Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:1 - ಕನ್ನಡ ಸಮಕಾಲಿಕ ಅನುವಾದ

1 ಅಮೂಲ್ಯವಾದ ಸುಗಂಧ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ. ಒಬ್ಬನ ಜನ್ಮ ದಿನಕ್ಕಿಂತ ಮರಣದ ದಿನವೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸುಗಂಧತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ, ಮತ್ತು ಜನನ ದಿನಕ್ಕಿಂತ ಮರಣ ದಿನವೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸುಗಂಧ ತೈಲಕ್ಕಿಂತ ಒಳ್ಳೆಯ ಹೆಸರು ಲೇಸು, ಜನನದ ದಿನಕ್ಕಿಂತ ಮರಣದ ದಿನ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸುಗಂಧತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸುಗಂಧತೈಲಕ್ಕಿಂತಲೂ ಒಳ್ಳೆಯ ಹೆಸರೇ ಉತ್ತಮ. ಜನನ ದಿನಕ್ಕಿಂತಲೂ ಮರಣ ದಿನವೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:1
23 ತಿಳಿವುಗಳ ಹೋಲಿಕೆ  

ಪರಲೋಕದಿಂದ ಒಂದು ಧ್ವನಿಯು ನನಗೆ, “ಇಂದಿನಿಂದ ಕರ್ತರಲ್ಲಿ ವಿಶ್ವಾಸವುಳ್ಳವರು ಧನ್ಯರು ಎಂಬುದಾಗಿ ಬರೆ!” ಎಂದು ಹೇಳಿತು. ಅದಕ್ಕೆ ಪವಿತ್ರಾತ್ಮ ದೇವರು, “ಹೌದು, ಅವರ ಪ್ರಯಾಸಗಳು ತೀರಿದವು ಅವರಿಗೆ ವಿಶ್ರಾಂತಿಯಾಗುವುದು, ಅವರ ಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ!” ಎಂದು ಹೇಳುತ್ತಾರೆ.


ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ; ಬೆಳ್ಳಿಬಂಗಾರಕ್ಕಿಂತಲೂ ಗೌರವದಿಂದಿರುವುದು ಉತ್ತಮ.


ಆದಕಾರಣ ನಾನು ಇದನ್ನು ನೋಡಿ ಜೀವದಿಂದ ಇರುವವರಿಗಿಂತ, ಮೃತಪಟ್ಟವರೇ ಮೇಲು ಎಂದು ನಾನು ತೀರ್ಮಾನಿಸಿದೆ.


ನಮ್ಮ ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವುದು ಉತ್ತಮವೆಂದು ಆಶಿಸಿ, ಅದರಲ್ಲಿ ಭರವಸೆ ಉಳ್ಳವರಾಗಿರುತ್ತೇವೆ.


ನಾವು ಜೀವಿಸುತ್ತಿರುವ ನಮ್ಮ ದೇಹವೆಂಬ ಗುಡಾರವು ನಾಶವಾಗಿ ಹೋದರೂ, ಪರಲೋಕದಲ್ಲಿ ಶಾಶ್ವತವಾದ ನಿವಾಸವು ನಮಗೆ ಉಂಟೆಂದು ಬಲ್ಲೆವು. ಅದು ಮಾನವರ ಕೈಯಿಂದ ಕಟ್ಟಿದ ನಿವಾಸವಲ್ಲ, ದೇವರಿಂದಲೇ ನಿರ್ಮಿತವಾದದ್ದಾಗಿದೆ.


ನೀನು ಹಚ್ಚಿಕೊಂಡಿರುವ ಸುಗಂಧ ತೈಲದ ಪರಿಮಳವು ಮೆಚ್ಚಿಕೆಯಾಗಿದೆ. ನಿನ್ನ ಹೆಸರು ಸುರಿದ ಸುಗಂಧ ತೈಲವಾಗಿದೆ. ಆದ್ದರಿಂದ ಕನ್ಯೆಯರು ನಿನ್ನನ್ನು ಪ್ರೀತಿ ಮಾಡುತ್ತಾರೆ!


ಸತ್ತ ನೊಣಗಳು ಸುಗಂಧ ತೈಲವನ್ನು ದುರ್ವಾಸನೆಗೆ ಒಳಪಡಿಸುತ್ತದೆ. ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮಾನಗಳನ್ನು ಕೆಡಿಸಿಬಿಡುತ್ತದೆ.


ತೈಲವೂ ಸುಗಂಧದ್ರವ್ಯವೂ ಹೃದಯವನ್ನು ಸಂತೋಷಪಡಿಸುವ ಹಾಗೆ, ಆದರಣೆಯ ಸಲಹೆಯೂ ಸ್ನೇಹಿತನಿಗೆ ಮಧುರವಾಗಿರುತ್ತದೆ.


ನನ್ನ ಆಲಯದಲ್ಲಿಯೂ ಗೋಡೆಗಳ ಬಳಿಗೂ ಪುತ್ರ ಪುತ್ರಿಯರಿಗಿಂತ ಉತ್ತಮವಾದ ಸ್ಥಳವನ್ನೂ, ಹೆಸರನ್ನೂ ನಾನು ಕೊಡುತ್ತೇನೆ. ನಾನು ಅವರಿಗೆ ಎಂದಿಗೂ ಅಳಿಯದ ಶಾಶ್ವತವಾದ ಹೆಸರನ್ನು ಕೊಡುವೆನು.


ಹರ್ಷಚಿತ್ತದ ನೋಟವು ಹೃದಯಕ್ಕೆ ಸಂತೋಷವನ್ನು ತರುತ್ತದೆ. ಒಳ್ಳೆಯ ವಾರ್ತೆಯು ಎಲುಬುಗಳನ್ನು ಪುಷ್ಟಿಗೊಳಿಸುತ್ತದೆ.


ಅಲ್ಲಿ ದುಷ್ಟರು ತೊಂದರೆ ಕೊಡುವುದು ಇರುವುದಿಲ್ಲ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿರುತ್ತಾರೆ.


ಸಾಯಂಕಾಲ ಊಟದ ಸಮಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಯೋಚನೆಯನ್ನು, ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಹಾಕಿದ್ದನು.


ಆ ಒಂದಾಗಿರುವಿಕೆಯು ತಲೆಯ ಮೇಲಿಂದ ಗಡ್ಡದ ಮೇಲೆ ಅಂದರೆ, ಆರೋನನ ಗಡ್ಡದ ಮೇಲೆ ಇಳಿದು, ಅವನ ವಸ್ತ್ರದ ಕೊರಳಪಟ್ಟಿಯವರೆಗೆ ಮೇಲೆ ಇಳಿಯುವ ಅಮೂಲ್ಯ ತೈಲದ ಹಾಗೆ ಇರುತ್ತದೆ.


ಇವರೆಲ್ಲರೂ ತಮ್ಮ ನಂಬಿಕೆಯ ಮೂಲಕ ಒಳ್ಳೆಯ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವಾದದ್ದನ್ನು ಹೊಂದಲಿಲ್ಲ.


ಹಿರಿಯರು ನಂಬಿಕೆಯಿಂದಲೇ ಒಳ್ಳೆಯ ಸಾಕ್ಷಿಹೊಂದಿದರು.


ಹೀಗಿದ್ದರೂ, ದೆವ್ವಗಳು ನಿಮಗೆ ಅಧೀನವಾಗಿವೆ ಎಂದು ಸಂತೋಷ ಪಡಬೇಡಿರಿ, ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಲಿಖಿತವಾಗಿವೆ ಎಂದು ಸಂತೋಷಿಸಿರಿ,” ಎಂದರು.


ನನ್ನ ಪ್ರಿಯಳೇ, ವಧುವೇ! ನಿನ್ನ ಪ್ರೀತಿಯು ಎಷ್ಟೋ ಚೆಂದ. ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧಗಳಿಗಿಂತ ನಿನ್ನ ತೈಲದ ಸುವಾಸನೆಯು ಎಷ್ಟೋ ಉತ್ತಮ!


ಪ್ರಾರಂಭಕ್ಕಿಂತ ಅದರ ಅಂತ್ಯವೇ ಲೇಸು. ಗರ್ವಿಷ್ಠನಿಗಿಂತ ತಾಳ್ಮೆಯುಳ್ಳವನೇ ಉತ್ತಮ.


ಆದ್ದರಿಂದ ಯೆಹೋವ ದೇವರೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆಯಿರಿ, ಏಕೆಂದರೆ ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.


ಅವಳು ಹಾಗೆಯೇ ಉದಯಕಾಲದವರೆಗೂ ಅವನ ಪಾದಗಳ ಬಳಿಯಲ್ಲಿ ಮಲಗಿದ್ದು ಯಾರಿಗೂ ಗೊತ್ತಾಗಬಾರದೆಂದು ಹೊತ್ತಿಗೆ ಮುಂಚೆ ಎದ್ದಳು. ಅವನು, “ಒಬ್ಬ ಸ್ತ್ರೀ ಕಣದಲ್ಲಿ ಬಂದಳೆಂದು ಯಾರಿಗೂ ತಿಳಿಯದಿರಲಿ,” ಎಂದನು.


ಅದನ್ನು ಕೇಳುವವನು ನಿನ್ನನ್ನು ಅವಮಾನಕ್ಕೆ ಗುರಿಪಡಿಸಿಯಾನು; ನಿನ್ನ ಅಪಕೀರ್ತಿಯು ಹೋಗದೆ ಇದ್ದೀತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು