Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:29 - ಕನ್ನಡ ಸಮಕಾಲಿಕ ಅನುವಾದ

29 ನೀವು ಅವನನ್ನು ಪೂರ್ಣ ಆನಂದದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29-30 ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕೊರತೆಯಾದದ್ದನ್ನು ತುಂಬುವುದಕ್ಕಾಗಿ ಅವನು ಜೀವದ ಆಸೆಯನ್ನು ತೊರೆದು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಸ್ಥಿತಿಯಲ್ಲಿದುದ್ದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನ ಹೆಸರಿನಲ್ಲಿ ಸೇರಿಸಿಕೊಳ್ಳಿರಿ. ಅಂಥವರನ್ನು ಮಾನ್ಯರೆಂದೆಣಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಪ್ರಭುವಿನ ಹೆಸರಿನಲ್ಲಿ ನೀವು ಅವನನ್ನು ತುಂಬು ಹೃದಯದಿಂದ ಸ್ವಾಗತಿಸಿರಿ. ಅವನಂಥವರಿಗೆ ಸೂಕ್ತ ಗೌರವ ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29-30 ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯಮಾಡದೆ ಕ್ರಿಸ್ತನ ಕೆಲಸದ ನಿವಿುತ್ತ ಸಾಯುವ ಹಾಗಿದ್ದನೆಂದು ನೀವು ತಿಳಿದು ಅವನನ್ನು ಪೂರ್ಣ ಸಂತೋಷದಿಂದ ಕರ್ತನ ಹೆಸರಿನಲ್ಲಿ ಸೇರಿಸಿಕೊಳ್ಳಿರಿ. ಅಂಥವರನ್ನು ಮಾನ್ಯರೆಂದೆಣಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮಹಾ ಆನಂದದಿಂದ ಪ್ರಭುವಿನಲ್ಲಿ ಅವನನ್ನು ಸ್ವಾಗತಿಸಿರಿ. ಎಪಫ್ರೊದೀತನಂಥ ಜನರನ್ನು ಗೌರವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತಸೆ ಹೊವ್ನ್, ತುಮಿ ತೆಕಾ ಎಕ್ ಭಾವಾ ಸಾರ್ಕೆ ಫುರಾ ಕುಶಿನ್ ಧನಿಯಾಕ್ ಮಿಳ್ವುನ್ ಘೆವಾ, ಅನಿ ತಸ್ಲ್ಯಾಕ್ನಿ ಸನ್ಮಾನ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:29
21 ತಿಳಿವುಗಳ ಹೋಲಿಕೆ  

ಸಭಾಕಾರ್ಯಗಳನ್ನು ಸರಿಯಾಗಿ ನಡೆಸುತ್ತಿರುವ ಹಿರಿಯರು, ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆಯಲ್ಲಿಯೂ ಶ್ರಮಿಸುತ್ತಿರುವವರು ಇಮ್ಮಡಿಯಾದ ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.


ಪ್ರಿಯರೇ, ಯಾರು ನಿಮ್ಮ ನಡುವೆ ಪ್ರಯಾಸಪಟ್ಟು ಕರ್ತ ಯೇಸುವಿನಲ್ಲಿ ನಿಮ್ಮನ್ನು ಪರಾಮರಿಸುವವರಾಗಿದ್ದು ನಿಮಗೆ ಬುದ್ಧಿ ಹೇಳುತ್ತಾರೋ ಅವರನ್ನು ಗೌರವಿಸಿರಿ.


ಅವರು ನನ್ನ ಆತ್ಮವನ್ನೂ, ನಿಮ್ಮ ಆತ್ಮಗಳನ್ನೂ ಉಪಶಮನ ಮಾಡಿದರು. ನೀವು ಇಂಥವರನ್ನು ಸನ್ಮಾನಿಸಿರಿ.


ಕರ್ತನಲ್ಲಿ ದೇವಜನರಿಗೆ ಯೋಗ್ಯವಾಗಿರುವ ರೀತಿಯಲ್ಲಿ ಆಕೆಯನ್ನು ಸ್ವೀಕರಿಸಿ, ಆಕೆಯು ಅನೇಕರಿಗೂ ನನಗೂ ವಿಶೇಷವಾದ ರೀತಿಯಲ್ಲಿ ಸಹಾಯ ಮಾಡಿದವಳಾಗಿರುವುದರಿಂದ ನಿಮಗೆ ಯಾವ ಕೊರತೆಗಳಿದ್ದರೂ ಆಕೆಗೆ ಬೇಕಾದದ್ದನ್ನು ಒದಗಿಸಿರಿ.


ತನ್ನನ್ನು ತಾನೇ ಹೊಗಳಿಕೊಳ್ಳುವವನಲ್ಲ, ಕರ್ತ ಯೇಸು ಯಾರನ್ನು ಹೊಗಳುತ್ತಾರೋ ಅವನೇ ಯೋಗ್ಯನು.


ನನ್ನ ಹಾಗೆಯೇ ತಿಮೊಥೆ ಕರ್ತನ ಸೇವೆ ಮಾಡುತ್ತಿದ್ದಾನೆ. ಅವನು ಬಂದರೆ, ಅವನು ನಿಮ್ಮೊಂದಿಗಿರುವಾಗ ಅವನಿಗೆ ಯಾವ ಭಯವೂ ಇಲ್ಲದಂತೆ ನೋಡಿಕೊಳ್ಳಿರಿ.


ಆದಕಾರಣ ನಾನು ಬಂದಾಗ ನಮ್ಮನ್ನು ದೂಷಿಸಿ ನಮ್ಮ ವಿಷಯದಲ್ಲಿ ಕೆಟ್ಟ ಕೆಟ್ಟ ಮಾತುಗಳನ್ನಾಡುವ ಅವನ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಇದರಲ್ಲಿ ತೃಪ್ತನಾಗದೆ, ಸಹೋದರರನ್ನು ತಾನೂ ಸೇರಿಸಿಕೊಳ್ಳದೆ, ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿ ಮಾಡುತ್ತಾ, ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಿದ್ದಾನೆ.


ನಿಮ್ಮ ನಾಯಕರಿಗೆ ವಿಧೇಯರಾಗಿದ್ದು, ಅವರಿಗೆ ಅಧೀನರಾಗಿರಿ. ಏಕೆಂದರೆ ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಮನನೊಂದವರಾಗದೆ ಸಂತೋಷದಿಂದ ಇದನ್ನು ಮಾಡುವವರಾಗಲಿ. ಏಕೆಂದರೆ ಅವರು ಮನನೊಂದವರಾಗಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.


ನನ್ನ ಜೊತೆ ಸೆರೆಯಾಳಾದ ಅರಿಸ್ತಾರ್ಕ, ಬಾರ್ನಬನ ಸಹೋದರಿಯ ಮಗನಾದ ಮಾರ್ಕನು ನಿಮಗೆ ವಂದನೆ ಹೇಳುತ್ತಾರೆ. ಮಾರ್ಕನ ವಿಷಯದಲ್ಲಿ ನೀವು ಮಾರ್ಗದರ್ಶನ ಹೊಂದಿದ್ದೀರಲ್ಲಾ, ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ.


ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳ ಕೊಡಿರಿ. ನಾವು ಯಾರಿಗೂ ಅನ್ಯಾಯ ಮಾಡಲಿಲ್ಲ, ಯಾರಿಗೂ ನಾವು ಕೇಡು ಬಗೆಯಲಿಲ್ಲ, ನಾವು ಸ್ವಂತ ಲಾಭಕ್ಕಾಗಿ ಯಾರನ್ನೂ ದುಡಿಸಿಕೊಳ್ಳಲಿಲ್ಲ.


ಅವರು ಕಳುಹಿಸದ ಹೊರತು ಸಾರುವುದಾದರೂ ಹೇಗೆ? ಆದ್ದರಿಂದಲೇ, “ಶುಭವರ್ತಮಾನವನ್ನು ಸಾರುವವರ ಪಾದಗಳು ಎಷ್ಟೊಂದು ಅಂದವಾಗಿವೆ!” ಎಂದು ಬರೆಯಲಾಗಿದೆ.


ಅವರು ಅನೇಕ ವಿಧವಾಗಿ ನಮ್ಮನ್ನು ಗೌರವಿಸಿದರು. ನಾವು ಪ್ರಯಾಣಕ್ಕೆ ಸಿದ್ಧರಾದಾಗ ನಮಗೆ ಅಗತ್ಯವಿದ್ದವುಗಳನ್ನೆಲ್ಲಾ ತಂದು ಒದಗಿಸಿಕೊಟ್ಟರು.


ಇದರಿಂದ ಆ ಪಟ್ಟಣದಲ್ಲಿ ಮಹಾ ಸಂತೋಷವಾಯಿತು.


ಪ್ರತಿದಿನವೂ ದೇವಾಲಯದಲ್ಲಿ ಒಮ್ಮನಸ್ಸಿನಿಂದ ಸಭೆ ಕೂಡಿಬರುವುದನ್ನು ಕ್ರಮವಾಗಿ ಮುಂದುವರೆಸಿದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಆನಂದದಿಂದಲೂ ಸರಳ ಹೃದಯದಿಂದಲೂ ಊಟಮಾಡುತ್ತಿದ್ದರು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ಕಳುಹಿಸಿದ ತಂದೆಯನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದ ತಂದೆಯನ್ನೇ ಸ್ವೀಕರಿಸುತ್ತಾನೆ.”


ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ, ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ,” ಎಂದರು.


ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಒಳ್ಳೆಯ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವವನ ಪಾದಗಳು ಪರ್ವತಗಳ ಮೇಲೆ ಎಷ್ಟೊಂದು ಅಂದವಾಗಿವೆ!


ಆದ್ದರಿಂದ ನೀವು ಅವನನ್ನು ನೋಡಿ ಪುನಃ ಆನಂದಿಸುವಂತೆಯೂ ನನಗೆ ದುಃಖ ಕಡಿಮೆಯಾಗುವಂತೆಯೂ ನಾನು ಅವನನ್ನು ಅತ್ಯಾಸಕ್ತಿಯಿಂದ ಕಳುಹಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು