Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:7 - ಕನ್ನಡ ಸಮಕಾಲಿಕ ಅನುವಾದ

7 ದಬ್ಬಾಳಿಕೆ ಜ್ಞಾನಿಯನ್ನು ಮೂರ್ಖನನ್ನಾಗಿ ಮಾಡುತ್ತದೆ. ಲಂಚವು ಹೃದಯವನ್ನು ಕೆಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದಬ್ಬಾಳಿಕೆಯು ಜ್ಞಾನಿಯನ್ನು ಮೂರ್ಖನನ್ನಾಗಿಸುತ್ತದೆ, ಲಂಚವು ಹೃದಯವನ್ನು ಕೆಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದಬ್ಬಾಳಿಕೆ ಬುದ್ಧಿವಂತನನ್ನೂ ಹುಚ್ಚನನ್ನಾಗಿಸುತ್ತದೆ; ಲಂಚಕೋರತನ ಅಂತರಂಗವನ್ನೂ ಕೆಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕಸುಕೊಳ್ಳುವದು ಜ್ಞಾನಿಗೆ ಬುದ್ಧಿಗೇಡು; ಲಂಚವು ವಿವೇಕನಾಶಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹಣವು ಜ್ಞಾನಿಯನ್ನೂ ಮೂರ್ಖನನ್ನಾಗಿ ಮಾಡುವುದು. ಲಂಚವು ಅವನ ವಿವೇಕವನ್ನು ಕೆಡಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:7
14 ತಿಳಿವುಗಳ ಹೋಲಿಕೆ  

ನೀವು ನ್ಯಾಯವನ್ನು ಕೆಡಿಸಬಾರದು. ನೀವು ಮುಖದಾಕ್ಷಿಣ್ಯ ನೋಡಬಾರದು, ಇಲ್ಲವೆ ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.


“ಲಂಚವನ್ನು ತೆಗೆದುಕೊಳ್ಳಬಾರದು. ಏಕೆಂದರೆ ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.


ನ್ಯಾಯದ ಮಾರ್ಗಗಳನ್ನು ತಿರುಗಿಸಿಬಿಡುವುದಕ್ಕೆ ದುಷ್ಟನು ಗುಪ್ತವಾಗಿ ಲಂಚವನ್ನು ತೆಗೆದುಕೊಳ್ಳುತ್ತಾನೆ.


ನಿನ್ನ ಪ್ರಭುಗಳು ಎದುರುಬೀಳುವವರೂ, ಕಳ್ಳರ ಜೊತೆಗಾರರೂ ಆಗಿದ್ದಾರೆ. ಪ್ರತಿಯೊಬ್ಬನೂ ಲಂಚ ಪ್ರಿಯನೂ, ಬಹುಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ. ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವುದಿಲ್ಲ.


ಪುನಃ ನಾನು ಸೂರ್ಯನ ಕೆಳಗೆ ನಡೆಯುತ್ತಿರುವ ದಬ್ಬಾಳಿಕೆಯನ್ನೆಲ್ಲಾ ನೋಡಿದೆನು: ಹಿಂಸೆಗೊಂಡವರ ಕಣ್ಣೀರನ್ನೂ, ಅವರನ್ನು ಸಂತೈಸುವವರು ಯಾರೂ ಇಲ್ಲದಿರುವುದನ್ನೂ ನೋಡಿದೆನು. ಅಧಿಕಾರವು ಅವರ ದಬ್ಬಾಳಿಕೆಗಾರರ ಬಳಿಯಲ್ಲಿತ್ತು. ಆದರೆ ಅವರನ್ನು ಸಂತೈಸುವವರು ಒಬ್ಬರೂ ಇಲ್ಲ.


ಕೊಡುವವನ ಕಣ್ಣಿಗೆ ಲಂಚವು ಆಕರ್ಷಣೆಯಾಗಿದೆ; ಪ್ರತಿ ತಿರುವಿನಲ್ಲಿಯೂ ಯಶಸ್ಸು ಬರುತ್ತದೆ ಎಂದು ಅವರು ಭಾವಿಸುತ್ತಾರೆ.


ಆದರೆ ಅವರು ಸಮುಯೇಲನ ಮಾರ್ಗದಲ್ಲಿ ನಡೆಯದೆ, ಅಪ್ರಾಮಾಣಿಕತೆಯಿಂದ ಹಣ ಸಂಪಾದಿಸಿ, ಲಂಚವನ್ನು ತೆಗೆದುಕೊಂಡು, ನ್ಯಾಯವನ್ನು ತಪ್ಪಿಸುತ್ತಿದ್ದರು.


ಆ ಜನಾಂಗಗಳಲ್ಲಿ ನಿಮಗೆ ವಿಶ್ರಾಂತಿ ದೊರೆಯುವುದಿಲ್ಲ. ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ಅಲ್ಲಿ ಯೆಹೋವ ದೇವರು ನಿಮಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಂದುವ ಪ್ರಾಣವನ್ನೂ ಕೊಡುವರು.


ನೀತಿಯಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈಚಾಚಿದೆ. ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ಕಾಣದಂತೆ ಕಣ್ಣು ಮುಚ್ಚಿಕೊಳ್ಳುವವರೇ ಉನ್ನತ ಸ್ಥಳದಲ್ಲಿ ವಾಸಿಸುವರು.


ನಾನು ಇಲ್ಲಿದ್ದೇನೆ. ಯೆಹೋವ ದೇವರ ಮುಂದೆಯೂ, ಅವರ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿ ಕೊಡಿರಿ. ನಾನು ಯಾರ ಎತ್ತನ್ನಾದರೂ, ಕತ್ತೆಯನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ, ತಿರುಗಿಕೊಡುತ್ತೇನೆ,” ಎಂದನು.


ದೇಶದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯ ನಿರಾಕರಿಸಿದ್ದನ್ನೂ ನೀನು ನೋಡಿದರೆ, ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಮತ್ತೊಬ್ಬ ಉನ್ನತ ಅಧಿಕಾರಿಗಳು ಇದ್ದಾರೆ.


ನಾನು ಇದನ್ನೆಲ್ಲಾ ನೋಡಿ, ಸೂರ್ಯನ ಕೆಳಗೆ ಮಾಡುವ ಪ್ರತಿಯೊಂದು ಕೆಲಸಕ್ಕೂ ನನ್ನ ಹೃದಯವನ್ನು ಪ್ರಯೋಗಿಸಿದ್ದೇನೆ. ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ತನ್ನ ಹಾನಿಗಾಗಿ ಅಧಿಕಾರ ನಡೆಸುವ ಕಾಲವೂ ಇದೆ.


ಆಗ ಆಕೀಷನು ತನ್ನ ಸೇವಕರಿಗೆ, “ಈ ಮನುಷ್ಯನು ನೋಡಿರಿ! ಅವನು ಹುಚ್ಚನಾಗಿದ್ದಾನೆ. ಇವನನ್ನು ನನ್ನ ಬಳಿಗೆ ಏಕೆ ತೆಗೆದುಕೊಂಡು ಬಂದಿರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು