ಪ್ರಸಂಗಿ 7:17 - ಕನ್ನಡ ಸಮಕಾಲಿಕ ಅನುವಾದ17 ನೀನು ದುಷ್ಟತನದಲ್ಲಿ ಸಾಗಬೇಡ, ಮೂರ್ಖತನದಲ್ಲಿಯೂ ಮುಂದುವರಿಯಬೇಡ. ನಿನ್ನ ಸಮಯಕ್ಕಿಂತ ಮೊದಲು ನೀನು ಏಕೆ ಸಾಯುವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನೀನು ಅತಿಯಾಗಿ ದುಷ್ಟನಾಗಿರಬೇಡ ಇಲ್ಲವೇ ಮೂರ್ಖನಾಗಿರಬೇಡ, ಏಕೆ ಅಕಾಲ ಮರಣವನ್ನು ಹೊಂದುವಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದುರ್ನಡತೆಯಲ್ಲೇ ಆಗಲಿ, ಬುದ್ಧಿಹೀನತೆಯಲ್ಲೇ ಆಗಲಿ ಮಿತಿಮೀರಿ ವರ್ತಿಸುವುದು ಸಲ್ಲ. ಕಾಲ ಬರುವ ಮೊದಲೇ ಸಾವಿಗೆ ತುತ್ತಾಗಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅಧರ್ಮವನ್ನು ಹೆಚ್ಚಾಗಿ ಆಚರಿಸದಿರು; ಬುದ್ಧಿಹೀನನಾಗಿರಬೇಡ; ಏಕೆ ಅಕಾಲ ಮರಣವನ್ನು ಹೊಂದುವಿ? ಅಧ್ಯಾಯವನ್ನು ನೋಡಿ |
ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ತಿರುಗಿದಾಗ, ಸೌಲನ ಮಗಳಾದ ಮೀಕಲಳು ದಾವೀದನಿಗೆ ಎದುರಾಗಿ ಬಂದು, “ನಿಷ್ಪ್ರಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿ ಹಾಕಿದ ಹಾಗೆಯೇ, ಈ ಹೊತ್ತು ತನ್ನ ಸೇವಕರ ದಾಸಿಯರ ಕಣ್ಣು ಮುಂದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಹೊಂದಿದನು?” ಎಂದಳು.