Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 6:6 - ಕನ್ನಡ ಸಮಕಾಲಿಕ ಅನುವಾದ

6 ಒಂದು ವೇಳೆ ಎರಡು ಸಾವಿರ ವರ್ಷಗಳು ಆ ಮನುಷ್ಯನು ಬದುಕಿದರೂ ಅವನು ತನ್ನ ಐಶ್ವರ್ಯವನ್ನು ಅನುಭವಿಸದಿದ್ದರೆ ಏನು ಪ್ರಯೋಜನ? ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಎರಡು ಸಾವಿರ ವರ್ಷ ಅವನು ಬದುಕಿದರೂ ಅವನು ತನ್ನ ಐಶ್ವರ್ಯವನ್ನು ಅನುಭವಿಸಲಿಲ್ಲ. ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಾವಿರ ವರ್ಷದ ಮೇಲೆ ಸಾವಿರ ವರ್ಷ ಬದುಕಿಯೂ ಸುಖವನ್ನು ಅನುಭವಿಸದಿದ್ದರೆ ಏನು ಪ್ರಯೋಜನ? ಇವೆರಡೂ ಒಂದೇ ಸ್ಥಳಕ್ಕೆ ಹೋಗುತ್ತವೆ, ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸಾವಿರದ ಮೇಲೆ ಸಾವಿರ ವರುಷ ಬದುಕಿಯೂ ಸುಖವನ್ನು ಅನುಭವಿಸದಿದ್ದರೆ [ಏನು ಪ್ರಯೋಜನ?] ಇವೆರಡು ಒಂದೇ ಸ್ಥಳಕ್ಕೆ ಹೋಗುತ್ತವಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವನು ಎರಡು ಸಾವಿರ ವರ್ಷಗಳ ಕಾಲ ಬದುಕಿಯೂ ಜೀವನದಲ್ಲಿ ಸಂತೋಷಪಡದಿದ್ದರೆ ಏನು ಪ್ರಯೋಜನ? ಆ ಮಗುವೂ ಅವನೂ ಕತ್ತಲೆ ಗುಂಡಿಗೇ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 6:6
18 ತಿಳಿವುಗಳ ಹೋಲಿಕೆ  

ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ. ಎಲ್ಲವೂ ಮಣ್ಣಿನಿಂದ ಆದವು. ಎಲ್ಲವೂ ಮಣ್ಣಿಗೆ ಸೇರುತ್ತವೆ.


ಒಂದೇ ಸಾರಿ ಸಾಯುವುದೂ ತರುವಾಯ ನ್ಯಾಯತೀರ್ಪು ಪಡೆಯುವುದೂ ಮನುಷ್ಯರಿಗಾಗಿ ನೇಮಕವಾಗಿದೆ.


ದೇವರೇ, ನೀವು ನನ್ನನ್ನು ಎಲ್ಲಾ ಜೀವಿಗಳಿಗೆ ನೇಮಕವಾದ ಮನೆಯೆಂಬ ಮರಣಕ್ಕೆ, ಸೇರಿಸುವಿರಿ ಎಂದು ನನಗೆ ಗೊತ್ತಿದೆ.


ಅವನು ಅಡವಿಯಲ್ಲಿರುವ ಜಾಲಿ ಗಿಡದ ಹಾಗಿರುವನು. ಒಳ್ಳೆಯದು ಬರುವಾಗ ನೋಡದೆ ಇರುವನು. ನಿವಾಸಿಗಳಿಲ್ಲದ ಚೌಳು ನೆಲವಾಗಿರುವ ಮರುಭೂಮಿಯ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.


ಅವರು ಕಟ್ಟಿದ ಮನೆಗಳಲ್ಲಿ ಬೇರೆಯವರು ವಾಸಮಾಡುವುದಿಲ್ಲ. ಅವರು ನೆಟ್ಟ ತೋಟದ ಫಲವನ್ನು ಇನ್ನೊಬ್ಬರು ತಿನ್ನುವುದಿಲ್ಲ. ಏಕೆಂದರೆ, ಮರಗಳ ಹಾಗೆ ನನ್ನ ಜನರು ಬಹುಕಾಲ ಬಾಳುವರು. ನಾನು ಆಯ್ದುಕೊಂಡವರು ತಮ್ಮ ಕೈಕೆಲಸಗಳನ್ನು ಅನುಭವಿಸುವರು.


“ಅಲ್ಲಿ ಕೆಲವು ದಿನಗಳು ಮಾತ್ರ ಬದುಕತಕ್ಕ ಕೂಸೂ, ವೃದ್ಧನೂ ಇರುವುದಿಲ್ಲ. ಮಗುವು ನೂರು ವರುಷದವನಾಗಿ ಸಾಯುವುದು. ಆದರೆ ನೂರು ವರುಷವನ್ನು ತಲುಪಲು ವಿಫಲನಾದವನನ್ನು ಶಾಪಗ್ರಸ್ತ ಎಂದು ಪರಿಗಣಿಸಲಾಗುತ್ತದೆ.


ಆಮೇಲೆ ಮಣ್ಣಿನ ದೇಹ ಅದು ಇದ್ದ ಹಾಗೆಯೇ ಭೂಮಿಗೆ ಸೇರುವುದು. ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂದಿರುಗುವುದು.


ಒಬ್ಬ ಮನುಷ್ಯನಿಗೆ ನೂರು ಮಕ್ಕಳಿರಬಹುದು ಮತ್ತು ಅವನು ಬಹಳ ವರ್ಷ ಬದುಕಿರಬಹುದು. ಅವನು ತನ್ನ ಐಶ್ವರ್ಯವನ್ನು ಅನುಭವಿಸದೆ, ಸರಿಯಾದ ಶವಸಂಸ್ಕಾರ ಇಲ್ಲದೆ ಹೋದರೆ ಅವನಿಗಿಂತಲೂ ಮೃತ ಸ್ಧಿತಿಯಲ್ಲಿ ಹುಟ್ಟಿರುವ ಕೂಸೇ ಮೇಲು ಎಂದುಕೊಂಡೆ.


ನಿಮ್ಮಲ್ಲಿ ಜೀವನವನ್ನು ಪ್ರೀತಿಸುವವನು ಮತ್ತು ಬಹಳ ದಿನಗಳವರೆಗೆ ಬದುಕಬೇಕೆ?


ಓ ದೇವರೇ, ನನ್ನ ಜೀವವು ಕೇವಲ ಉಸಿರೆಂದು ನೆನಪುಮಾಡಿಕೊಳ್ಳಿರಿ. ನನ್ನ ಕಣ್ಣು ತಿರುಗಿ ಸಂತೋಷವನ್ನು ಕಾಣುವುದಿಲ್ಲ.


ಹೀಗೆ ಹೇಳಿದನು: “ಬೆತ್ತಲೆಯಾಗಿ ನನ್ನ ತಾಯಿಯ ಗರ್ಭದಿಂದ ಬಂದೆನು, ಬೆತ್ತಲೆಯಾಗಿ ಗತಿಸಿ ಹೋಗುವೆನು. ಯೆಹೋವ ದೇವರು ಕೊಟ್ಟರು, ಯೆಹೋವ ದೇವರು ತೆಗೆದುಕೊಂಡರು; ಯೆಹೋವ ದೇವರ ನಾಮಕ್ಕೆ ಸ್ತೋತ್ರವಾಗಲಿ.”


ಆದಾಮನು ಒಟ್ಟು ಒಂಬೈನೂರ ಮೂವತ್ತು ವರುಷ ಬದುಕಿ ಸತ್ತನು.


ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುತ್ತದೆ. ಆದರೆ ಮೂಢನು ಕತ್ತಲೆಯಲ್ಲಿ ನಡೆಯುತ್ತಾನೆ. ಇವರಿಬ್ಬರಿಗೂ ಒಂದೇ ಗತಿಯು ಸಂಭವಿಸುವುದೆಂದೂ ನಾನು ಗ್ರಹಿಸಿಕೊಂಡೆನು.


ಇದಲ್ಲದೆ ಅದು ಸೂರ್ಯನನ್ನು ನೋಡಲಿಲ್ಲ, ಯಾವುದನ್ನು ಅರಿತಿರಲಿಲ್ಲ. ಆದರೂ ಅದು ಆ ಮನುಷ್ಯನಿಗಿಂತ ಹೆಚ್ಚು ವಿಶ್ರಾಂತಿ ಹೊಂದಿದೆ.


ಔತಣದ ಮನೆಗೆ ಹೋಗುವುದಕ್ಕಿಂತ, ಶೋಕದ ಮನೆಗೆ ಹೋಗುವುದು ಲೇಸು. ಏಕೆಂದರೆ ಎಲ್ಲಾ ಮನುಷ್ಯರ ಅಂತ್ಯವು ಸಾವಾಗಿದೆ. ಇದರಿಂದ ಜೀವಂತರು ಇದನ್ನು ತಮ್ಮ ಹೃದಯದಲ್ಲಿ ಸ್ಮರಿಸಿಕೊಳ್ಳುವರು.


ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ದುಷ್ಟನಿಗೂ ಒಳ್ಳೆಯವನಿಗೂ ಕೆಟ್ಟವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಯಜ್ಞ ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನಿಗೆ ಹೇಗೋ ಹಾಗೆಯೇ ಪಾಪಿಗೂ ಇರುವುದು. ಆಣೆಯಿಡುವವನಿಗೆ ಹೇಗೋ ಹಾಗೆಯೇ, ಆಣೆಯಿಡಲು ಭಯಪಡುವವನಿಗೂ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು