Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:5 - ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ಸಹನೆಯು ಎಲ್ಲರಿಗೂ ತಿಳಿದಿರಲಿ. ಕರ್ತದೇವರ ಬರುವಿಕೆಯು ಹತ್ತಿರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ, ಕರ್ತನು ಹತ್ತಿರವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿಮ್ಮ ಸಹನೆ, ಸಹಾನುಭೂತಿ ಸರ್ವರಿಗೂ ತಿಳಿದಿರಲಿ. ಪ್ರಭುವಿನ ಪುನರಾಗಮನ ಸಮೀಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿಮ್ಮ ಮೃದುಸ್ವಭಾವವನ್ನೂ ಕರುಣೆಯನ್ನೂ ಜನರೆಲ್ಲರೂ ನೋಡುವಂತಾಗಲಿ. ಪ್ರಭುವು ಬೇಗನೆ ಬರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತುಮ್ಚೆ ಸಂಬಾಳ್ನೆ ಸಗ್ಳ್ಯಾ ಮಾನ್ಸಾಕ್ನಿ ಗೊತ್ತ್ ಹೊಂವ್ದಿ, ಧನಿಯಾಚೆ ಯೆನೆ ಜಗ್ಗೊಳುಚ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:5
25 ತಿಳಿವುಗಳ ಹೋಲಿಕೆ  

“ಆದ್ದರಿಂದ ನಿಮ್ಮ ಜೀವನಕ್ಕಾಗಿ, ಏನು ಊಟಮಾಡಬೇಕು, ಏನು ಕುಡಿಯಬೇಕು ಅಥವಾ ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಮೇಲಾದದ್ದಲ್ಲವೇ?


ಯಾರ ವಿಷಯವಾಗಿಯೂ ಕೆಟ್ಟದ್ದನ್ನಾಡದೆ, ಎಲ್ಲರೊಂದಿಗೆ ಸಮಾಧಾನವಾಗಿಯೂ ಇತರರನ್ನು ಅರ್ಥಮಾಡಿಕೊಳ್ಳುವವರಾಗಿಯೂ ಯಾವಾಗಲೂ ನಮ್ರರಾಗಿ ಇರಬೇಕೆಂತಲೂ ಅವರಿಗೆ ಜ್ಞಾಪಕಮಾಡು.


ಏಕೆಂದರೆ, “ಇನ್ನು ಸ್ವಲ್ಪ ಸಮಯದಲ್ಲಿಯೇ, ಬರಲಿರುವ ಒಬ್ಬರು ಬಂದೇ ಬರುವರು. ಅವರು ತಡಮಾಡುವುದಿಲ್ಲ.”


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರಿ.


ನಿಮ್ಮ ನಿಮ್ಮಲ್ಲಿ ವ್ಯಾಜ್ಯವಿರುವುದೇ, ನೀವು ಈಗಾಗಲೇ ಸಂಪೂರ್ಣವಾಗಿ ಸೋತವರೆಂಬುದಕ್ಕೆ ಸೂಚನೆಗಳಾಗಿವೆ. ಆದರೆ ಅನ್ಯಾಯವನ್ನು ಏಕೆ ಸಹಿಸಬಾರದು? ಏಕೆ ಮೋಸಹೊಂದಬಾರದು?


ಸಭೆಯಾಗಿ ಸೇರುವುದನ್ನು ಕೆಲವರಿಗೆ ರೂಢಿಯಾಗಿ ಬಿಟ್ಟಂತೆ, ನಾವು ಹಾಗೆ ಮಾಡದಿರೋಣ. ಕರ್ತ ಯೇಸುವಿನ ಪ್ರತ್ಯಕ್ಷತೆಯ ದಿನವು ಸಮೀಪಿಸುತ್ತಾ ಬರುತ್ತದೆ ಎಂದು ನೀವು ತಿಳಿದಿರುವುದರಿಂದ ಒಬ್ಬರನ್ನೊಬ್ಬರು ಪ್ರೋತ್ಸಾಹಗೊಳಿಸುವುದನ್ನು ಇನ್ನೂ ಹೆಚ್ಚಾಗಿ ಮಾಡಿರಿ.


ಆಗ, “ಇಗೋ, ಬೇಗನೆ ಬರುತ್ತೇನೆ! ಈ ಗ್ರಂಥದ ಪ್ರವಾದನಾ ವಾಕ್ಯಗಳನ್ನು ಕೈಗೊಂಡು ನಡೆಯುವವರು ಧನ್ಯರು,” ಎಂದು ಕರ್ತ ಆಗಿರುವ ಯೇಸು ಹೇಳಿದರು.


ಆದ್ದರಿಂದ ನಾನು ತಿನ್ನುವಂಥದ್ದು ನನ್ನ ಸಹೋದರನನ್ನು ಪಾಪದಲ್ಲಿ ಬೀಳುವಂತೆ ಮಾಡುವುದಾದರೆ, ಎಂದಿಗೂ ನಾನು ಮಾಂಸವನ್ನು ತಿನ್ನುವುದೇ ಇಲ್ಲ. ಅವನ ಬೀಳುವಿಕೆಗೆ ಕಾರಣವಾಗುವುದೂ ಇಲ್ಲ.


ಆದ್ದರಿಂದ, ನಾಳೆಯ ವಿಷಯವಾಗಿ ಚಿಂತಿಸಬೇಡಿರಿ. ನಾಳೆಯ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು, ಆ ದಿನದ ಪಾಡು ಆ ದಿನಕ್ಕೆ ಸಾಕು.


ಈ ವಿಷಯಗಳಲ್ಲಿ ಸಾಕ್ಷಿ ನೀಡುವವರು, “ಹೌದು, ನಾನು ಬೇಗ ಬರುತ್ತೇನೆ!” ಎಂದು ಹೇಳುತ್ತಾರೆ. ಆಮೆನ್. ಕರ್ತ ಯೇಸುವೇ ಬಾ.


ಅವರಲ್ಲಿದ್ದ ಕ್ರಿಸ್ತ ಯೇಸುವಿನ ಆತ್ಮ, ಕ್ರಿಸ್ತ ಯೇಸುವಿಗೆ ಸಂಭವಿಸಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಗಳನ್ನೂ ಪ್ರವಾದಿಸಿದಾಗ, ಅದರ ಸಮಯ ಸಂದರ್ಭಗಳನ್ನು ಕಂಡುಹಿಡಿಯಲು ಪರಿಶೋಧನೆ ಮಾಡಿದರು.


ಆಟಗಳಲ್ಲಿ ಪಂದ್ಯಕ್ಕೆ ಭಾಗವಹಿಸುವವರೆಲ್ಲರೂ, ಕಠಿಣವಾದ ತರಬೇತಿಯನ್ನು ಹೊಂದುತ್ತಾರೆ. ಅವರು ಬಹುದಿನ ಉಳಿಯದೇ ಇರುವ ಕಿರೀಟವನ್ನು ಪಡೆಯುವುದಕ್ಕೆ ಇದನ್ನು ಮಾಡುತ್ತಾರೆ. ಆದರೆ ನಾವು ಎಂದೆಂದಿಗೂ ಉಳಿಯುವ ಕಿರೀಟ ಹೊಂದಲು ಹೋರಾಡುವವರಾಗಿದ್ದೇವೆ.


ಕ್ರಿಸ್ತ ಯೇಸುವಿನ ದಿನವು ಈಗಾಗಲೇ ಬಂದಿದೆಯೆಂದು ಪ್ರವಾದನೆಯಿಂದಾಗಲಿ, ಪ್ರಸಂಗದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದು ನೀವು ಬೇಗನೆ ಚಂಚಲರಾಗಿ ಕಳವಳಪಡಬೇಡಿರಿ.


“ನಿಮ್ಮ ಮೇಲೆ ಆ ದಿನವು ಉರುಲಿನಂತೆ ಫಕ್ಕನೆ ಬಾರದಂತೆ ನೀವು ಅತಿಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ, ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ.


ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ, ಅವನು ಶಾಪಗ್ರಸ್ತನಾಗಲಿ! ಕರ್ತನೇ, ಬಾ!


ನಾನು ನಿಮ್ಮ ಬಳಿಯಲ್ಲಿ ಮುಖಾಮುಖಿಯಾಗಿ ಮಾತನಾಡುವಾಗ, “ಮೃದುವಾಗಿಯೂ” ನಿಮ್ಮಿಂದ ದೂರವಿರುವಾಗ “ಕಠಿಣನಾಗಿಯೂ ವರ್ತಿಸುವವನು” ಎಂತಲೂ ನೀವು ತಿಳಿದಿದ್ದೀರಿ. ಅಂಥ ಪೌಲನೆಂಬ, ನಾನು ಕ್ರಿಸ್ತ ಯೇಸುವಿನ ದೀನತ್ವದಿಂದಲೂ ಸಾತ್ವಿಕತೆಯಿಂದಲೂ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು