ಪ್ರಸಂಗಿ 9:2 - ಕನ್ನಡ ಸಮಕಾಲಿಕ ಅನುವಾದ2 ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ದುಷ್ಟನಿಗೂ ಒಳ್ಳೆಯವನಿಗೂ ಕೆಟ್ಟವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಯಜ್ಞ ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನಿಗೆ ಹೇಗೋ ಹಾಗೆಯೇ ಪಾಪಿಗೂ ಇರುವುದು. ಆಣೆಯಿಡುವವನಿಗೆ ಹೇಗೋ ಹಾಗೆಯೇ, ಆಣೆಯಿಡಲು ಭಯಪಡುವವನಿಗೂ ಇರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಎಲ್ಲವುಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ಮತ್ತು ದುಷ್ಟನಿಗೂ, ಒಳ್ಳೆಯವನಿಗೂ ಮತ್ತು ಕೆಟ್ಟವನಿಗೂ, ಶುದ್ಧನಿಗೂ ಮತ್ತು ಅಶುದ್ಧನಿಗೂ, ಯಜ್ಞವನ್ನು ಅರ್ಪಿಸುವವನಿಗೂ ಮತ್ತು ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನು ಹೇಗೋ ಹಾಗೆಯೇ ಪಾಪಿಯೂ ಇರುವನು. ಆಣೆಯಿಡುವವನು ಹೇಗೋ ಹಾಗೆಯೇ ಆಣೆಗೆ ಭಯಪಡುವವನೂ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು; ಸಜ್ಜನನಿಗೂ ದುರ್ಜನನಿಗೂ, ಒಳ್ಳೆಯವನಿಗೂ (ಕೆಟ್ಟವನಿಗೂ), ಶುದ್ಧನಿಗೂ, ಅಶುದ್ಧನಿಗೂ ಬಲಿಯನ್ನರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿ ಕಾದಿದೆ; ನಿರ್ದೋಷಿಯಂತೆ ದೋಷಿಯೂ ಇರುವನು; ಆಣೆಯಿಡುವವನ ಹಾಗೆ ಆಣೆಗೆ ಅಂಜುವವನೂ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವದು; ಶಿಷ್ಟನಿಗೂ ದುಷ್ಟನಿಗೂ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಯಜ್ಞಮಾಡುವವನಿಗೂ ಮಾಡದವನಿಗೂ ಒಂದೇ ಗತಿ; ನಿರ್ದೋಷಿಯಂತೆ ದೋಷಿಯಿರುವನು; ಆಣೆಯಿಡುವವನ ಹಾಗೆ ಆಣೆಗೆ ಅಂಜುವವನು ಇರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದರೆ ಎಲ್ಲರಿಗೂ ಸಂಭವಿಸುವುದು ಒಂದೇ. ಅದೇ ಮರಣ. ಒಳ್ಳೆಯವರಿಗೂ ಕೆಟ್ಟವರಿಗೂ ಶುದ್ಧರಿಗೂ ಅಶುದ್ಧರಿಗೂ ಯಜ್ಞಗಳನ್ನು ಅರ್ಪಿಸುವವರಿಗೂ ಅರ್ಪಿಸದವರಿಗೂ ಮರಣವಾಗುತ್ತದೆ. ಒಳ್ಳೆಯವನು ಸಹ ಕೇವಲ ಪಾಪಿಯಂತೆ ಸಾಯುವನು. ದೇವರಿಗೆ ವಿಶೇಷವಾದ ಹರಕೆಗಳನ್ನು ಮಾಡುವವನು ಸಹ ಆ ಹರಕೆಗಳನ್ನು ಮಾಡಲು ಭಯಪಡುವ ವ್ಯಕ್ತಿಯಂತೆ ಸಾಯುವನು. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.