ; ನನ್ನ ಸ್ವಾಸ್ತ್ಯವನ್ನು ಸುರಕ್ಷಿತವಾಗಿ ಇಡುವವರು ನೀವೇ.


ಒಬ್ಬ ವ್ಯಕ್ತಿ ತನ್ನ ಪ್ರಯಾಸದಲ್ಲಿ ತೃಪ್ತಿಹೊಂದುವಂತೆ ತಿಂದು ಕುಡಿಯುವುದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವುದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.


ಮಾತು ಹೆಚ್ಚಿದಷ್ಟೂ, ಕಡಿಮೆ ಅರ್ಥೈಸುತ್ತವೆ, ಅದರಿಂದ ಯಾರಿಗೆ ಏನು ಲಾಭ?


ನನ್ನ ವ್ಯರ್ಥದ ದಿನಗಳಲ್ಲಿ ಇವೆರಡು ವಿಷಯಗಳನ್ನು ನೋಡಿದ್ದೇನೆ: ನೀತಿವಂತನು ತನ್ನ ನೀತಿಯಲ್ಲಿ ಗತಿಸಿಹೋಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ, ಇಡೀ ಜೀವಮಾನವನ್ನು ಕಳೆಯುತ್ತಾನೆ.


ಈ ನಿರರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ದೇವರು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ, ನೀನು ಪ್ರೀತಿಸುವ ನಿನ್ನ ಹೆಂಡತಿಯೊಡನೆ ಆನಂದದಿಂದ ವಾಸಿಸು. ಸೂರ್ಯನ ಕೆಳಗೆ ನೀನು ಪಡುವ ನಿನ್ನ ಜೀವನದ ಕಷ್ಟದಲ್ಲಿ ಇದೇ ನಿನ್ನ ಪಾಲಾಗಿದೆ.


ಮೂಢನು ಮಾತುಗಳನ್ನು ಹೆಚ್ಚಿಸುತ್ತಾನೆ. ಆದರೂ ಅವನು ಭವಿಷ್ಯ ಏನೆಂದು ತಿಳಿಯನು. ಅವನ ತರುವಾಯ ಆಗುವುದನ್ನೂ ಅವನಿಗೆ ತಿಳಿಸುವವರು ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು