Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:11 - ಕನ್ನಡ ಸಮಕಾಲಿಕ ಅನುವಾದ

11 ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತದೇವರು ಎಂಬುದಾಗಿ ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ‘ಕ್ರಿಸ್ತಯೇಸುವೇ ಪ್ರಭು' ಎಂದೆಲ್ಲರಿಗೆ ಅರಿಕೆ ಮಾಡುವರು ಪಿತದೇವನ ಮಹಿಮೆಯನು ಈ ಪರಿ ಹೊಗಳಿ ಸಾರುವರವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೇಸು ಕ್ರಿಸ್ತನನ್ನು ಒಡೆಯನೆಂದು ಪ್ರತಿಜ್ಞೆಮಾಡಿ ತಂದೆಯಾದ ದೇವರಿಗೆ ಘನವನ್ನು ಸಲ್ಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಯೇಸು ಕ್ರಿಸ್ತನೇ ಪ್ರಭು”ವೆಂದು ಹೇಳುವರು. ಇದರಿಂದ ತಂದೆಯಾದ ದೇವರಿಗೆ ಮಹಿಮೆ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅನಿ ಬಾಬಾ ದೆವಾಚ್ಯಾ ಮಹಿಮಾ ಸಾಟ್ನಿ ಹರ್ ಎಕ್ಲೊಬಿ ಜೆಜುಕ್ರಿಸ್ತುಚ್ ಧನಿ ಮನುನ್ ಸಾಂಗ್ತಾತ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:11
30 ತಿಳಿವುಗಳ ಹೋಲಿಕೆ  

ಯೇಸು ದೇವರ ಪುತ್ರರಾಗಿದ್ದಾರೆಂದು ಯಾರು ಒಪ್ಪಿಕೊಳ್ಳುತ್ತಾರೋ, ಅವರಲ್ಲಿ ದೇವರು ಬಾಳುತ್ತಾರೆ ಮತ್ತು ಅವರು ದೇವರಲ್ಲಿ ಬಾಳುವವರಾಗಿದ್ದಾರೆ.


ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ನಾನು ಜೀವಿಸುವುದರಿಂದ, ಪ್ರತಿಯೊಬ್ಬರೂ ನನ್ನ ಮುಂದೆ ಮೊಣಕಾಲೂರುವರು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಅರಿಕೆ ಮಾಡುವುದು,’ ಎಂದು ಕರ್ತನು ಹೇಳುತ್ತಾರೆ.”


ನೀವು ನನ್ನನ್ನು ‘ಬೋಧಕರೇ’ ಮತ್ತು ‘ಕರ್ತಾ’ ಎಂದು ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ.


ನೀವು ದೇವರಾತ್ಮನನ್ನು ಹೀಗೆ ಗುರುತಿಸಬಹುದು: ಕ್ರಿಸ್ತ ಯೇಸು ನರಮಾಂಸರಾಗಿ ಬಂದರೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದು.


ಈ ಕಾರಣಕ್ಕಾಗಿಯೇ, ಜೀವಿಸುವವರಿಗೂ ಸತ್ತವರಿಗೂ ಕರ್ತನಾಗಿರಬೇಕೆಂದು ಕ್ರಿಸ್ತನು ಮರಣಹೊಂದಿ ಪುನರುತ್ಥಾನಗೊಂಡರು.


ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ: ದೇವರಾತ್ಮರಿಂದ ಮಾತನಾಡುವ ಯಾವನೂ, “ಯೇಸು ಶಾಪಗ್ರಸ್ತನು,” ಎಂದು ಹೇಳುವುದಿಲ್ಲ. ಪವಿತ್ರಾತ್ಮರಿಂದಲೇ ಹೊರತು, ಯಾವನೂ, “ಯೇಸು ಕರ್ತದೇವರು,” ಎಂದು ಹೇಳಲಾರನು.


ನನ್ನ ಹೆಸರಿನಲ್ಲಿ ನೀವು ಏನೇನು ಕೇಳಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ತಂದೆಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು.


ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿ ಅವರಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಕ್ರಿಸ್ತ ಯೇಸುವಿನ ಮೂಲಕ ವಿಶ್ವಾಸವಿಟ್ಟಿದ್ದೀರಿ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರಲಿ.


ನಮಗಾದರೋ ತಂದೆ ದೇವರು ಒಬ್ಬರೇ ಇರುತ್ತಾರೆ. ಅವರಿಂದಲೇ ಸಮಸ್ತವೂ ಉಂಟಾಯಿತು. ಅವರಿಗಾಗಿಯೇ ನಾವು ಜೀವಿಸುತ್ತೇವೆ. ನಮಗಿರುವ ಕರ್ತದೇವರು ಒಬ್ಬರೇ. ಅವರೇ ಕ್ರಿಸ್ತ ಯೇಸು. ಅವರಿಂದಲೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ.


ಜಯಹೊಂದುವವರಿಗೆ ಹೀಗೆ ಬಿಳಿಯ ವಸ್ತ್ರಗಳನ್ನು ಹೊದಿಸಲಾಗುವುದು. ಅವರ ಹೆಸರನ್ನು ಜೀವಬಾಧ್ಯರ ಪಟ್ಟಿಯಿಂದ ನಾನು ಅಳಿಸಿಬಿಡದೆ, ಅವರ ಹೆಸರನ್ನು ನನ್ನ ತಂದೆಯ ಮುಂದೆಯೂ ಅವರ ದೂತರ ಮುಂದೆಯೂ ಅರಿಕೆ ಮಾಡುವೆನು.


“ಜನರ ಮುಂದೆ ನನ್ನನ್ನು ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.


ಸರ್ವಸೃಷ್ಟಿಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಸಮಾಧಾನದ ಶುಭಸಮಾಚಾರ ಹೇಳುತ್ತಾ, ಇಸ್ರಾಯೇಲ್ ಜನರಿಗೆ ದೇವರು ಕಳುಹಿಸಿದ ವಾಕ್ಯವನ್ನು ನೀವು ತಿಳಿದಿದ್ದೀರಿ.


“ಆದ್ದರಿಂದ ನೀವು ಶಿಲುಬೆಗೇರಿಸಿದ ಈ ಯೇಸುವನ್ನೇ ದೇವರು ಕರ್ತ ಹಾಗೂ ಕ್ರಿಸ್ತ ಆಗಿಯೂ ಮಾಡಿದ್ದಾರೆ ಎಂಬುದು ಎಲ್ಲಾ ಇಸ್ರಾಯೇಲ್ ಮನೆತನದವರಿಗೆ ಸ್ಪಷ್ಟವಾಗಿ ತಿಳಿದಿರಲಿ,” ಎಂದನು.


ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಭಯಪಟ್ಟಿದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ, ಅವರನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯ ನಾಯಕರು ಈ ಮೊದಲೇ ಗೊತ್ತುಮಾಡಿದ್ದರು.


ಎಲ್ಲರೂ ತಂದೆಯನ್ನು ಸನ್ಮಾನಿಸುವಂತೆಯೇ ಪುತ್ರನನ್ನೂ ಸನ್ಮಾನಿಸಬೇಕು. ಪುತ್ರನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿದ ತಂದೆಯನ್ನೂ ಸನ್ಮಾನಿಸುವುದಿಲ್ಲ.


ಯೆಹೋವ ದೇವರು ನನ್ನ ಕರ್ತ ಆಗಿರುವವರಿಗೆ ಹೇಳಿದ್ದೇನೆಂದರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರಿ.”


ಏಕೆಂದರೆ ನರಮಾಂಸದಲ್ಲಿ ಬಂದಿರುವ ಕ್ರಿಸ್ತ ಯೇಸುವನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವರೇ ಮೋಸಗಾರರೂ ಕ್ರಿಸ್ತವಿರೋಧಿಗಳೂ ಆಗಿದ್ದಾರೆ.


ಮೊದಲನೆಯ ಮನುಷ್ಯ, ಭೂಮಿಯ ಮಣ್ಣಿನವನಾಗಿದ್ದಾನೆ, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು.


ಇದಲ್ಲದೆ ಯೆಹೂದ್ಯರಲ್ಲದವರು ದೇವರ ಕರುಣೆಗಾಗಿ ದೇವರನ್ನು ಮಹಿಮೆ ಪಡಿಸುವಂತೆ ಹೀಗೆ ಮಾಡಿದರು. ಇದು ಪವಿತ್ರ ವೇದದಲ್ಲಿ ಹೀಗೆ ಬರೆದದ್ದನ್ನು ನೆರವೇರಿಸಿತು: “ಆದ್ದರಿಂದ ಯೆಹೂದ್ಯರಲ್ಲದವರ ನಡುವೆ ನಾನು ನಿನ್ನನ್ನು ಸ್ತುತಿಸುವೆನು, ನಾನು ನಿನ್ನ ನಾಮವನ್ನು ಸ್ತುತಿಸಿ ಹಾಡುವೆನು.”


ಆಗ ತೋಮನು, “ನನ್ನ ಕರ್ತ, ನನ್ನ ದೇವರೇ!” ಎಂದನು.


ಯೇಸು ಇಷ್ಟೆಲ್ಲಾ ಮಾತನಾಡಿ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ, “ತಂದೆಯೇ, ಸಮಯ ಬಂದಿದೆ. ನಿಮ್ಮ ಪುತ್ರನು ನಿಮ್ಮನ್ನು ಮಹಿಮೆಪಡಿಸುವುದಕ್ಕಾಗುವಂತೆ ಆತನನ್ನು ಮಹಿಮೆಪಡಿಸಿರಿ.


ಆದರೂ ಅಧಿಕಾರಿಗಳಲ್ಲಿ ಅನೇಕರು ಆ ಸಮಯದಲ್ಲಿ ಯೇಸುವನ್ನು ನಂಬಿದರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕಾರ ಆಗಬಾರದೆಂದು ಅವರು ತಮ್ಮ ನಂಬಿಕೆಯನ್ನು ಬಹಿರಂಗವಾಗಿ ಅರಿಕೆ ಮಾಡಲಿಲ್ಲ.


ಅದೇನೆಂದರೆ, ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕರು ಹುಟ್ಟಿದ್ದಾರೆ. ಅವರು ಯಾರೆಂದರೆ ಕರ್ತದೇವರು ಆಗಿರುವ ಕ್ರಿಸ್ತ.


ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.


ಆದ್ದರಿಂದ ಯೆಹೋವ ದೇವರೇ, ನಾನು ಜನಾಂಗಗಳಲ್ಲಿ ನಿಮ್ಮನ್ನು ಕೊಂಡಾಡುವೆನು, ನಿಮ್ಮನ್ನು ಕೊಂಡಾಡಿ ನಿಮ್ಮ ಹೆಸರನ್ನು ಕೀರ್ತಿಸುವೆನು.


ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ಅವನು ನನ್ನ ವಾಕ್ಯವನ್ನು ಕೈಗೊಳ್ಳುವನು. ನನ್ನ ತಂದೆಯು ಅವನನ್ನು ಪ್ರೀತಿಸುವರು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಿವಾಸಮಾಡಿಕೊಳ್ಳುವೆವು.


ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು