Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:32 - ಕನ್ನಡ ಸಮಕಾಲಿಕ ಅನುವಾದ

32 “ಜನರ ಮುಂದೆ ನನ್ನನ್ನು ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 “ಜನರ ಮುಂದೆ, ತಾನು ನನ್ನವನೆಂದು ಬಹಿರಂಗವಾಗಿ ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನೆಂದು ಒಪ್ಪಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಒಬ್ಬನು ಬೇರೆಯವರ ಮುಂದೆ, ತಾನು ನನ್ನವನೆಂದು ಹೇಳಿದರೆ, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ನನ್ನವನೆಂದು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 “ಜೆ ಕೊನಾಕ್ ಸಗ್ಳ್ಯಾ ಲೊಕಾಂಚ್ಯಾ ಇದ್ರಾಕ್ ಮಾಜೊ ಮನುನ್ ಸಾಂಗ್ತ್ಯಾತ್, ತೆಕಾ ಮಿಯಾಬಿ ಸರ್ಗಾಚ್ಯಾ ರಾಜಾತ್ ಮಾಜ್ಯಾ ಬಾಬಾಚ್ಯಾ ಇದ್ರಾಕ್ ಮಾಜೊಚ್ ಮನುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:32
12 ತಿಳಿವುಗಳ ಹೋಲಿಕೆ  

ಜಯಹೊಂದುವವರಿಗೆ ಹೀಗೆ ಬಿಳಿಯ ವಸ್ತ್ರಗಳನ್ನು ಹೊದಿಸಲಾಗುವುದು. ಅವರ ಹೆಸರನ್ನು ಜೀವಬಾಧ್ಯರ ಪಟ್ಟಿಯಿಂದ ನಾನು ಅಳಿಸಿಬಿಡದೆ, ಅವರ ಹೆಸರನ್ನು ನನ್ನ ತಂದೆಯ ಮುಂದೆಯೂ ಅವರ ದೂತರ ಮುಂದೆಯೂ ಅರಿಕೆ ಮಾಡುವೆನು.


ಯೇಸು ದೇವರ ಪುತ್ರರಾಗಿದ್ದಾರೆಂದು ಯಾರು ಒಪ್ಪಿಕೊಳ್ಳುತ್ತಾರೋ, ಅವರಲ್ಲಿ ದೇವರು ಬಾಳುತ್ತಾರೆ ಮತ್ತು ಅವರು ದೇವರಲ್ಲಿ ಬಾಳುವವರಾಗಿದ್ದಾರೆ.


ಹೀಗಿರುವುದರಿಂದ ನಮ್ಮ ಕರ್ತ ಯೇಸುವಿನ ಸಾಕ್ಷಿಯ ವಿಷಯವಾಗಿಯೂ ಅವರ ಸೆರೆಯವನಾದ ನನ್ನ ವಿಷಯವಾಗಿಯೂ ನೀನು ನಾಚಿಕೆಪಡಬೇಡ. ಅದರ ಬದಲಾಗಿ, ದೇವರ ಶಕ್ತಿಗೆ ಅನುಸಾರವಾಗಿ, ಸುವಾರ್ತೆಗೋಸ್ಕರ ನನ್ನೊಂದಿಗೆ ಶ್ರಮೆಯನ್ನು ಅನುಭವಿಸು.


ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು, ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ. ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನನ್ನು ಕೊಲ್ಲಲಾದ ದಿನಗಳಲ್ಲಿಯೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಅಲ್ಲಗಳೆಯಲಿಲ್ಲ.


“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಭಯಪಟ್ಟಿದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ, ಅವರನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯ ನಾಯಕರು ಈ ಮೊದಲೇ ಗೊತ್ತುಮಾಡಿದ್ದರು.


“ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ.


ಅರಸರ ಮುಂದೆ ನಿಮ್ಮ ಶಾಸನಗಳನ್ನು ಮಾತಾಡುವೆನು, ಅವುಗಳ ಬಗ್ಗೆ ನಾನೆಂದೂ ನಾಚಿಕೆಪಡುವುದಿಲ್ಲ.


ಅದೇ ಪ್ರಕಾರ, ಪಶ್ಚಾತ್ತಾಪಪಟ್ಟು ದೇವರ ಕಡೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವುದು, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು