Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 8:16 - ಕನ್ನಡ ಸಮಕಾಲಿಕ ಅನುವಾದ

16 ಜ್ಞಾನವನ್ನು ತಿಳಿದುಕೊಳ್ಳುವುದಕ್ಕೂ ಭೂಮಿಯ ಮೇಲೆ ಮಾಡುವ ಪರಿಶ್ರಮವನ್ನು ನೋಡುವುದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು. ಜನರು ರಾತ್ರಿ ಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ಹಚ್ಚಗೊಡದವರೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ನನ್ನ ಹೃದಯದಲ್ಲಿ ಜ್ಞಾನವನ್ನು ಪಡೆಯಲು, ಲೋಕದಲ್ಲಿ ನಡೆಯುವುದನ್ನು ಅರಿತುಕೊಳ್ಳಲು ಪ್ರಯತ್ನಿಸಿದಾಗ, ನಾನು ಕಂಡುಕೊಂಡ ಸಂಗತಿಯೇನೆಂದರೆ, “ಒಬ್ಬನು ರಾತ್ರಿಹಗಲು ಕಣ್ಣುಗಳಿಗೆ ನಿದ್ರೆಕೊಡದೆ ಕೆಲಸ ಮಾಡಿದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾನು ಜ್ಞಾನವನ್ನು ಪಡೆಯಲು, ಜಗದಲ್ಲಿ ನಡೆಯುವುದನ್ನು ಅರಿತುಕೊಳ್ಳಲು ಪ್ರಯತ್ನಿಸಿದಾಗ ಇದು ನನಗೆ ಮನದಟ್ಟಾಯಿತು: ಒಬ್ಬನು ರಾತ್ರಿ ಹಗಲು, ಕಣ್ಣುಗಳಿಗೆ ನಿದ್ರೆ ಹಚ್ಚಗೊಡದೆ ಪರಿಶೀಲಿಸಿದರೂ ದೇವರ ಕಾರ್ಯವನ್ನು ಅರ್ಥಮಾಡಿಕೊಳ್ಳಲು ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ರಾತ್ರಿ ಹಗಲು ಮನುಷ್ಯರ ಕಣ್ಣುಗಳಿಗೆ ನಿದ್ರೆ ಹತ್ತಗೊಡದ ಲೋಕದ ಶ್ರಮೆಯನ್ನು ನೋಡಲೂ ಜ್ಞಾನವನ್ನು ಪಡೆಯಲೂ ನಾನು ಮನಸ್ಸಿಟ್ಟಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಈ ಲೋಕದಲ್ಲಿ ಜನರ ಕಾರ್ಯಗಳನ್ನು ಎಚ್ಚರಿಕೆಯಿಂದ ಅಧ್ಯಯನ ಮಾಡಿದೆ. ಅವರು ಹಗಲುರಾತ್ರಿ ಕೆಲಸ ಮಾಡುವರು; ಕೆಲವೊಮ್ಮೆ ನಿದ್ರೆಯನ್ನೂ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 8:16
11 ತಿಳಿವುಗಳ ಹೋಲಿಕೆ  

ಅವನ ದಿನಗಳೆಲ್ಲಾ ವ್ಯಸನವೇ. ಅವನ ಪ್ರಯಾಸವು ದುಃಖವೇ. ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ವಿಶ್ರಾಂತಿಯಿಲ್ಲ. ಇದೂ ಕೂಡ ವ್ಯರ್ಥವೇ.


ಆಕಾಶದ ಕೆಳಗೆ ನಡೆಯುವ ಕೆಲಸಗಳನ್ನೆಲ್ಲಾ ಜ್ಞಾನದಿಂದ ವಿಚಾರಿಸಿ, ವಿಮರ್ಶಿಸುವುದಕ್ಕೆ ನಾನು ನನ್ನ ಮನಸ್ಸು ಮಾಡಿದೆ. ದೇವರು ಮಾನವರ ಮೇಲೆ ಈ ಕಷ್ಟಕರವಾದ ಪ್ರಯಾಸವನ್ನು ಹೊರಿಸಿದ್ದಾರೆ.


ನೀವು ಆಹಾರಕ್ಕಾಗಿ ಶ್ರಮೆಪಟ್ಟು, ಬೆಳಿಗ್ಗೆ ಬೇಗ ಏಳುವುದೂ, ರಾತ್ರಿ ತಡವಾಗಿ ಮಲಗುವುದೂ ವ್ಯರ್ಥವೇ, ದೇವರು ತಮ್ಮನ್ನು ಪ್ರೀತಿಸುವವರಿಗೆ ನಿದ್ರೆಯಿಂದಿರುವಾಗಲೂ ಅವಶ್ಯಕತೆಗಳನ್ನು ಒದಗಿಸಿಕೊಡುತ್ತಾರೆ.


ನಾನು ಇದನ್ನೆಲ್ಲಾ ನೋಡಿ, ಸೂರ್ಯನ ಕೆಳಗೆ ಮಾಡುವ ಪ್ರತಿಯೊಂದು ಕೆಲಸಕ್ಕೂ ನನ್ನ ಹೃದಯವನ್ನು ಪ್ರಯೋಗಿಸಿದ್ದೇನೆ. ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ತನ್ನ ಹಾನಿಗಾಗಿ ಅಧಿಕಾರ ನಡೆಸುವ ಕಾಲವೂ ಇದೆ.


ಏಕೆಂದರೆ ಮುಂದೆ ಆಗುವುದೇನೆಂದು ಯಾರಿಗೂ ತಿಳಿಯದು. ಮುಂದೆ ಏನಾಗುವುದೆಂದು ಮನುಷ್ಯನಿಗೆ ತಿಳಿಸುವವರು ಯಾರು ಇಲ್ಲ.


ಜ್ಞಾನದ ಮೂಲ ತತ್ವವನ್ನೂ, ದುಷ್ಟತನದ ಮೂಢತನವನ್ನೂ, ಮೂಢತ್ವದ ಹುಚ್ಚುತನವನ್ನೂ ಪರೀಕ್ಷಿಸಿ ತಿಳಿದುಕೊಳ್ಳುವಂತೆ ಮನಸ್ಸುಮಾಡಿದೆನು.


ಪ್ರಯಾಸ ಪಡುವವನು ಸ್ವಲ್ಪ ತಿಂದರೂ ಹೆಚ್ಚು ತಿಂದರೂ ಅವನು ಹಾಯಾಗಿ ನಿದ್ರಿಸುತ್ತಾನೆ. ಆದರೆ ಐಶ್ವರ್ಯವಂತನ ಸಮೃದ್ಧಿಯು ಅವನನ್ನು ನಿದ್ರೆ ಮಾಡಗೊಡಿಸದು.


ಜೊತೆಗಾರನಿಲ್ಲದೆ ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದನು. ಅವನಿಗೆ ಮಗನಾಗಲಿ, ಸಹೋದರನಾಗಲಿ ಇರಲಿಲ್ಲ. ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ತನ್ನ ಸಂಪತ್ತಿನಿಂದ ಅವನ ಕಣ್ಣು ತೃಪ್ತಿ ಹೊಂದಿರಲಿಲ್ಲ. ಅವನು, “ನಾನು ಸುಖಸಂತೋಷವನ್ನು ತೊರೆದು, ಯಾರಿಗೋಸ್ಕರ ಕಷ್ಟಪಡುತ್ತಲೇ ಇದ್ದೇನೆ?” ಎಂದುಕೊಂಡನು. ಇದು ಕೂಡ ವ್ಯರ್ಥವೇ, ಪ್ರಯಾಸದ ಕೆಲಸವೇ ಸರಿ.


ನನ್ನ ಸ್ಥಿತಿ ಹೀಗೆ ಇತ್ತು: ಹಗಲಲ್ಲಿ ಬಿಸಿಲಿನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು. ನನ್ನ ಕಣ್ಣುಗಳಿಗೆ ನಿದ್ರೆ ತಪ್ಪಿಹೋಯಿತು.


ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ. ಗಾಳಿಯನ್ನು ಹಿಂದಟ್ಟುವಂತೆ ಎಲ್ಲವೂ ವ್ಯರ್ಥ.


ಆಗ ಜ್ಞಾನವನ್ನೂ ಮನಗುಂದುವಿಕೆಯನ್ನೂ ಬುದ್ಧಿಹೀನತೆಯನ್ನೂ ತಿಳಿದುಕೊಳ್ಳುವಂತೆ ನಾನು ಮನಸ್ಸಿಟ್ಟೆನು, ಅದರ ಜೊತೆಗೆ ಇದು ಸಹ ಗಾಳಿಯನ್ನು ಬೆನ್ನಟ್ಟಿದಂತೆ, ಎಂದು ನಾನು ಅರಿತುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು