Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:23 - ಕನ್ನಡ ಸಮಕಾಲಿಕ ಅನುವಾದ

23 ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ. ಇಲ್ಲಿಂದ ಹೊರಟು ಕ್ರಿಸ್ತನೊಡನೆ ಇರಬೇಕೆಂಬ ಆಶೆಯಿದೆ. ಅದು ಬಹು ಉತ್ತಮವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಉಭಯ ಸಂಕಟಕ್ಕೆ ಸಿಲುಕಿದ್ದೇನೆ. ಒಂದು ಕಡೆ, ಈ ಬದುಕನ್ನು ತೊರೆದು ಕ್ರಿಸ್ತಯೇಸುವಿನೊಡನೆ ಒಂದಾಗಿರಬೇಕೆಂಬುದೇ ನನ್ನ ಬಯಕೆ. ಇದು ಎಷ್ಟೋ ಮೇಲಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಇವೆರಡರಲ್ಲಿ ಯಾವುದನ್ನು ಆರಿಸಿಕೊಳ್ಳಬೇಕೆಂಬುದೇ ಕಷ್ಟ. ನಾನು ಈ ಜೀವಿತವನ್ನು ಬಿಟ್ಟು ಆತನೊಂದಿಗಿರಲು ಅಪೇಕ್ಷಿಸುತ್ತೇನೆ. ಅದೇ ಉತ್ತಮವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಖರೆ ಮಿಯಾ ಹ್ಯಾ ದೊನಾಚ್ಯಾ ಮದ್ದಿ ಗಾವ್ನ್ ಪಡ್ಲಾ, ಹ್ಯಾತುರ್‍ನಾ ಸುಟ್ಕಾ ಹೊವ್ನ್ ಕ್ರಿಸ್ತಾ ವಾಂಗ್ಡಾ ರ್‍ಹಾವ್ಚೆ ಮನ್ತಲಿ ಮಾಜಿ ಆಶ್ಯಾ, ಅನಿ ತೆ ಲೈ ಬರೆ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:23
24 ತಿಳಿವುಗಳ ಹೋಲಿಕೆ  

ನಮ್ಮ ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವುದು ಉತ್ತಮವೆಂದು ಆಶಿಸಿ, ಅದರಲ್ಲಿ ಭರವಸೆ ಉಳ್ಳವರಾಗಿರುತ್ತೇವೆ.


ನಾನಾದರೋ ನೀತಿಯಲ್ಲಿ ನಿಮ್ಮ ಮುಖವನ್ನು ನೋಡುವೆನು. ನಾನು ಎಚ್ಚೆತ್ತಾಗ ನಿಮ್ಮ ಹೋಲಿಕೆಯನ್ನೇ ಕಂಡು ತೃಪ್ತನಾಗುವೆನು.


ಪರಲೋಕದಿಂದ ಒಂದು ಧ್ವನಿಯು ನನಗೆ, “ಇಂದಿನಿಂದ ಕರ್ತರಲ್ಲಿ ವಿಶ್ವಾಸವುಳ್ಳವರು ಧನ್ಯರು ಎಂಬುದಾಗಿ ಬರೆ!” ಎಂದು ಹೇಳಿತು. ಅದಕ್ಕೆ ಪವಿತ್ರಾತ್ಮ ದೇವರು, “ಹೌದು, ಅವರ ಪ್ರಯಾಸಗಳು ತೀರಿದವು ಅವರಿಗೆ ವಿಶ್ರಾಂತಿಯಾಗುವುದು, ಅವರ ಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ!” ಎಂದು ಹೇಳುತ್ತಾರೆ.


ನ್ಯಾಯಸಭೆಯವರು ಕಲ್ಲೆಸೆಯುತ್ತಿದ್ದಾಗ, ಸ್ತೆಫನನು, “ಕರ್ತ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿರಿ,” ಎಂದು ಪ್ರಾರ್ಥಿಸಿದನು.


ಆಗ ಯೇಸು ಅವನಿಗೆ, “ಈ ದಿನವೇ ನೀನು ನನ್ನ ಸಂಗಡ ಪರದೈಸಿನಲ್ಲಿರುವೆ ಎಂದು ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ಏಕೆಂದರೆ ನಾನು ಈಗಲೇ ಪಾನ ಅರ್ಪಣೆಯಾಗಿ ಇದ್ದೇನೆ. ನಾನು ಹೊರಟುಹೋಗಬೇಕಾದ ಸಮಯವು ಹತ್ತಿರ ಬಂದಿದೆ.


“ತಂದೆಯೇ, ನೀವು ನನಗೆ ಕೊಟ್ಟವರು ನಾನಿರುವಲ್ಲಿಯೇ ನನ್ನೊಂದಿಗೆ ಇದ್ದುಕೊಂಡು ಜಗದುತ್ಪತ್ತಿಗೆ ಮುಂಚೆ ನೀವು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ಕಾಣಬೇಕೆಂದು ನಾನು ಅಪೇಕ್ಷಿಸುತ್ತೇನೆ.


ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.


ಆದರೆ ದೇವರು ನನ್ನ ಪ್ರಾಣವನ್ನು ಮರಣದಿಂದ ವಿಮೋಚನೆ ಮಾಡುವರು. ದೇವರು ನನ್ನನ್ನು ತಮಗಾಗಿ ಅಂಗೀಕರಿಸುವರು.


ಆಮೇಲೆ, ಜೀವದಿಂದ ಉಳಿದಿರುವ ನಾವು ಅವರೊಂದಿಗೆ ಅಂತರಿಕ್ಷದಲ್ಲಿ ಕರ್ತ ಯೇಸುವನ್ನು ಎದುರುಗೊಳ್ಳುವುದಕ್ಕಾಗಿ ಮೇಘಗಳಲ್ಲಿ ಒಯ್ಯಲಾಗುವೆವು. ಹೀಗೆ ನಾವು ಸದಾಕಾಲವೂ ಕರ್ತ ಯೇಸುವಿನ ಜೊತೆಯಲ್ಲಿಯೇ ಇರುವೆವು.


ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಮಾಡಿದ ಮೇಲೆ ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಆಗ ನಾನಿರುವಲ್ಲಿ ನೀವು ಸಹ ಇರುವಿರಿ.


ಆದರೆ ನಾನು ಪಡೆಯಲಿರುವ ಒಂದು ದೀಕ್ಷಾಸ್ನಾನ ಉಂಟು, ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!


ಈ ಕಾರಣಕ್ಕಾಗಿಯೇ ನಂಬುವವರಾದ ನಿಮ್ಮಲ್ಲಿ ಕಾರ್ಯಸಾಧಿಸುವ ದೇವರ ವಾಕ್ಯವನ್ನು ನಮ್ಮಿಂದ ನೀವು ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ, ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.


ಅಂದು ಪಸ್ಕಹಬ್ಬದ ಹಿಂದಿನ ದಿನವಾಗಿತ್ತು. ಯೇಸು ತಾವು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಸಮಯ ಬಂತೆಂದು ತಿಳಿದು, ಈ ಲೋಕದಲ್ಲಿದ್ದ ತಮ್ಮವರನ್ನು ಪ್ರೀತಿಸುತ್ತಿದ್ದ ಆ ಪ್ರೀತಿಯ ಪರಿಪೂರ್ಣತೆಯನ್ನು ಈಗ ತೋರಿಸಲಿದ್ದರು.


ಆಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ತಾನೂ ಅವರ ಜೊತೆಯಲ್ಲಿ ಬರುವೆನೆಂದು, ಯೇಸುವನ್ನು ಬೇಡಿಕೊಂಡನು, ಆದರೆ ಯೇಸು ಅವನಿಗೆ,


ಪ್ರಿಯರೇ, ನಾವು ನಿಮ್ಮ ಬಳಿಗೆ ಬಂದದ್ದು ವ್ಯರ್ಥವಾಗಲಿಲ್ಲವೆಂಬುದನ್ನು ನೀವು ತಿಳಿದಿದ್ದೀರಿ.


ನಿಮ್ಮ ಕಡೆಗಿರುವ ನಮ್ಮ ಪ್ರೀತಿಯನ್ನು ನಿಲ್ಲಿಸಲಿಲ್ಲ. ಆದರೆ ನೀವು ನಮಗೆ ತೋರಿಸಬೇಕಾದ ಪ್ರೀತಿಯನ್ನು ತೋರಿಸಲಿಲ್ಲ.


ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಈಗ ಯೆಹೋವ ದೇವರ ಕೈಯಲ್ಲಿಯೇ ಬೀಳೋಣ, ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.


ಆದರೂ ನಾನು ಶರೀರದಲ್ಲಿಯೇ ಉಳಿದಿರುವುದು ನಿಮಗೋಸ್ಕರ ಬಹು ಅವಶ್ಯಕವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು