Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 8:6 - ಕನ್ನಡ ಸಮಕಾಲಿಕ ಅನುವಾದ

6 ಮನುಷ್ಯನಿಗೆ ಕಷ್ಟಸಂಕಟವು ಭಾರವಾಗಿದ್ದರೂ ಪ್ರತಿಯೊಂದು ಕಾರ್ಯಕ್ಕೂ ಸರಿಯಾದ ಕಾಲ ಮತ್ತು ಕ್ರಮ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲ ಮತ್ತು ಒಂದು ಕ್ರಮ ಇರುತ್ತದೆಯಲ್ಲವೇ, ಮನುಷ್ಯನು ಪಡುವ ಕಷ್ಟವು ಅವನಿಗೆ ಘೋರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪ್ರತಿಯೊಂದು ಕಾರ್ಯಕ್ಕೆ ಒಂದು ಕಾಲ, ಒಂದು ಕ್ರಮ ಇರುತ್ತದೆಯಲ್ಲವೆ? ಮನುಷ್ಯನು ಎದುರಿಸಬೇಕಾದ ಕಷ್ಟಕಾರ್ಪಣ್ಯಗಳು ಘನತರವಾದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಪ್ರತಿಯೊಂದು ಕಾರ್ಯಕ್ಕೆ ಕಾಲವೂ ನ್ಯಾಯತೀರ್ಪೂ ಇರುವವಲ್ಲವೆ; ಮನುಷ್ಯನು ಪಡುವ ಕಷ್ಟವು ಅವನಿಗೆ ಘೋರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪ್ರತಿಯೊಂದು ಕಾರ್ಯಕ್ಕೂ ಸೂಕ್ತ ಸಮಯವೂ ಸೂಕ್ತ ಮಾರ್ಗವೂ ಮನುಷ್ಯನಿಗೆ ಇವೆ. ಮನುಷ್ಯನು ತನ್ನ ಅನೇಕ ತೊಂದರೆಗಳಲ್ಲಿಯೂ ಅವುಗಳಿಗೆ ತಕ್ಕಂತೆ ನಿರ್ಧಾರವನ್ನು ಕೈಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 8:6
14 ತಿಳಿವುಗಳ ಹೋಲಿಕೆ  

ಪ್ರತಿಯೊಂದಕ್ಕೂ ಒಂದೊಂದು ಸಮಯವಿದೆ. ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ.


ನಾನು ನನ್ನ ಹೃದಯದಲ್ಲಿ ಹೀಗೆ ಅಂದುಕೊಂಡೆನು, “ನೀತಿವಂತರನ್ನೂ ದುಷ್ಟರನ್ನೂ ದೇವರು ನ್ಯಾಯತೀರಿಸುವನು. ಏಕೆಂದರೆ ಪ್ರತಿಯೊಂದು ಉದ್ದೇಶಕ್ಕೂ, ಪ್ರತಿಯೊಂದು ಕೆಲಸಕ್ಕೂ ಪರೀಕ್ಷೆಯ ಸಮಯವಿದೆ.”


ದೇವರು ಪ್ರತಿಯೊಂದನ್ನು ತಮ್ಮ ಸೂಕ್ತ ಸಮಯದಲ್ಲಿ ಸುಂದರವಾಗಿ ನಿರ್ಮಿಸಿದ್ದಾರೆ. ಜನರ ಹೃದಯದಲ್ಲಿ ನಿತ್ಯತೆಯನ್ನು ದೇವರೇ ಇಟ್ಟಿದ್ದಾರೆ. ಆದರೂ ಆದಿಯಿಂದ ಅಂತ್ಯದವರೆಗೂ ದೇವರು ಏನು ಮಾಡಿದ್ದಾರೆಂದು ಯಾರಿಗೂ ಗ್ರಹಿಸಲು ಸಾಧ್ಯವಿಲ್ಲ.


ಮನೆಯಜಮಾನರು ಒಂದು ಸಾರಿ ಎದ್ದು ಬಾಗಿಲನ್ನು ಮುಚ್ಚಿಕೊಂಡರೆ, ನೀವು ಹೊರಗೆ ನಿಂತುಕೊಂಡು ಬಾಗಿಲನ್ನು ತಟ್ಟುತ್ತಾ, ‘ಸ್ವಾಮಿ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದು ಹೇಳುವುದಕ್ಕೆ ಆರಂಭಿಸಿದಾಗ, “ಆತನು ನಿಮಗೆ ಉತ್ತರವಾಗಿ, ‘ನೀವು ಯಾರು? ಎಲ್ಲಿಯವರೋ ನಾನು ನಿಮ್ಮನ್ನು ಅರಿಯೆನು,’ ಎಂದು ಹೇಳುವನು.


ಯುವಕನೇ, ನಿನ್ನ ಯೌವನದಲ್ಲಿ ಸಂತೋಷಪಡು. ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ. ನೀನು ನಿನ್ನ ಮನಸ್ಸಿಗೆ ಬಂದಂತೆಯೂ ನಿನ್ನ ಕಣ್ಣಿನ ನೋಟದಂತೆಯೂ ನಡೆ. ಆದರೆ ಈ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯವಿಚಾರಿಸುವರು ಎಂದು ತಿಳಿದುಕೋ.


“ಆದರೂ ನೀವು ಇವುಗಳನ್ನು ನಿಮ್ಮ ಹೃದಯದಲ್ಲಿ ಮರೆಮಾಡಿಕೊಂಡಿದ್ದೀರಿ; ಇದು ನಿಮ್ಮ ಉದ್ದೇಶ ಎಂದು ನನಗೆ ಗೊತ್ತಿದೆ:


ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವದಕ್ಕೂ, ಅವನ ಗರ್ವವನ್ನು ಅಡಗಿಸುವುದಕ್ಕೂ ದೇವರು ಹಾಗೆ ಮಾಡುತ್ತಾರೆ.


“ಇದಲ್ಲದೆ ಮನುಷ್ಯನು ತನ್ನ ಹಾಸಿಗೆಯಲ್ಲಿ ನೋವಿನಿಂದ ಬಿದ್ದಿರುವಾಗ, ಅವನ ಎಲುಬುಗಳಿಗೆ ನೋವು ಉಂಟಾದಾಗ, ದೇವರು ಅವನನ್ನು ತಿದ್ದುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು