Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:20 - ಕನ್ನಡ ಸಮಕಾಲಿಕ ಅನುವಾದ

20 ಅವನು ಹೀಗೆ ಯೋಚಿಸುತ್ತಿದ್ದಾಗ, ಕರ್ತನ ದೂತನು ಕನಸಿನಲ್ಲಿ ಅವನಿಗೆ ಪ್ರತ್ಯಕ್ಷನಾಗಿ, “ದಾವೀದನ ವಂಶದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭವತಿಯಾಗಿರುವುದು ಪವಿತ್ರಾತ್ಮರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, “ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ಇದನ್ನು ಆಲೋಚಿಸುತ್ತಿರುವಾಗ ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು - ಎಲೈ ಯೋಸೇಫನೇ, ದಾವೀದನ ವಂಶದವನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳುವದಕ್ಕೆ ಅಂಜಬೇಡ. ಆಕೆಯ ಗರ್ಭವು ಪವಿತ್ರಾತ್ಮದಿಂದಲೇ ಆದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೋಸೇಫನು ಹೀಗೆ ಆಲೋಚಿಸಿಕೊಂಡನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಆ ದೂತನು, “ದಾವೀದನ ಮಗನಾದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯಾಗಿ ಸ್ವೀಕರಿಸಲು ಭಯಪಡಬೇಡ. ಆಕೆ ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅಶೆ ತೊ ಯವಜ್ತಾನಾ, ತೆಚ್ಯಾ ಸಪ್ನಾತ್ ದೆವಾಚೊ ಎಕ್ ದುತ್ ದಿಸ್ಲೊ ಅನಿ, “ದಾವಿದಾಚ್ಯಾ ಘರಾನ್ಯಾಚ್ಯಾ ಜುಜೆ ಮರಿಕ್ ತುಜಿ ಬಾಯ್ಕೊ ಕರುನ್ ಘೆವ್ಕ್ ಭಿಂವ್‍ನಕೊ, ಕಶ್ಯಾಕ್ ಮಟ್ಲ್ಯಾರ್ ತಿ ಪವಿತ್ರ್ ಆತ್ಮ್ಯಾನಿ ಗರ್‍ವಾರ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:20
38 ತಿಳಿವುಗಳ ಹೋಲಿಕೆ  

ಅದಕ್ಕೆ ಆ ದೂತನು ಉತ್ತರವಾಗಿ, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು. ನಿನ್ನ ಸಂಗಡ ಮಾತನಾಡುವುದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವುದಕ್ಕೂ ದೇವರು ನನ್ನನ್ನು ಕಳುಹಿಸಿದ್ದಾರೆ.


ಕ್ರಿಸ್ತ ಯೇಸುವಿನ ಜನನದ ವಿವರ: ಯೇಸುವಿನ ತಾಯಿ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದ್ದರು, ಆದರೆ ಅವರಿಬ್ಬರು ಕೂಡಿಬಾಳುವುದಕ್ಕಿಂತ ಮುಂಚೆಯೇ, ಮರಿಯಳು ಪವಿತ್ರಾತ್ಮರಿಂದ ಗರ್ಭಧರಿಸಿರುವುದು ತಿಳಿದುಬಂತು.


ಹೆರೋದನು ಸತ್ತಮೇಲೆ ಈಜಿಪ್ಟಿನಲ್ಲಿದ್ದ ಯೋಸೇಫನಿಗೆ ಕರ್ತನ ದೂತನು ಕನಸಿನಲ್ಲಿ ಕಾಣಿಸಿಕೊಂಡು,


“ಆಮೇಲೆ ನಾನು, ನನ್ನ ಆತ್ಮನನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು. ನಿಮ್ಮ ಯುವಜನರಿಗೆ ದರ್ಶನಗಳಾಗುವವು.


ಯೋಸೇಫನು ದಾವೀದನ ಕುಟುಂಬದವನೂ ವಂಶದವನೂ ಆಗಿದ್ದರಿಂದ, ಅವನು ಸಹ ಗಲಿಲಾಯ ಪ್ರಾಂತದ ನಜರೇತೆಂಬ ಪಟ್ಟಣದಿಂದ ಯೂದಾಯ ಪ್ರಾಂತದ ಬೇತ್ಲೆಹೇಮ್ ಎಂಬ ದಾವೀದನ ಪಟ್ಟಣಕ್ಕೆ ಹೋದನು.


ಆ ದೂತನು ಸ್ತ್ರೀಯರಿಗೆ, “ನೀವು ಭಯಪಡಬೇಡಿರಿ. ಶಿಲುಬೆಗೇರಿಸಿದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು.


ದೃಢ ಮನಸ್ಸುಳ್ಳವರನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವೆ, ಏಕೆಂದರೆ ಅವರಿಗೆ ನಿನ್ನಲ್ಲಿ ಭರವಸವಿದೆ.


ಯೆಹೋವ ದೇವರ ದೂತನು ಆ ಸ್ತ್ರೀಗೆ ಪ್ರತ್ಯಕ್ಷವಾಗಿ ಅವಳಿಗೆ, “ಇಗೋ, ನೀನು ಮಕ್ಕಳನ್ನು ಹೆರದೆ ಬಂಜೆಯಾಗಿದ್ದೀಯೆ. ಆದರೆ ನೀನು ಗರ್ಭಧರಿಸಿ ಒಬ್ಬ ಮಗನನ್ನು ಹೆರುವೆ.


ದೇವದೂತನು ಸ್ವಪ್ನದಲ್ಲಿ ನನಗೆ, ‘ಯಾಕೋಬನೇ’ ಎಂದನು. ಅದಕ್ಕೆ ನಾನು, ‘ಇಲ್ಲಿ ಇದ್ದೇನೆ,’ ಎಂದೆನು.


ಆದರೆ ಹೆರೋದನ ಮಗ ಅರ್ಖೆಲಾಯನು, ತಂದೆಯ ಬದಲಾಗಿ ಯೂದಾಯ ಪ್ರಾಂತವನ್ನು ಆಳುತ್ತಿದ್ದಾನೆಂದು ಕೇಳಿ, ಅಲ್ಲಿಗೆ ಹೋಗಲು ಭಯಪಟ್ಟನು. ಆಗ ಕನಸಿನಲ್ಲಿ ಹೊಂದಿದ ಎಚ್ಚರಿಕೆಯ ಪ್ರಕಾರ ಯೋಸೇಫನು ಗಲಿಲಾಯ ಪ್ರಾಂತಕ್ಕೆ ಹೋದನು.


ಬೆಳಿಗ್ಗೆ ನಿಮ್ಮ ಒಡಂಬಡಿಕೆಯ ಪ್ರೀತಿಯು ನನಗೆ ವಾಕ್ಯವನ್ನು ತರಲಿ; ಏಕೆಂದರೆ ನಿಮ್ಮಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸಿರಿ, ಏಕೆಂದರೆ ನನ್ನ ಪ್ರಾಣವನ್ನು ನಿಮಗೇ ಒಪ್ಪಿಸಿದ್ದೇನೆ.


ನಾನು ನಿಮ್ಮ ಸೇವಕನು, ನಿಮ್ಮ ಶಾಸನಗಳನ್ನು ನಾನು ಅರ್ಥಮಾಡಿಕೊಳ್ಳುವಂತೆ ನನಗೆ ವಿವೇಚನೆಯನ್ನು ಕೊಡಿರಿ.


ನನ್ನ ಚಿಂತೆಗಳು ನನ್ನೊಳಗೆ ಹೆಚ್ಚುತ್ತಿರುವಾಗ, ನಿಮ್ಮ ಸಂತೈಸುವಿಕೆಯು ನನ್ನ ಮನಸ್ಸನ್ನು ಆನಂದಪಡಿಸುತ್ತದೆ.


ಆ ಜ್ಞಾನಿಗಳು ಹೊರಟುಹೋದ ಮೇಲೆ, ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಪ್ರತ್ಯಕ್ಷನಾಗಿ, “ಎದ್ದೇಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ನಾನು ನಿನಗೆ ತಿಳಿಸುವವರೆಗೆ ಅಲ್ಲಿಯೇ ಇರು, ಏಕೆಂದರೆ ಹೆರೋದನು ಮಗುವನ್ನು ಹುಡುಕಿ ಕೊಲ್ಲಬೇಕೆಂದಿದ್ದಾನೆ,” ಎಂದನು.


ಆಗ ಮಾತ್ರ ನಾನು ಯಾಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ. ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ, ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.’ ”


ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ ಇದರಲ್ಲೇ ನಡೆಯಿರಿ,” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.


ನೀತಿವಂತರ ಯೋಜನೆಗಳು ನ್ಯಾಯವಾಗಿವೆ; ದುಷ್ಟರ ಸಲಹೆ ಮೋಸಭರಿತ.


ಆಗ ಎಲೀಯನು ಅವಳಿಗೆ, “ಭಯಪಡಬೇಡ, ನೀನು ಹೇಳಿದ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿಮಾಡಿ, ನನ್ನ ಬಳಿಗೆ ತೆಗೆದುಕೊಂಡು ಬಾ. ತರುವಾಯ ನಿನಗೂ, ನಿನ್ನ ಮಗನಿಗೂ ಸಿದ್ಧಮಾಡಿಕೋ.


ಆಗ ಶಾಫಾನನ ಮಗ ಅಹೀಕಾಮನ ಮಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “ ‘ಬಾಬಿಲೋನಿಯರಿಗೆ ಸೇವೆ ಮಾಡುವುದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,’ ಎಂದನು.


ವಿಶ್ವಾಸದ್ರೋಹಿ ಇಸ್ರಾಯೇಲ್ ಮಗಳೇ ಎಷ್ಟರವರೆಗೆ ಅಡ್ಡಾಡುವೆ? ಏಕೆಂದರೆ ಯೆಹೋವ ದೇವರು ಭೂಮಿಯಲ್ಲಿ ಹೊಸದನ್ನು ಸೃಷ್ಟಿಸುತ್ತಾರೆ. ಹೆಂಗಸು ಗಂಡಸನ್ನು ಕಾಪಾಡುವಳು.”


ನೀತಿಯನ್ನು ಅರಿತು, ನನ್ನ ನಿಯಮವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ, ನನಗೆ ಕಿವಿಗೊಡಿರಿ. ಮನುಷ್ಯರ ನಿಂದೆಗೆ ಭಯಪಡಬೇಡಿರಿ, ಅವರ ದೂಷಣೆಗೆ ಹೆದರಬೇಡಿರಿ.


ಯೆಹೋವ ದೇವರು ಅವರಿಗೆ ಹೀಗೆ ಹೇಳಿದನು, “ನನ್ನ ಮಾತುಗಳನ್ನು ಈಗ ಕೇಳಿರಿ: “ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಯೆಹೋವ ದೇವರಾದ ನಾನು ದರ್ಶನದಲ್ಲಿ ಪ್ರಕಟಿಸುವೆನು, ಇಲ್ಲವೆ ಕನಸಿನಲ್ಲಿಯೂ ನಾನು ಅವನೊಡನೆ ಮಾತನಾಡುವೆನು.


ದೇವರು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು. ನೀನು ಈಜಿಪ್ಟಿಗೆ ಹೋಗುವುದಕ್ಕೆ ಭಯಪಡಬೇಡ. ಏಕೆಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡ ಜನಾಂಗವಾಗಮಾಡುವೆನು.


ಸಿರಿಯಾದವರು ಎಫ್ರಾಯೀಮ್ಯರೊಂದಿಗೆ ಜತೆಗೂಡಿದ್ದಾರೆಂದು ದಾವೀದನ ವಂಶದವರಿಗೆ ತಿಳಿದಾಗ, ಆಹಾಜನ ಮತ್ತು ಅವರ ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.


ಅದಕ್ಕೆ ಯೆಶಾಯನು, “ದಾವೀದನ ವಂಶದವರೇ! ಈಗ ಕೇಳಿರಿ, ಮನುಷ್ಯರ ತಾಳ್ಮೆಯನ್ನು ಪರೀಕ್ಷಿಸುವುದು ಸಾಕಾಗುವುದಿಲ್ಲವೇ? ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುವಿರಾ?


ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿಯಲ್ಲಿ ಸ್ವಪ್ನದೊಳಗೆ ಯೆಹೋವ ದೇವರು ಸೊಲೊಮೋನನಿಗೆ ಕಾಣಿಸಿಕೊಂಡರು. ದೇವರು ಅವನಿಗೆ, “ನಾನು ನಿನಗೆ ಏನು ವರ ಕೊಡಬೇಕು? ಕೇಳಿಕೋ,” ಎಂದರು.


ಅನಂತರ ಅವರು ಕನಸಿನಲ್ಲಿ ಹೆರೋದನ ಬಳಿಗೆ ಹಿಂತಿರುಗಬಾರದೆಂಬ ಎಚ್ಚರಿಕೆಯನ್ನು ಹೊಂದಿದ್ದರಿಂದ, ಬೇರೆ ದಾರಿಯಿಂದ ತಮ್ಮ ದೇಶಕ್ಕೆ ಹೊರಟು ಹೋದರು.


ಪಿಲಾತನು ನ್ಯಾಯಾಸನದ ಮೇಲೆ ಕೂತಿದ್ದಾಗ, ಅವನ ಹೆಂಡತಿಯು ಅವನಿಗೆ, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ. ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ,” ಎಂದು ಹೇಳಿ ಕಳುಹಿಸಿದಳು.


ಆದರೆ ರಾತ್ರಿಯಲ್ಲಿ ಕರ್ತದೇವರ ದೂತನೊಬ್ಬನು ಸೆರೆಮೆನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಗೆ ನಡೆಸಿಕೊಂಡು ಬಂದು,


ಕುರಿಮರಿ ಆಗಿರುವವರ ವಿವಾಹ ಕಾಲವು ಬಂತು. ಅವರಿಗೆ ವಿವಾಹವಾಗುವ ಕನ್ಯೆ ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ. ಸಂತೋಷಪಡೋಣ, ಹರ್ಷಗೊಳ್ಳೋಣ, ಅವರನ್ನು ಮಹಿಮೆಪಡಿಸೋಣ!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು