Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:19 - ಕನ್ನಡ ಸಮಕಾಲಿಕ ಅನುವಾದ

19 ವಿನಾಶನವೇ ಅವರ ಅಂತ್ಯವು. ಹೊಟ್ಟೆಯೇ ಅವರ ದೇವರು. ನಾಚಿಕೆ ಕಾರ್ಯಗಳಲ್ಲಿಯೇ ಅವರ ಪ್ರಭಾವ. ಅವರು ಲೌಕಿಕವಾದವುಗಳ ಮೇಲೆ ಮನಸ್ಸಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು, ಅವರು ಪ್ರಪಂಚದ ಕಾರ್ಯಗಳ ಮೇಲೆ ಮನಸ್ಸಿಡುವವರು. ನಾವಾದರೋ ಪರಲೋಕಸಂಸ್ಥಾನದವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವರ ನಡತೆಯು ಅವರನ್ನು ನಾಶದೆಡೆಗೆ ನಡೆಸುತ್ತಿದೆ. ಅವರು ದೇವರ ಸೇವೆ ಮಾಡುತ್ತಿಲ್ಲ. ಆ ಜನರು ಕೇವಲ ತಮ್ಮ ಸಂತೋಷಕ್ಕಾಗಿ ಜೀವಿಸುತ್ತಿದ್ದಾರೆ. ಅವರು ನಾಚಿಕೆಕರವಾದ ಕೆಲಸಗಳನ್ನು ಮಾಡಿ, ಅವುಗಳ ಬಗ್ಗೆ ಹೆಮ್ಮೆಪಡುತ್ತಾರೆ. ಅವರು ಕೇವಲ ಈ ಲೋಕದ ವಿಷಯಗಳ ಬಗ್ಗೆ ಆಲೋಚಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತೆಂಕಾ ಆಕ್ರಿಕ್ ಗಾವ್ತಲೆ ನಾಶುಚ್, ತೆಂಚೆ ಪೊಟುಚ್ ತೆಂಚೊ ದೆವ್, ಮರ್ಯ್ಯಾದ್ ಗೆಡಿ ಕಾಮಚ್ ತೆಂಕಾ ಗೌರವ್ ದಿತ್ಯಾತ್, ತೆನಿ ಹ್ಯಾ ಜಗಾಕ್ ಸಮಂದ್ ಪಡಲ್ಯಾ ವಿಶಯಾತ್ನಿ ಮನ್ ಥವ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:19
52 ತಿಳಿವುಗಳ ಹೋಲಿಕೆ  

ಅಂಥಾ ಜನರು ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಸೇವೆ ಮಾಡುವವರಾಗಿರದೆ ತಮ್ಮ ಹೊಟ್ಟೆಯ ಸೇವೆ ಮಾಡುವವರಾಗಿರುತ್ತಾರೆ. ನಯವಾದ ಮತ್ತು ಮುಖಸ್ತುತಿಯ ಮಾತುಗಳಿಂದ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.


ಪರಲೋಕದ ಕಾರ್ಯಗಳ ಮೇಲೆಯೇ ನಿಮ್ಮ ಮನಸ್ಸಿಡಿರಿ, ಭೂಸಂಬಂಧವಾದವುಗಳ ಮೇಲೆ ಮನಸ್ಸಿಡಬೇಡಿರಿ.


ಆದರೆ ಆ ಕಾಲದಲ್ಲಿ ಸುಳ್ಳು ಪ್ರವಾದಿಗಳು ಸಹ ಜನರಲ್ಲಿ ಕಾಣಿಸಿಕೊಂಡರು. ಅದೇ ಪ್ರಕಾರ ನಿಮ್ಮಲ್ಲಿಯೂ ಈಗ ಸುಳ್ಳು ಬೋಧಕರು ಕಾಣಿಸಿಕೊಳ್ಳುವರು. ಅಂಥವರು ಹಾನಿಕರವಾದ ಸುಳ್ಳು ಬೋಧನೆಗಳನ್ನು ರಹಸ್ಯವಾಗಿ ಸಭೆಯೊಳಗೆ ತರುವರು. ತಮ್ಮನ್ನು ಕೊಂಡುಕೊಂಡ ಸಾರ್ವಭೌಮ ಕರ್ತ ಆಗಿರುವವರನ್ನೇ ಅಲ್ಲಗಳೆಯುವರು. ಹೀಗೆ ಅವರು ತಮ್ಮ ಮೇಲೆ ವಿನಾಶವನ್ನು ತಾವೇ ಬರಮಾಡಿಕೊಳ್ಳುವರು.


ಆದ್ದರಿಂದ ಸೈತಾನನ ಸೇವಕರೂ ನೀತಿಯ ಸೇವಕರಂತೆ ಕಾಣಿಸಿಕೊಳ್ಳುವುದಕ್ಕೆ ತಮ್ಮನ್ನು ಮಾರ್ಪಡಿಸಿಕೊಳ್ಳುವುದು ಆಶ್ಚರ್ಯವೇನೂ ಅಲ್ಲ. ಅವರ ಕೃತ್ಯಗಳಿಗೆ ತಕ್ಕಂತೆ ಅವರಿಗೆ ಅಂತ್ಯವೂ ಇರುವುದು.


ತಾವು ಮಾಡುವ ಕಾರ್ಯಗಳ ಬಗ್ಗೆ ನಮ್ಮೊಂದಿಗೆ ಸರಿಸಮಾನವೆಂದು ಹೊಗಳಿಕೊಳ್ಳಲು ಅವಕಾಶವನ್ನು ಹುಡುಕುವವರಿಗೆ, ಯಾವ ಆಸ್ಪದವೂ ಸಿಗದಂತೆ ನಾನು ಮಾಡುತ್ತಿರುವುದನ್ನು ನಿಲ್ಲಿಸದೆ, ಇನ್ನು ಮುಂದೆಯೂ ಮಾಡುತ್ತಿರುವೆನು.


ಯಾಜಕರು ಹೆಚ್ಚಿದ ಹಾಗೆಲ್ಲಾ ಅವರು ನನಗೆ ವಿರೋಧವಾಗಿ ಪಾಪಮಾಡಿದ್ದಾರೆ. ಆದ್ದರಿಂದ ನಾನು ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುವೆನು.


ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯನ್ನು ಹಗಲಲ್ಲಿ ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಕಳಂಕಕ್ಕೂ, ನಿಂದೆಗೂ ಕಾರಣರಾಗಿದ್ದಾರೆ.


ಸುನ್ನತಿ ಮಾಡಿಸಿಕೊಳ್ಳುವ ತಾವಾದರೋ ನಿಯಮವನ್ನು ಕೈಗೊಂಡು ನಡೆಯುವುದಿಲ್ಲ. ಆದರೆ ಅವರು ನಿಮ್ಮ ಶರೀರದ ಸುನ್ನತಿಯಿಂದ ಹೆಚ್ಚಳಪಡುವಂತೆ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ಏಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ಹೇಗೆಂದರೆ, ನಿಮ್ಮೊಳಗೆ ಅಸೂಯೆ, ಜಗಳಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದೀರಲ್ಲದೆ ಕೇವಲ ಮಾನವರಂತೆ ನಡೆಯುತ್ತೀರಲ್ಲವೇ?


ಯೆಹೋವ ದೇವರೇ, ಈ ಲೋಕಜೀವನದಲ್ಲಿಯಷ್ಟೇ ಪ್ರತಿಫಲವೆಂದು ತಿಳಿಯುವ ಜನರಿಂದ, ನನ್ನನ್ನು ನಿಮ್ಮ ಹಸ್ತದ ಮೂಲಕ ರಕ್ಷಿಸಿ ಕಾಪಾಡಿರಿ. ಅಂಥ ಜನರಿಗಾಗಿ ನೀವು ಸಂಗ್ರಹಿಸಿ ಇಟ್ಟಿರುವುದು ಅವರ ಹೊಟ್ಟೆ ತುಂಬಲಿ; ಅವರ ಮಕ್ಕಳು ಅದರಿಂದ ಸಮೃದ್ಧಿ ಹೊಂದಲಿ, ಅವರ ಚಿಕ್ಕಮಕ್ಕಳಿಗೂ ಉಳಿದದ್ದು ಸಿಕ್ಕಲಿ.


ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


ಇವರು ಗೊಣಗುಟ್ಟುವವರೂ ದೂರುವವರೂ ತಮ್ಮ ದುರಾಶೆಗಳನ್ನು ಅನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಉದುರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.


ದ್ರೋಹಿಗಳೂ ದುಡುಕುವವರೂ ಉಬ್ಬಿಕೊಂಡವರೂ ದೇವರನ್ನು ಪ್ರೀತಿಸುವುದಕ್ಕಿಂತಲೂ ಭೋಗಗಳನ್ನೇ ಪ್ರೀತಿಸುವವರೂ


ಹೀಗೆ ಅನಾರೋಗ್ಯಕರವಾದ ವಿವಾದಗಳನ್ನೂ ಕೆಲವು ಮಾತುಗಳ ಕುರಿತಾಗಿರುವ ತರ್ಕಗಳನ್ನೂ ಸೃಷ್ಟಿಸುವ ಪ್ರಸಿದ್ಧರಾಗಿದ್ದಾರೆ. ಅಂಥವರು ದೇವಭಕ್ತಿಯನ್ನು ಆರ್ಥಿಕ ಲಾಭವನ್ನಾಗಿ ಭಾವಿಸುವವರಾಗಿದ್ದಾರೆ.


ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಿಸುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಗುರಿಯಾಗುವರು.


ಎಲ್ಲರೂ ಸ್ವಕಾರ್ಯಗಳನ್ನೇ ಹುಡುಕುತ್ತಾರೆಯೇ ಹೊರತು ಕ್ರಿಸ್ತ ಯೇಸುವಿನ ಕಾರ್ಯಗಳನ್ನು ಹುಡುಕುವುದಿಲ್ಲ.


ನೀವು ಜಂಬ ಕೊಚ್ಚಿಕೊಳ್ಳುವುದು ಸರಿಯಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?


ಹೀಗಿದ್ದರೂ ಗರ್ವಪಡುತ್ತಿದ್ದೀರಲ್ಲಾ! ನೀವು ದುಃಖಪಟ್ಟು, ಈ ಕಾರ್ಯ ಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸಬೇಕಲ್ಲವೇ?


“ಆದರೆ ನೀವು ಯೆಹೋವ ದೇವರ ಮೇಜು ಅಶುದ್ಧ, ‘ಅದರ ಫಲವೂ, ಅದರ ಆಹಾರವೂ ಅಸಹ್ಯ,’ ಎಂದು ಹೇಳಿ ಅದನ್ನು ಅಪವಿತ್ರ ಮಾಡಿದ್ದೀರಿ.


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ಆದರೆ ನೀವು ನಿಮ್ಮ ಹೊಗಳಿಕೆಯ ಯೋಜನೆಗಳಲ್ಲಿ ಹೆಮ್ಮೆಪಡುತ್ತೀರಿ. ಅಂಥಾ ಅಹಂಭಾವವೆಲ್ಲಾ ಕೆಟ್ಟದ್ದೆ.


ಆಗ ಆ ನಿಯಮ ಮೀರುವವನು ಪ್ರತ್ಯಕ್ಷನಾಗುವನು. ಅವನನ್ನು ಕರ್ತ ಯೇಸು ತಮ್ಮ ಬಾಯಿಯ ಶ್ವಾಸದಿಂದ ಕೆಡವಿ, ತಮ್ಮ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಮಾಡಿಬಿಡುವರು.


“ಅವನು ಸ್ವಲ್ಪಕಾಲ ಆಕೆಗೆ ಗಮನಕೊಡಲಿಲ್ಲ. ತರುವಾಯ ಅವನು ತನ್ನೊಳಗೆ, ‘ನಾನು ದೇವರಿಗೆ ಭಯಪಡುವುದಿಲ್ಲ ಹಾಗೂ ಮನುಷ್ಯರಿಗೂ ಲಕ್ಷ್ಯಕೊಡುವುದಿಲ್ಲ,


ಅನಂತರ ಯೇಸು ಹೀಗೆ ಒಂದು ಸಾಮ್ಯ ಹೇಳಿದರು, “ಬಹು ಬೆಲೆಬಾಳುವ ಹಾಗೂ ನಯವಾದ ನಾರುಮಡಿ ವಸ್ತ್ರಗಳನ್ನೂ ಧರಿಸಿಕೊಂಡು ಪ್ರತಿದಿನವೂ ಭೋಗಗಳಲ್ಲಿಯೂ ಆಡಂಭರದಲ್ಲಿಯೂ ಬಾಳುತ್ತಿದ್ದ ಒಬ್ಬ ಧನವಂತನಿದ್ದನು.


ಅಲ್ಲದೆ, ನಾನು ನನ್ನ ಪ್ರಾಣಕ್ಕೆ, “ಪ್ರಾಣವೇ ಅನೇಕ ವರ್ಷಗಳಿಗಾಗಿ ನಿನಗೆ ಬಹಳ ಸರಕು ಇಡಲಾಗಿದೆ. ವಿಶ್ರಮಿಸಿಕೋ; ತಿನ್ನು, ಕುಡಿ ಮತ್ತು ಆನಂದವಾಗಿರು ಎಂದು ಹೇಳಿಕೊಳ್ಳುತ್ತೇನೆ,” ’ ಎಂದುಕೊಂಡನು.


“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಆಗ ಯೇಸು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನೀನು ನನಗೆ ಅಡ್ಡಿಯಾಗಿದ್ದೀ; ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದರು.


ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. ಆದರೂ ಯೆಹೋವ ದೇವರ ಮೇಲೆ ಆತುಕೊಂಡು, “ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ.


ಯೆಹೋವ ದೇವರು ಹೇಳುವುದೇನೆಂದರೆ, “ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವ ಪ್ರವಾದಿಗಳಿಗೆ ತಿನ್ನಲು ಕೊಟ್ಟರೆ ‘ಸಮಾಧಾನವಾಗಲಿ’ ಎನ್ನುವರು. ಆದರೆ ಅವರಿಗೆ ತಿನ್ನಲು ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.


ನೀವು ಮೊಸರನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ನೀವು ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿಸುವುದಿಲ್ಲ.


ಬಲಿಷ್ಠನೇ, ನೀನು ಕೆಟ್ಟತನದಲ್ಲಿ ಹೆಚ್ಚಳ ಪಡುವುದೇಕೆ? ದೇವರ ದೃಷ್ಟಿಯಲ್ಲಿ ಅಪಕೀರ್ತಿಯಾದವನೇ, ದೇವರ ಅನಂತ ಕೃಪೆಯು ಯಾವಾಗಲೂ ಇರುವದು.


ಆಕೆಯು ಯಾವುದರಿಂದ ತನ್ನನ್ನು ಘನಪಡಿಸಿಕೊಂಡು ಭೋಗಿನಿಯಾಗಿದ್ದಳೋ ಅದಕ್ಕೆ ತಕ್ಕಂತೆ ನೀವು ಆಕೆಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ. ಏಕೆಂದರೆ ಆಕೆ ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ. ನಾನು ವಿಧವೆಯಲ್ಲ, ಎಂದೆಂದಿಗೂ ದುಃಖಿಸುವುದಿಲ್ಲ!’ ಎಂದುಕೊಳ್ಳುತ್ತಾಳೆ.


ಏಕೆಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆಪಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡೆಸುವವರೂ ನಮ್ಮ ಒಬ್ಬರೇ ಕರ್ತ ಆಗಿರುವ ದೇವರನ್ನು ಮತ್ತು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಲ್ಲಗಳೆಯುವ ಕೆಲವು ಜನರೂ ರಹಸ್ಯವಾಗಿ ಸಭೆಯೊಳಗೆ ಹೊಕ್ಕಿದ್ದಾರೆ. ಇವರು ದಂಡನೆಗೋಸ್ಕರ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ.


ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ!


ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಜವೆಗೋಧಿಗೂ, ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಗೊಳಿಸುವಿರೋ?


ನನ್ನ ಜನರಾದ ಇಸ್ರಾಯೇಲರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದಕ್ಕೆ ನನ್ನ ವಾಸಸ್ಥಳದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ, ಅರ್ಪಣೆಯನ್ನೂ ನೀವು ಒದ್ದು, ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವುದೇನು?’


ಆದರೆ ಸ್ವಂತ ಬಾಯಿಂದ ಹೊರಡುವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ. ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನಾರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ. ನಾವೂ, ನಮ್ಮ ತಂದೆಗಳೂ, ನಮ್ಮ ಅರಸರೂ, ನಮ್ಮ ಪ್ರಧಾನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ಮಾಡುವೆವು. ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.


ಅಂಥವರು ಕರ್ತ ಯೇಸುವಿನ ಸನ್ನಿಧಿಯಿಂದಲೂ ಅವರ ಮಹಿಮೆಯ ಬಲದಿಂದಲೂ ಬಹಿಷ್ಕೃತರಾಗಿ ನಿತ್ಯನಾಶದ ಶಿಕ್ಷೆಯನ್ನು ಅನುಭವಿಸುವರು.


ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ. ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು