Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:13 - ಕನ್ನಡ ಸಮಕಾಲಿಕ ಅನುವಾದ

13 ಸೂರ್ಯನ ಕೆಳಗೆ ನಾನು ಜ್ಞಾನವನ್ನು ಈ ವಿಧವಾಗಿ ನೋಡಿದ್ದೇನೆ. ಇದು ನನ್ನ ದೃಷ್ಟಿಗೆ ದೊಡ್ಡದಾಗಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಲೋಕದಲ್ಲಿ ಜ್ಞಾನವನ್ನು ಈ ವಿಧವಾಗಿಯೂ ಕಂಡುಕೊಂಡೆನು. ಅದು ದೊಡ್ಡದೆಂದು ತೋಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಲೋಕದಲ್ಲಿ ನಾನು ಜ್ಞಾನವನ್ನು ಈ ವಿಧವಾಗಿ ಮನಗಂಡೆ; ಅದು ನನ್ನ ದೃಷ್ಟಿಗೆ ದೊಡ್ಡದಾಗಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಲೋಕದಲ್ಲಿ ಜ್ಞಾನವನ್ನು ಈ ವಿಧವಾಗಿಯೂ ಕಂಡುಕೊಂಡೆನು; ಅದು ದೊಡ್ಡದೆಂದು ತೋಚಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇದಲ್ಲದೆ ಲೋಕದಲ್ಲಿ ಜ್ಞಾನದ ಕಾರ್ಯವನ್ನು ಮಾಡುವ ಒಬ್ಬನನ್ನು ನಾನು ಕಂಡೆನು. ಅದು ತುಂಬ ಮುಖ್ಯವಾದದ್ದೆಂದು ನನಗೆ ತೋರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:13
9 ತಿಳಿವುಗಳ ಹೋಲಿಕೆ  

ಜ್ಞಾನವನ್ನು ತಿಳಿದುಕೊಳ್ಳುವುದಕ್ಕೂ ಭೂಮಿಯ ಮೇಲೆ ಮಾಡುವ ಪರಿಶ್ರಮವನ್ನು ನೋಡುವುದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು. ಜನರು ರಾತ್ರಿ ಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ಹಚ್ಚಗೊಡದವರೂ ಇದ್ದಾರೆ.


ನನ್ನ ವ್ಯರ್ಥದ ದಿನಗಳಲ್ಲಿ ಇವೆರಡು ವಿಷಯಗಳನ್ನು ನೋಡಿದ್ದೇನೆ: ನೀತಿವಂತನು ತನ್ನ ನೀತಿಯಲ್ಲಿ ಗತಿಸಿಹೋಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ, ಇಡೀ ಜೀವಮಾನವನ್ನು ಕಳೆಯುತ್ತಾನೆ.


ಸೂರ್ಯನ ಕೆಳಗೆ ಇರುವ ಇನ್ನೊಂದು ಕೇಡನ್ನು ಕಂಡೆನು, ಅದು ಮನುಷ್ಯರ ಮೇಲೆ ಬಹು ಭಾರವಾಗಿದೆ.


ನಾನು ಮತ್ತೆ ಸೂರ್ಯನ ಕೆಳಗೆ ನೋಡಿದ್ದೇನೆಂದರೆ, ವೇಗಿಗಳಿಗೆ ಓಟವೂ ಪರಾಕ್ರಮಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ಆಹಾರವೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವುದು ಎಂಬ ನಿಶ್ಚಯ ಇಲ್ಲ. ಏಕೆಂದರೆ ಕಾಲವೂ ಅವಕಾಶವೂ ಅವರೆಲ್ಲರಿಗೆ ಒಳಪಟ್ಟಿರುತ್ತವೆ.


ಆ ಸ್ತ್ರೀಯು ತನ್ನ ಜ್ಞಾನದಿಂದ ಸಮಸ್ತ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರಿಯ ಮಗ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ, ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನೂ ತಮ್ಮ ತಮ್ಮ ಮನೆಗಳಿಗೆ ಹೋದರು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂದಿರುಗಿ ಬಂದನು.


ಪಟ್ಟಣದ ಹತ್ತು ಮಂದಿ ಅಧಿಕಾರಿಗಳ ಸ್ಥಿರತೆಗಿಂತ, ಜ್ಞಾನವು ಜ್ಞಾನಿಯನ್ನು ಹೆಚ್ಚಾಗಿ ಸ್ಥಿರಪಡಿಸುತ್ತದೆ.


ಇದಲ್ಲದೆ, ಅವರವರ ಸಮಯ ಯಾವಾಗ ಬರುತ್ತದೆ ಎಂದು ಯಾರಿಗೂ ತಿಳಿಯದು. ಕ್ರೂರ ಬಲೆಯಿಂದ ಹಿಡಿಯುವ ಮೀನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗಳಂತೆಯೂ ಕೇಡಿನ ಕಾಲವು ತಟ್ಟನೆ ಬೀಳುವಾಗ ಜನರು ಸಿಕ್ಕಿಕೊಳ್ಳುತ್ತಾರೆ.


ಒಂದು ಕಾಲದಲ್ಲಿ ಒಂದು ಸಣ್ಣ ನಗರವಿತ್ತು, ಅದರಲ್ಲಿ ಕೆಲವೇ ಜನರಿದ್ದರು. ಆಗ ಅಲ್ಲಿ ಒಬ್ಬ ಮಹಾ ಅರಸನು ಬಂದು ಅದನ್ನು ಮುತ್ತಿಗೆ ಹಾಕಿ, ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು.


ಬಾಬಿಲೋನಿನ ಜ್ಞಾನಿಗಳನ್ನು ಕೊಲ್ಲಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಜ್ಞಾನದಿಂದಲೂ ಚಾತುರ್ಯದಿಂದಲೂ ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು