Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:23 - ಕನ್ನಡ ಸಮಕಾಲಿಕ ಅನುವಾದ

23 ಒಂದು ಸ್ಥಳದಲ್ಲಿ ನಿಮಗೆ ಹಿಂಸೆಯಾದರೆ ಇನ್ನೊಂದು ಸ್ಥಳಕ್ಕೆ ಓಡಿಹೋಗಿರಿ. ಮನುಷ್ಯಪುತ್ರನು ಬರುವಷ್ಟರಲ್ಲಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಒಂದು ಊರಿನಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ, ಮತ್ತೊಂದು ಊರಿನಲ್ಲಿ ಆಶ್ರಯ ಪಡೆಯಿರಿ. ನರಪುತ್ರನು ಬರುವಷ್ಟರಲ್ಲಿ ನೀವು ಇಸ್ರಯೇಲ್ ಜನರ ಊರುಗಳನ್ನೆಲ್ಲಾ ಸುತ್ತಿ ಮುಗಿಸಿರಲಾರಿರಿ; ಇದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳ ಸಂಚಾರವನ್ನು ತೀರಿಸಿರುವದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 “ಎಕ್ ಶಾರಾತ್ ಲೊಕಾನಿ ತುಮ್ಕಾ ತರಾಸ್ ದಿಲ್ಯಾರ್, ದುಸ್ರ್ಯಾ ಶಾರಾಕ್ ಪಳುನ್ ಜಾವಾ, ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಮಾನ್ಸಾಚೊ ಲೆಕ್ ಯೆಯ್ ಸಗೊಳ್ ಇಸ್ರಾಯೆಲಾತ್ಲ್ಯಾ ಸಗ್ಳ್ಯಾ ಶಾರಾತ್ನಿ ತುಮಿ ಕರ್‍ತಲೆ ತುಮ್ಚೆ ಕಾಮ್ ಕರುನ್ ಸರಿನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:23
29 ತಿಳಿವುಗಳ ಹೋಲಿಕೆ  

“ನಿಮಗೆ ನಿಜವಾಗಿ ಹೇಳುತ್ತೇನೆ: ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಪುತ್ರನಾದ ನಾನು ನನ್ನ ರಾಜ್ಯದಲ್ಲಿ ಬರುವುದನ್ನು ಕಾಣುವವರೆಗೆ ಮರಣವನ್ನು ಹೊಂದುವುದೇ ಇಲ್ಲ,” ಎಂದರು.


ರಾತ್ರಿಯಾದ ಕೂಡಲೇ, ಸಹೋದರರು ಪೌಲ, ಸೀಲರನ್ನು ಬೆರೋಯಕ್ಕೆ ಕಳುಹಿಸಿದರು. ಅಲ್ಲಿಗೆ ಅವರು ತಲುಪಿದಾಗ ಅಲ್ಲಿಯೂ ಯೆಹೂದ್ಯರ ಸಭಾಮಂದಿರಕ್ಕೆ ಹೋದರು.


ಸೌಲನು ಸ್ತೆಫನನ ಕೊಲೆಗೆ ಸಮ್ಮತಿಸಿದ್ದನು. ಆ ದಿನವೇ ಯೆರೂಸಲೇಮಿನ ಸಭೆಗೆ ವಿರೋಧವಾಗಿ ಮಹಾಹಿಂಸೆ ಪ್ರಾರಂಭವಾಯಿತು, ಅಪೊಸ್ತಲರನ್ನು ಬಿಟ್ಟು ಉಳಿದವರೆಲ್ಲರೂ ಯೂದಾಯ ಮತ್ತು ಸಮಾರ್ಯ ಪ್ರಾಂತಗಳಿಗೆ ಚದರಿಹೋದರು.


“ಆಗ ಮನುಷ್ಯಪುತ್ರನಾದ ನಾನು ಬಹು ಶಕ್ತಿಯಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ಕಾಣುವರು.


ಆಗ ಮನುಷ್ಯಪುತ್ರನಾದ ನಾನು ಶಕ್ತಿಯಿಂದಲೂ ಮಹಾ ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಜನರು ಕಾಣುವರು.


ದೇವರು ಬೇಗನೇ ಅವರಿಗೆ ನ್ಯಾಯತೀರಿಸುವರೆಂದು, ನಾನು ನಿಮಗೆ ಹೇಳುತ್ತೇನೆ. ಆದರೂ, ಮನುಷ್ಯಪುತ್ರನಾದ ನಾನು ಬಂದಾಗ ಭೂಮಿಯ ಮೇಲೆ ವಿಶ್ವಾಸವನ್ನು ಕಾಣುವೆನೋ?” ಎಂದರು.


ಇವುಗಳಾದ ಮೇಲೆ ಯೇಸು ಗಲಿಲಾಯದ ಪ್ರಾಂತದಲ್ಲಿ ಸಂಚಾರ ಮಾಡಿದರು. ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದುದರಿಂದ ಯೂದಾಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.


ಅದಕ್ಕೆ ಯೇಸು ಅವನಿಗೆ, “ನೀನೇ ಹೇಳಿದ್ದೀ; ಆದರೂ ಇನ್ನು ಮೇಲೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ನೀವು ಕಾಣುವಿರಿ ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


“ಆಗ ಮನುಷ್ಯಪುತ್ರನಾದ ನನ್ನ ಸೂಚನೆಯು ಆಕಾಶದಲ್ಲಿ ಕಾಣುವುದು. ಭೂಮಿಯ ಎಲ್ಲಾ ಜನಾಂಗದವರು ಗೋಳಾಡುವರು. ಮನುಷ್ಯಪುತ್ರನಾದ ನಾನು ಆಕಾಶದ ಮೇಘಗಳಲ್ಲಿ, ಶಕ್ತಿಯಿಂದಲೂ ಮಹಾಪ್ರಭಾವದಿಂದಲೂ ಬರುವುದನ್ನು ಅವರು ಕಾಣುವರು.


ಆದ್ದರಿಂದ ಸಹೋದರರು ಕೂಡಲೇ ಪೌಲನನ್ನು ಸಮುದ್ರ ತೀರಕ್ಕೆ ಕಳುಹಿಸಿಬಿಟ್ಟರು. ಆದರೆ ಸೀಲ ಮತ್ತು ತಿಮೊಥೆ ಬೆರೋಯದಲ್ಲಿಯೇ ಉಳಿದುಕೊಂಡರು.


“ಆದ್ದರಿಂದ ಎಚ್ಚರವಾಗಿರಿ, ಏಕೆಂದರೆ ಮನುಷ್ಯಪುತ್ರನಾದ ನನ್ನ ಬರುವ ದಿನವನ್ನಾಗಲಿ ಗಳಿಗೆಯನ್ನಾಗಲಿ ನೀವು ಅರಿಯದವರಾಗಿದ್ದೀರಿ, ಎಂದರು.


ಆದರೆ ದುಷ್ಟ ಸೇವಕನು ತನ್ನ ಹೃದಯದಲ್ಲಿ, ‘ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ,’ ಎಂದು ಹೇಳಿಕೊಂಡು


ಏಕೆಂದರೆ ಮಿಂಚು ಪೂರ್ವದಿಂದ ಮಿನುಗಿ ಪಶ್ಚಿಮದವರೆಗೆ ಹೊಳೆಯುವಂತೆಯೇ ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು.


ಆದ್ದರಿಂದ ನೋಡಿರಿ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ನಿಯಮ ಬೋಧಕರನ್ನೂ ನಿಮ್ಮ ಬಳಿಗೆ ಕಳುಹಿಸುತ್ತೇನೆ. ಅವರಲ್ಲಿ ಕೆಲವರನ್ನು ಕೊಲ್ಲುವಿರಿ, ಶಿಲುಬೆಗೆ ಏರಿಸುವಿರಿ. ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸುವಿರಿ.


ಯೋಹಾನನು ಬಂಧಿತನಾದನೆಂದು ಕೇಳಿ, ಯೇಸು ಗಲಿಲಾಯಕ್ಕೆ ಹಿಂದಿರುಗಿದರು.


ಆ ಜ್ಞಾನಿಗಳು ಹೊರಟುಹೋದ ಮೇಲೆ, ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಪ್ರತ್ಯಕ್ಷನಾಗಿ, “ಎದ್ದೇಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ನಾನು ನಿನಗೆ ತಿಳಿಸುವವರೆಗೆ ಅಲ್ಲಿಯೇ ಇರು, ಏಕೆಂದರೆ ಹೆರೋದನು ಮಗುವನ್ನು ಹುಡುಕಿ ಕೊಲ್ಲಬೇಕೆಂದಿದ್ದಾನೆ,” ಎಂದನು.


ಗಲಭೆಯು ಶಾಂತಗೊಂಡ ನಂತರ ಪೌಲನು ಶಿಷ್ಯರನ್ನು ಕರೆಕಳುಹಿಸಿ ಅವರಿಗೆ ಧೈರ್ಯ ಹೇಳಿ, ಅವರನ್ನು ಬೀಳ್ಕೊಟ್ಟು ಮಕೆದೋನ್ಯಕ್ಕೆ ಪ್ರಯಾಣಮಾಡಿದನು.


ಆಗ ಅರಸನಾದ ಯೆಹೋಯಾಕೀಮನೂ, ಅವನ ಪರಾಕ್ರಮಶಾಲಿಗಳೆಲ್ಲರೂ, ಪ್ರಧಾನರೆಲ್ಲರೂ ಅವನ ಮಾತುಗಳನ್ನೆಲ್ಲಾ ಕೇಳಿದಾಗ, ಅರಸನು ಅವನನ್ನು ಕೊಂದುಹಾಕಬೇಕೆಂದಿದ್ದನು. ಆದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ, ಈಜಿಪ್ಟಿಗೆ ಸೇರಿಕೊಂಡನು.


ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು.


ನಿಮಗೆ ನಿಜವಾಗಿ ಹೇಳುತ್ತೇನೆ: ಇವೆಲ್ಲವೂ ಈ ಸಂತತಿಯವರ ಮೇಲೆ ಬರುವವು.


ಇವೆಲ್ಲವೂ ನೆರವೇರುವವರೆಗೆ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು