Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:21 - ಕನ್ನಡ ಸಮಕಾಲಿಕ ಅನುವಾದ

21 ಅವಳು ಒಬ್ಬ ಮಗನನ್ನು ಹೆರುವಳು, ನೀನು ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು. ಏಕೆಂದರೆ ಅವರೇ ತಮ್ಮ ಜನರನ್ನು ಅವರ ಪಾಪಗಳಿಂದ ರಕ್ಷಿಸುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಕೆಯು ಒಬ್ಬ ಮಗನನ್ನು ಹಡೆಯುವಳು; ನೀನು ಆತನಿಗೆ ಯೇಸು ಎಂದು ಹೆಸರಿಡಬೇಕು; ಯಾಕಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ಕಾಯುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಕೆ ಒಬ್ಬ ಮಗನನ್ನು ಹೆರುವಳು. ನೀನು ಆ ಮಗುವಿಗೆ ಯೇಸು ಎಂದು ಹೆಸರಿಡುವೆ. ನೀನು ಆತನಿಗೆ ಆ ಹೆಸರನ್ನೇ ಇಡು; ಏಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತಿ ಎಕ್ ಝಿಲ್ಗ್ಯಾಕ್ ಜಲಮ್ ದಿತಾ, ತೆಕಾ ತಿಯಾ ‘ಜೆಜು’ ಮನುನ್ ನಾವ್ ಥವ್ಕ್ ಪಾಜೆ, ಕಶ್ಯಾಕ್ ಮಟ್ಲ್ಯಾರ್ ತೊ ಅಪ್ನಾಚ್ಯಾ ಲೊಕಾಕ್ನಿ ತೆಂಚ್ಯಾ ಪಾಪಾನಿತ್ನಾ ಸುಟ್ಕಾ ದಿತಾ”, ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:21
36 ತಿಳಿವುಗಳ ಹೋಲಿಕೆ  

“ಈ ದಾವೀದನ ಸಂತತಿಯಲ್ಲಿಯೇ ದೇವರು ಇಸ್ರಾಯೇಲಿಗೆ ತನ್ನ ವಾಗ್ದಾನದಂತೆ ರಕ್ಷಕ ಯೇಸುವನ್ನು ತಂದರು.


ಯೇಸು ಅಲ್ಲದೆ ಬೇರೆ ಯಾರಿಂದಲೂ ರಕ್ಷಣೆಯು ಇಲ್ಲ, ಏಕೆಂದರೆ ಆಕಾಶದ ಕೆಳಗೆ ಮನುಷ್ಯರೊಳಗೆ ಆ ಹೆಸರಲ್ಲದೇ ಬೇರೆ ಯಾವ ಹೆಸರಿನಿಂದಲೂ ರಕ್ಷಣೆಯಾಗುವುದಿಲ್ಲ,” ಎಂದನು.


ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,


ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾದರೆಂಬುದು ನಿಮಗೆ ಗೊತ್ತಾಗಿದೆ. ಕ್ರಿಸ್ತ ಯೇಸುವಿನಲ್ಲಿ ಪಾಪವಿಲ್ಲ.


ಶಿಶುವಿಗೆ ಸುನ್ನತಿ ಮಾಡಬೇಕಾಗಿದ್ದ ಎಂಟನೆಯ ದಿನದಲ್ಲಿ, ಮರಿಯಳು ಗರ್ಭಿಣಿಯಾಗುವುದಕ್ಕೆ ಮುಂಚೆಯೇ ದೂತನು ಸೂಚಿಸಿದ್ದಂತೆ “ಯೇಸು” ಎಂದು ನಾಮಕರಣ ಮಾಡಿದರು.


ಯೇಸು ಇಸ್ರಾಯೇಲಿಗೆ ಪಶ್ಚಾತ್ತಾಪವನ್ನೂ ಪಾಪಗಳ ಕ್ಷಮಾಪಣೆಯನ್ನೂ ಕೊಡಲು ಸಾಧ್ಯವಾಗುವಂತೆ ದೇವರು ಯೇಸುವನ್ನು ತಮ್ಮ ಬಲಗಡೆಯಲ್ಲಿ ಅಧಿಪತಿಯನ್ನಾಗಿಯೂ ರಕ್ಷಕನನ್ನಾಗಿಯೂ ಉನ್ನತಿಗೇರಿಸಿದ್ದಾರೆ.


ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವೆ, ಅವರಿಗೆ ‘ಯೇಸು’ ಎಂದು ಹೆಸರಿಡಬೇಕು.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಅದೇನೆಂದರೆ, ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕರು ಹುಟ್ಟಿದ್ದಾರೆ. ಅವರು ಯಾರೆಂದರೆ ಕರ್ತದೇವರು ಆಗಿರುವ ಕ್ರಿಸ್ತ.


ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ದೇವರು ತಮ್ಮ ಸೇವಕರಾದ ಯೇಸುವನ್ನು ಜೀವಂತವಾಗಿ ಎಬ್ಬಿಸಿದಾಗ, ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ದುರ್ಮಾರ್ಗಗಳಿಂದ ತಿರುಗಿಸಿ ನಿಮ್ಮನ್ನು ಮೊಟ್ಟಮೊದಲು ಆಶೀರ್ವದಿಸಲು ಯೇಸುವನ್ನು ನಿಮ್ಮ ಬಳಿಗೆ ಕಳುಹಿಸಿದರು.”


ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”


ಇದಲ್ಲದೆ ಯೇಸು ತಮ್ಮ ಮೂಲಕ ದೇವರ ಕಡೆ ಬರುವವರನ್ನು ಪರಿಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತರಾಗಿದ್ದಾರೆ. ಏಕೆಂದರೆ ಅವರಿಗೋಸ್ಕರ ಯೇಸು ವಿಜ್ಞಾಪನೆ ಮಾಡುವುದಕ್ಕಾಗಿ ಯಾವಾಗಲೂ ಬದುಕುವವರಾಗಿದ್ದಾರೆ.


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.


ಆಗ ಆ ಮೂವರಲ್ಲಿ ಒಬ್ಬರು, “ಬರುವ ವರ್ಷ ಇದೇ ಸಮಯದಲ್ಲಿ ನಾನು ನಿಶ್ಚಯವಾಗಿ ತಿರುಗಿ ನಿನ್ನ ಬಳಿಗೆ ಬರುವೆನು. ಆಗ ನಿನ್ನ ಹೆಂಡತಿ ಸಾರಳಿಗೆ ಒಬ್ಬ ಮಗನಿರುವನು,” ಎಂದನು. ಸಾರಳು ಅವರ ಹಿಂದೆ ಇದ್ದ ಡೇರೆಯ ಬಾಗಿಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.


ಆದರೆ ದೂತನು ಅವನಿಗೆ, “ಜಕರೀಯನೇ; ಭಯಪಡಬೇಡ, ದೇವರು ನಿನ್ನ ವಿಜ್ಞಾಪನೆಯನ್ನು ಕೇಳಿದ್ದಾರೆ. ನಿನ್ನ ಹೆಂಡತಿ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು, ನೀನು ಅವನಿಗೆ, ‘ಯೋಹಾನ’ ಎಂದು ಹೆಸರನ್ನಿಡಬೇಕು.


ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಯೆರೂಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಅಂದರೆ ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.’


ಅದಕ್ಕೆ ದೇವರು, “ನಿಶ್ಚಯವಾಗಿ ನಿನ್ನ ಹೆಂಡತಿ ಸಾರಳು ಮಗನನ್ನು ಹೆರುವಳು. ಅವನಿಗೆ, ‘ಇಸಾಕ್’ ಎಂದು ಹೆಸರಿಡಬೇಕು. ಅವನ ಸಂಗಡವೂ ಅವನ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡವೂ ನಾನು ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.


ಆದರೆ ಬರುವ ವರ್ಷ ಈ ಕಾಲದಲ್ಲಿ ಸಾರಳು ನಿನ್ನಿಂದ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸವೆನು,” ಎಂದು ಹೇಳಿದರು.


ಯೆಹೋವ ದೇವರ ದೂತನು ಆ ಸ್ತ್ರೀಗೆ ಪ್ರತ್ಯಕ್ಷವಾಗಿ ಅವಳಿಗೆ, “ಇಗೋ, ನೀನು ಮಕ್ಕಳನ್ನು ಹೆರದೆ ಬಂಜೆಯಾಗಿದ್ದೀಯೆ. ಆದರೆ ನೀನು ಗರ್ಭಧರಿಸಿ ಒಬ್ಬ ಮಗನನ್ನು ಹೆರುವೆ.


ಹನ್ನಳು ಗರ್ಭವತಿಯಾಗಿ, ಕಾಲವು ಪೂರ್ತಿಯಾದ ತರುವಾಯ ಮಗನನ್ನು ಹೆತ್ತು, “ನಾನು ಇವನಿಗಾಗಿ ಯೆಹೋವ ದೇವರನ್ನು ಬೇಡಿ ಪಡೆದುಕೊಂಡೆನು,” ಎಂದು ಹೇಳಿ ಅವನಿಗೆ, ಸಮುಯೇಲ ಎಂದು ಹೆಸರಿಟ್ಟಳು.


ಆದರೆ ಅವಳು ಮಗನನ್ನು ಹೆರುವತನಕ ಯೋಸೇಫನು ಆಕೆಯೊಂದಿಗೆ ದಾಂಪತ್ಯ ಜೀವನ ಮಾಡಲಿಲ್ಲ. ಯೋಸೇಫನು ಆ ಮಗುವಿಗೆ “ಯೇಸು” ಎಂದು ಹೆಸರಿಟ್ಟನು.


ಜನರು ಆ ಸ್ತ್ರೀಗೆ, “ನಾವು ಇನ್ನು ಮುಂದೆ ನಂಬುವುದು ನಿನ್ನ ಮಾತಿನಿಂದಲ್ಲ. ಏಕೆಂದರೆ ನಾವೇ ಸ್ವತಃ ಕೇಳಿದ್ದೇವೆ. ಈತನು ನಿಜವಾಗಿಯೂ ಲೋಕ ರಕ್ಷಕನೆಂದು ತಿಳಿದಿದ್ದೇವೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು