Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:22 - ಕನ್ನಡ ಸಮಕಾಲಿಕ ಅನುವಾದ

22 ಶರೀರದಲ್ಲಿಯೇ ಬದುಕುವುದು ನನಗೆ ಫಲದಾಯಕವಾದ ಪ್ರಯಾಸವಾಗಿದ್ದರೆ, ನಾನು ಯಾವುದನ್ನು ಆರಿಸಿಕೊಳ್ಳಬೇಕೋ ನನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಶರೀರದಲ್ಲಿಯೇ ಬದುಕಬೇಕಾದ್ದಲ್ಲಿ ನನ್ನ ಕೆಲಸಮಾಡಿ ಫಲಹೊಂದಲು ನನಗೆ ಸಾಧ್ಯವಾಗುವುದು. ಹೀಗಿರಲಾಗಿ ನಾನು ಯಾವುದನ್ನಾರಿಸಿಕೊಳ್ಳಬೇಕೆನ್ನುವುದು ನನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದೈಹಿಕವಾಗಿ ಬದುಕುವುದು ಫಲಪ್ರದವಾಗಿದ್ದರೆ, ನಾನು ಬದುಕುವುದು ಉತ್ತಮವೋ ಅಥವಾ ಸಾಯುವುದು ಸೂಕ್ತವೋ ನನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಶರೀರದಲ್ಲಿಯೇ ಬದುಕಬೇಕಾದಲ್ಲಿ ಕೆಲಸಮಾಡಿ ಫಲ ಹೊಂದಲು ನನಗೆ ಅನುಕೂಲವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ಜೀವದಿಂದಿದ್ದರೆ ಫಲಫಲಿಸುವ ಕೆಲಸ ನನಗಿರುತ್ತದೆ. ಆದರೆ ನಾನು ಸಾಯಬೇಕೇ? ಅಥವಾ ಬದುಕಬೇಕೇ? ಏನನ್ನು ಆರಿಸಿಕೊಳ್ಳಬೇಕೋ ನನಗೆ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಕಾಮಾ ಕರುನ್ ಫಳ್ ಘೆತಲೆ ಮಾಜ್ಯಾ ಆಂಗಾಕ್ ಅನುಕುಲ್ ಹೊತಾ, ಅಶೆ ಹೊವ್ನ್ ಮಿಯಾ ಖಲೆ ಎಚುನ್ ಘೆವ್ಚೆ ಮನುನ್ ಮಾಕಾ ಕಳಿನಾ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:22
14 ತಿಳಿವುಗಳ ಹೋಲಿಕೆ  

ಅಂಥವರು ಉಳಿದಿರುವ ತಮ್ಮ ಭೂಲೋಕದ ಬಾಳಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವರು.


ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.


ಆದರೂ ನಾನು ಶರೀರದಲ್ಲಿಯೇ ಉಳಿದಿರುವುದು ನಿಮಗೋಸ್ಕರ ಬಹು ಅವಶ್ಯಕವಾಗಿದೆ.


“ಈಗ, ಪ್ರಿಯರೇ, ನೀವು ಅಜ್ಞಾನದಿಂದ ಹಾಗೆ ವರ್ತಿಸಿದಿರೆಂದು ನನಗೆ ಗೊತ್ತು. ಹಾಗೆಯೇ ನಿಮ್ಮ ನಾಯಕರೂ ಮಾಡಿದರು.


ನಾವು ಈ ಲೋಕದಲ್ಲಿ ಜೀವಿಸುವವರಾದರೂ, ನಾವು ಲೋಕದವರಂತೆ ಹೋರಾಟ ಮಾಡುವವರಲ್ಲ.


ದೇವರೇ, ನಾನು ಮುಪ್ಪಿನವನೂ, ನೆರೆಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿಮ್ಮ ಶಕ್ತಿಯನ್ನೂ, ಮುಂದಿನ ಪೀಳಿಗೆಗೆ ನಿಮ್ಮ ಪರಾಕ್ರಮವನ್ನೂ ತಿಳಿಸುವವರೆಗೂ ನನ್ನನ್ನು ಕೈಬಿಡಬೇಡಿರಿ.


ನಿಮಗಾಗಿಯೂ ಲವೊದಿಕೀಯದವರಿಗಾಗಿಯೂ ವೈಯಕ್ತಿಕವಾಗಿ ಭೇಟಿಯಾಗದವರಿಗಾಗಿಯೂ ನಾನು ಎಷ್ಟು ಶ್ರಮಿಸುತ್ತಿದ್ದೇನೆ ಎಂಬುದನ್ನು ನೀವು ತಿಳಿದಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.


ದೇವರು ತಾವು ಮುಂದಾಗಿ ತಿಳಿದುಕೊಂಡ ತಮ್ಮ ಜನರನ್ನು ತ್ಯಜಿಸಲಿಲ್ಲ. ದೇವರ ವಾಕ್ಯವು ಎಲೀಯನನ್ನು ಕುರಿತು ಏನು ಹೇಳುತ್ತದೆಂದು ನಿಮಗೆ ಗೊತ್ತಿಲ್ಲವೋ?


ಮೋಶೆಯು ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಾಯೇಲರು ನೋಡಿದಾಗ, ಅವರು ಆರೋನನ ಬಳಿಗೆ ಕೂಡಿಬಂದು ಅವನಿಗೆ, “ನೀನು ಎದ್ದು ನಮ್ಮನ್ನು ಮುನ್ನಡೆಸಿಕೊಂಡು ಹೋಗುವ ದೇವರುಗಳನ್ನು ನಮಗಾಗಿ ಮಾಡು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು,” ಎಂದರು.


ಆದರೆ ಅವನು ಅದಕ್ಕೆ ಒಪ್ಪದೆ, ತನ್ನ ಯಜಮಾನನ ಹೆಂಡತಿಗೆ, “ನನ್ನ ಯಜಮಾನನು ತನ್ನ ಮನೆಯಲ್ಲಿರುವ ಯಾವುದರ ಬಗ್ಗೆಯೂ ಚಿಂತಿಸದೆ, ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ.


ಅದಕ್ಕೆ ಅಬೀಮೆಲೆಕನು, “ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆ. ನೀನೂ ನನಗೆ ತಿಳಿಸಲಿಲ್ಲ. ನಾನು ಇಂದಿನವರೆಗೂ ಅದನ್ನು ಕೇಳಲೂ ಇಲ್ಲ,” ಎಂದನು.


ಪ್ರಿಯರೇ, ನನ್ನ ಸೇವೆಯು ಯೆಹೂದ್ಯರಲ್ಲದವರಲ್ಲಿ ಫಲಉಂಟಾದಂತೆ ನಿಮ್ಮಲ್ಲಿಯೂ ಫಲಉಂಟಾಗಬೇಕೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಉದ್ದೇಶಿಸಿದೆನು. ಆದರೆ ಅದಕ್ಕೆ ಇಂದಿನವರೆಗೂ ಅಡ್ಡಿಯಾಯಿತೆಂದು ನಿಮಗೆ ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ. ಇಲ್ಲಿಂದ ಹೊರಟು ಕ್ರಿಸ್ತನೊಡನೆ ಇರಬೇಕೆಂಬ ಆಶೆಯಿದೆ. ಅದು ಬಹು ಉತ್ತಮವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು