Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:20 - ಕನ್ನಡ ಸಮಕಾಲಿಕ ಅನುವಾದ

20 ಪಾಪಮಾಡದೆ ಒಳ್ಳೆಯದನ್ನೇ ನಡೆಸುವ ನೀತಿವಂತನು, ಭೂಮಿಯ ಮೇಲೆ ಒಬ್ಬನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಪಾಪಮಾಡದೆ ಧರ್ಮವನ್ನೇ ಆಚರಿಸುವ ಸತ್ಪುರುಷ ಜಗದಲ್ಲಿ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಪಾಪಮಾಡದೆ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷನು ಲೋಕದಲ್ಲಿ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:20
16 ತಿಳಿವುಗಳ ಹೋಲಿಕೆ  

ಏಕೆಂದರೆ ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ.


ನಾವೆಲ್ಲರೂ ದಾರಿತಪ್ಪಿದ ಕುರಿಗಳಂತೆ ಇದ್ದೆವು. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು. ಯೆಹೋವ ದೇವರು ನಮ್ಮ ಎಲ್ಲಾ ದುಷ್ಕೃತ್ಯಗಳನ್ನು ಆತನ ಮೇಲೆ ಹಾಕಿದರು.


ಏಕೆಂದರೆ ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವುದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ, ಅವನು ಪರಿಪೂರ್ಣನೂ ತನ್ನ ಇಡೀ ದೇಹವನ್ನೇ ಸ್ವಾಧೀನದಲ್ಲಿಟ್ಟುಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.


“ಪಾಪ ಮಾಡದವನು ಯಾವನೂ ಇಲ್ಲವಲ್ಲಾ. ಆದ್ದರಿಂದ ಅವರು ನಿಮಗೆ ವಿರೋಧವಾಗಿ ಪಾಪಮಾಡಲು, ನೀವು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ, ಸಮೀಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಹೋಗುವಂತೆ ನೀವು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ,


“ನನ್ನ ಹೃದಯವನ್ನು ಶುದ್ಧವಾಗಿ ಇಟ್ಟುಕೊಂಡಿದ್ದೇನೆ. ನಾನು ಶುದ್ಧನೂ ಪಾಪರಹಿತನೂ,” ಎಂದು ಯಾರು ಹೇಳಬಲ್ಲರು?


“ಪಾಪ ಮಾಡದವನು ಯಾವನೂ ಇಲ್ಲವಲ್ಲಾ. ಆದ್ದರಿಂದ ಅವರು ನಿಮಗೆ ವಿರೋಧವಾಗಿ ಪಾಪಮಾಡಲು, ನೀವು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ, ಸಮೀಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಹೋಗುವಂತೆ ನೀವು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ,


ನಾವೆಲ್ಲರೂ ಅಶುದ್ಧನ ಹಾಗೆ ಇದ್ದೇವೆ. ನಮ್ಮ ನೀತಿ ಕಾರ್ಯಗಳೆಲ್ಲಾ ಮೈಲಿಗೆ ವಸ್ತ್ರದ ಹಾಗೆ ಇವೆ. ನಾವೆಲ್ಲರೂ ಎಲೆಯ ಹಾಗೆ ಒಣಗಿಹೋಗಿದ್ದೇವೆ. ನಮ್ಮ ಪಾಪಗಳು ಗಾಳಿಯಂತೆ ನಮ್ಮನ್ನು ಬಡಿದುಕೊಂಡು ಹೋಗಿವೆ.


ನಿಮ್ಮ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡಿರಿ, ಏಕೆಂದರೆ ಜೀವಿಸುವರಲ್ಲಿ ಒಬ್ಬರೂ ನಿಮ್ಮ ಮುಂದೆ ನೀತಿವಂತರಲ್ಲ.


ಯೆಹೋವ ದೇವರೇ, ನೀವು ಪಾಪಗಳನ್ನು ಎಣಿಸಿದರೆ, ನಿಮ್ಮ ಮುಂದೆ ಯಾರು ನಿಲ್ಲುವರು?


“ಹೀಗೆಲ್ಲಾ ನೀನು ಮಾತಾಡಿದ್ದು ಸರಿಯಲ್ಲವೆಂದು ನಾನು ನಿನಗೆ ಹೇಳುತ್ತೇನೆ. ಏಕೆಂದರೆ ದೇವರು ಮನುಷ್ಯರಿಗಿಂತ ಬಹಳ ದೊಡ್ಡವರು.


ಅವುಗಳನ್ನು ಯಾಜಕನು ಪರೀಕ್ಷಿಸಬೇಕು, ಅವರ ದೇಹದ ಚರ್ಮದಲ್ಲಿ ಹೊಳಪಾದ ಕಲೆಗಳು ಮಬ್ಬಾಗಿ ಬಿಳುಪಾಗಿದ್ದರೆ, ಅದು ಚರ್ಮದ ಮೇಲೆ ಬಿಸಿಲಿನಿಂದಾದ ಕೆಂಪು ಮಚ್ಚೆಯಾಗಿರುವುದು. ಅವನು ಶುದ್ಧನಾಗಿರುವನು.


ಯೋನಾತಾನನು ಕೋಪದಿಂದ ಉರಿಗೊಂಡು ಮೇಜಿನಿಂದ ಎದ್ದು ಹೋದನು. ಹಬ್ಬದ ಎರಡನೆಯ ದಿನವಾಗಿದ್ದ ಅಂದು ಅವನು ಊಟ ಮಾಡಲಿಲ್ಲ. ಏಕೆಂದರೆ ತನ್ನ ತಂದೆಯು ದಾವೀದನಿಗೆ ಅವಮಾನ ಮಾಡಿದ್ದರಿಂದ, ಅವನಿಗೋಸ್ಕರ ವ್ಯಥೆಪಟ್ಟನು.


“ದೇವರು ಇಲ್ಲಾ,” ಎಂದು ಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ಅವರು ಕೆಟ್ಟು ಹೋಗಿ, ಅಸಹ್ಯ ಕೃತ್ಯಗಳನ್ನು ಮಾಡುತ್ತಾರೆ; ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ.


ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, ಎಲ್ಲರೂ ಕೆಟ್ಟು ಹೋಗಿದ್ದಾರೆ; ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ, ಒಬ್ಬರಾದರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು