Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:18 - ಕನ್ನಡ ಸಮಕಾಲಿಕ ಅನುವಾದ

18 ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಬಹು ಶುಭವನ್ನು ಹಾಳುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯುದ್ಧದ ಆಯುಧಗಳಿಗಿಂತಲೂ ಜ್ಞಾನವೇ ಉತ್ತಮ. ಆದರೆ ಒಬ್ಬ ಪಾಪಿಯು ಬಹಳ ಶುಭವನ್ನು ಹಾಳುಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯುದ್ಧಾಯುಧಗಳಿಗಿಂತ ಜ್ಞಾನವೇ ಉತ್ತಮ; ಆದರೆ ಒಬ್ಬನೇ ಒಬ್ಬ ಪಾಪಿ ಸಾಕು ಪುಣ್ಯಕೋಟೆಯನ್ನು ಹಾಳುಮಾಡಲು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯುದ್ಧಾಯುಧಗಳಿಗಿಂತ ಜ್ಞಾನವೇ ಉತ್ತಮ; ಒಬ್ಬ ಪಾಪಿಯು ಬಹು ಶುಭವನ್ನು ಹಾಳುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಜ್ಞಾನವು ಯುದ್ಧಾಯುಧಗಳಿಗಿಂತಲೂ ಉತ್ತಮ, ಆದರೆ ಮೂಢನು ಒಳ್ಳೆಯದನ್ನು ಹಾಳು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:18
22 ತಿಳಿವುಗಳ ಹೋಲಿಕೆ  

ಆಯಿ ಎಂಬ ಪಟ್ಟಣದವರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಪಟ್ಟಣದ ಬಾಗಿಲಿನಿಂದ ಪ್ರಾರಂಭಿಸಿ ಶೆಬಾರಿಮಿನವರೆಗೂ ಅವರನ್ನು ಹಿಂದಟ್ಟಿ, ಅವರನ್ನು ಹೊಡೆದರು. ಆದ್ದರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.


ಆದರೆ ಇಸ್ರಾಯೇಲರು ಅರ್ಪಿತವಾದ ವಸ್ತುಗಳ ವಿಷಯದಲ್ಲಿ ಅಪನಂಬಿಕೆಯಿಂದ ನಡೆದುಕೊಂಡರು. ಯೆಹೂದ ಗೋತ್ರದ ಜೆರಹನ ಮೊಮ್ಮಗನೂ, ಜಿಮ್ರಿಯ ಮಗನೂ ಆದ ಕರ್ಮೀಯ ಮಗನಾದ ಆಕಾನನು ಅರ್ಪಿತವಾದ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡನು. ಇದರಿಂದ ಇಸ್ರಾಯೇಲರ ಮೇಲೆ ಯೆಹೋವ ದೇವರ ಕೋಪವು ಉರಿಯಿತು.


ಇದನ್ನು ನೋಡಿ ನಾನು, “ಬಲಕ್ಕಿಂತ ಜ್ಞಾನವು ಉತ್ತಮ; ಆದರೆ ಜನರು ಬಡವನ ಜ್ಞಾನವನ್ನು ತಿರಸ್ಕಾರ ಮಾಡುತ್ತಾರೆ, ಅವನ ಮಾತುಗಳನ್ನು ಯಾರೂ ಲಕ್ಷಿಸುವುದಿಲ್ಲ,” ಎಂದುಕೊಂಡೆನು.


ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ, ಈ ಸುಳ್ಳು ಬೋಧಕರು ಸಹ ಸತ್ಯವನ್ನು ವಿರೋಧಿಸುತ್ತಾರೆ. ಇದಲ್ಲದೆ ಇವರು ಬುದ್ಧಿಗೆಟ್ಟವರೂ ವಿಶ್ವಾಸದ ವಿಷಯದಲ್ಲಿ ಭ್ರಷ್ಠರೂ ಆಗಿ, ತಿರಸ್ಕಾರ ಹೊಂದಿರುತ್ತಾರೆ.


ಜೆರಹನ ಮಗ ಆಕಾನನು ಅರ್ಪಿತವಾದ ವಸ್ತುಗಳನ್ನು ಕದ್ದು ಅಪರಾಧವೆಸಗಿದಾಗ ಯೆಹೋವ ದೇವರ ಕೋಪವು ಸಮಸ್ತ ಇಸ್ರಾಯೇಲ್ ಜನರ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಇತರರೂ ಸಾಯಬೇಕಾಯಿತು,’ ” ಎಂದು ಹೇಳಿದರು.


ಆದರೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಜನಾಂಗಗಳ ಅಸಹ್ಯವಾದವುಗಳನ್ನು ಅವನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


ಆಗ ಬೆಳಕು ಕತ್ತಲೆಗಿಂತ ಶ್ರೇಷ್ಠವಾಗಿರುವಂತೆ, ಜ್ಞಾನವು ಮೂಢತನಕ್ಕಿಂತ ಶ್ರೇಷ್ಠವಾಗಿದೆ ಎಂದು ನಾನು ಕಂಡೆನು.


ಧನವು ಹೇಗೋ ಹಾಗೆ ಜ್ಞಾನವು ಆಶ್ರಯ. ಆದರೆ ಜ್ಞಾನದ ಶ್ರೇಷ್ಠತೆ ಏನೆಂದರೆ, ಅದು ಜ್ಞಾನಿಗೆ ಜೀವದಾಯಕ.


ಈ ದಿನದಲ್ಲಿ ಜನರು ತಮಗೆ ದೊರಕಿದ ತಮ್ಮ ಶತ್ರುಗಳ ಕೊಳ್ಳೆಯಲ್ಲಿ ಯಾವದನ್ನಾದರೂ ಉಚಿತವಾಗಿ ತಿಂದಿದ್ದರೆ ಎಷ್ಟು ಚೆನ್ನಾಗಿತ್ತು. ಏಕೆಂದರೆ ಫಿಲಿಷ್ಟಿಯರಲ್ಲಿ ಹತರಾಗದವರು ಇನ್ನು ಹೆಚ್ಚು ಮಂದಿ ಇದ್ದಾರೆ,” ಎಂದನು.


ನಿನ್ನ ದುಷ್ಟತನವು ನಿನ್ನಂಥವರನ್ನೇ ಬಾಧಿಸುವುದು; ನಿನ್ನ ನೀತಿಯಿಂದ ಬೇರೆ ಜನರಿಗೆ ಮಾತ್ರ ಲಾಭವಾಗುವುದು.


ಪಟ್ಟಣದ ಹತ್ತು ಮಂದಿ ಅಧಿಕಾರಿಗಳ ಸ್ಥಿರತೆಗಿಂತ, ಜ್ಞಾನವು ಜ್ಞಾನಿಯನ್ನು ಹೆಚ್ಚಾಗಿ ಸ್ಥಿರಪಡಿಸುತ್ತದೆ.


ಸತ್ತ ನೊಣಗಳು ಸುಗಂಧ ತೈಲವನ್ನು ದುರ್ವಾಸನೆಗೆ ಒಳಪಡಿಸುತ್ತದೆ. ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮಾನಗಳನ್ನು ಕೆಡಿಸಿಬಿಡುತ್ತದೆ.


ಮೊಂಡುಕೊಡಲಿಯ ಬಾಯನ್ನು ಮೊನೆಮಾಡದಿದ್ದರೆ, ಹೆಚ್ಚು ಬಲವನ್ನು ಪ್ರಯೋಗಿಸಬೇಕಾಗುವುದು, ಆದರೆ ಜ್ಞಾನವೇ ಯಶಸ್ಸನ್ನು ತರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು