Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:17 - ಕನ್ನಡ ಸಮಕಾಲಿಕ ಅನುವಾದ

17 ಅವರಾದರೋ, ನಾನು ಬೇಡಿಗಳಿಂದ ಸೆರೆಮನೆಯಲ್ಲಿರುವಾಗ ಸಂಕಟವನ್ನು ಹೆಚ್ಚಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧ ಪಡಿಸದೆ ಪ್ರತಿಸ್ಪರ್ಧೆಗಾಗಿ ಸಾರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಬೇರೆ ತರದವರಾದರೋ ನಾನು ಬೇಡಿಯಿಂದ ಬಂಧಿತನಾಗಿರುವಾಗಲೂ ನನಗೆ ಸಂಕಟವನ್ನು ಹೆಚ್ಚಿಸಬೇಕೆಂದು ಯೋಚಿಸಿ, ಪ್ರಾಮಾಣಿಕವಲ್ಲದ ಸ್ವಾರ್ಥ ಉದ್ದೇಶದಿಂದ ಕ್ರಿಸ್ತನನ್ನು ಪ್ರಸಿದ್ಧಿಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆ ಕೆಲವರಾದರೋ ಸ್ವಾರ್ಥಸಾಧನೆಗಾಗಿಯೇ ಹೊರತು ಪ್ರಾಮಾಣಿಕರಾಗಿ ಕ್ರಿಸ್ತಯೇಸುವನ್ನು ಸಾರುತ್ತಿಲ್ಲ. ಸೆರೆಯಲ್ಲಿರುವ ನನ್ನನ್ನು ಇನ್ನೂ ಹೆಚ್ಚಿನ ಕಷ್ಟಕ್ಕೆ ಗುರಿಮಾಡಬೇಕೆಂಬುದೇ ಅವರ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ಬೇರೆ ತರದವರಾದರೋ ನಾನು ಬೇಡಿಬಿದ್ದಿರುವಾಗಲೂ ನನಗೆ ಸಂಕಟವನ್ನು ಎಬ್ಬಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಿಪಡಿಸದೆ ಕಕ್ಷಿಭಾವದಿಂದ ಪ್ರಸಿದ್ಧಿಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬೇರೆ ಕೆಲವರು ತಮ್ಮ ಸ್ವಾರ್ಥದ ದೆಸೆಯಿಂದ ಕ್ರಿಸ್ತನ ವಿಷಯವಾಗಿ ಬೋಧಿಸುತ್ತಾರೆ. ಅವರ ಸುವಾರ್ತಾಸೇವೆಯ ಉದ್ದೇಶವೇ ತಪ್ಪಾಗಿದೆ. ಸೆರೆಯಲ್ಲಿರುವ ನನಗೆ ತೊಂದರೆ ಮಾಡಬೇಕೆಂಬುದೇ ಅವರ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅನಿ ಉರಲ್ಲಿ ಲೊಕಾ ಖರ್ಯಾಪಾನಾನ್ ಪರ್ಗಟ್ ಕರಿನಾ ಹೊಲ್ಯಾತ್, ತೆನಿ ಬುರ್ಶ್ಯಾ ಮನಾನಿ ಅಪ್ಲ್ಯಾ ಸ್ವತಾಚ್ಯಾ ಸಾಟ್ನಿ ಮಾಕಾ ತರಾಸ್ ಲೈ ಹೊಂವ್ದಿ ಮನುನ್ ಕ್ರಿಸ್ತಾಕ್ ಪರ್ಗಟ್ ಕರ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:17
16 ತಿಳಿವುಗಳ ಹೋಲಿಕೆ  

ಸ್ವಾರ್ಥ ಉದ್ದೇಶದಿಂದಾಗಲಿ, ವ್ಯರ್ಥ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ ಪ್ರತಿಯೊಬ್ಬನೂ ದೀನತ್ವದಿಂದ ಮತ್ತೊಬ್ಬನನ್ನು ತನಗಿಂತಲೂ ಶ್ರೇಷ್ಠನೆಂದು ಎಣಿಸಲಿ.


ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸುವುದು ನನಗೆ ಸೂಕ್ತವಾಗಿದೆ. ಏಕೆಂದರೆ ನಾನು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ. ನಾನು ಬೇಡಿಗಳಿಂದ ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಸಮರ್ಥಿಸಿ ದೃಢಪಡಿಸುವಾಗಲೂ ನೀವೆಲ್ಲರು ನನ್ನೊಂದಿಗಿರುವ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.


ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರ ಲೆಕ್ಕಕ್ಕೆ ಸೇರಿಸಲಾಗದೆ ಇರಲಿ.


ಇದಕ್ಕಾಗಿಯೇ ಸಂದೇಶ ಸಾರುವವನೂ ಅಪೊಸ್ತಲನೂ ಆಗಿರುವ ನಾನು ಯೆಹೂದ್ಯರಲ್ಲದವರಿಗೆ ನಂಬಿಗಸ್ತನಾದ ಸತ್ಯ ಬೋಧಕನಾಗಿ ನೇಮಕವಾದೆನು. ಇದು ಸುಳ್ಳಲ್ಲ, ಸತ್ಯವನ್ನೇ ಹೇಳುತ್ತೇನೆ.


ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಧ್ಯೆ ಬಾಯಿ ಹಾಕಿ, “ಪೌಲನೇ, ನಿನಗೆ ಹುಚ್ಚುಹಿಡಿದಿದೆ! ನಿನ್ನ ಅಧಿಕಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ,” ಎಂದು ಗಟ್ಟಿಯಾಗಿ ಕೂಗಿದನು.


ಆಗ ಅಗ್ರಿಪ್ಪನು, “ನಿನ್ನ ಪರವಾಗಿ ಮಾತನಾಡಲು ನಿನಗೆ ಅಪ್ಪಣೆಯಿದೆ,” ಎಂದು ಪೌಲನಿಗೆ ಹೇಳಿದನು. ಆಗ ಪೌಲನು ಕೈಯೆತ್ತಿ ಹೀಗೆ ಪ್ರತಿವಾದಿಸತೊಡಗಿದನು:


“ಸಹೋದರರೇ, ತಂದೆಗಳೇ, ಈಗ ನಾನು ನಿಮಗೆ ಮಾಡುವ ಪ್ರತಿವಾದಕ್ಕೆ ಕಿವಿಗೊಡಿರಿ,” ಎಂದು ಪ್ರಾರಂಭಿಸಿದನು.


ಆಗ ನೀವು ಏನು ಉತ್ತರಕೊಡಬೇಕೆಂದು ಮುಂದಾಗಿ ಚಿಂತಿಸಬೇಕಾಗಿಲ್ಲವೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ.


ಯಾರು ಸ್ವಾರ್ಥಿಗಳಾಗಿದ್ದು ಸತ್ಯವನ್ನು ಅನುಸರಿಸದೆ ಅನೀತಿಯನ್ನು ಅನುಸರಿಸುತ್ತಾರೋ ಅವರ ವಿರುದ್ಧ ದೇವರಿಗೆ ಕೋಪವೂ ಆಕ್ರೋಶವೂ ಬರುತ್ತವೆ.


ಹೇಗಾದರೇನು? ಕಪಟದಿಂದಾಗಲಿ, ಸತ್ಯದಿಂದಾಗಲಿ ಯಾವ ರೀತಿಯಿಂದಾದರೂ ಕ್ರಿಸ್ತನನ್ನು ಅವರು ಸಾರುತ್ತಿರುವುದೇ ನನಗೆ ಸಂತೋಷ. ಹೌದು ಮುಂದೆಯೂ ಸಂತೋಷಿಸುವೆನು.


ಈ ಸುವಾರ್ತೆಗಾಗಿ ನಾನು ಕಷ್ಟವನ್ನು ಅನುಭವಿಸಿ ದುಷ್ಕರ್ಮಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು