Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:42 - ಕನ್ನಡ ಸಮಕಾಲಿಕ ಅನುವಾದ

42 ಯಾವನಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಕೇವಲ ಒಂದು ಲೋಟ ತಣ್ಣೀರನ್ನು ಕುಡಿಯುವುದಕ್ಕೆ ಕೊಡುವವನು ತನ್ನ ಪ್ರತಿಫಲವನ್ನು ಕಳೆದುಕೊಳ್ಳುವುದೇ ಇಲ್ಲವೆಂದು ಸತ್ಯವಾಗಿ ನಾನು ನಿಮಗೆ ಹೇಳುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಮತ್ತು ಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾರಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಮತ್ತು ಈ ಚಿಕ್ಕವರಲ್ಲಿ ಒಬ್ಬನಿಗೆ ಯೇಸುವಿನ ಶಿಷ್ಯನೆಂದು ಯಾವನಾದರೂ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ದೀನರಾದ ಇವರಿಗೆ ನನ್ನ ಹಿಂಬಾಲಕರೆಂಬ ನಿಮಿತ್ತ ಸಹಾಯ ಮಾಡುವವನು ಖಂಡಿತವಾಗಿಯೂ ಪ್ರತಿಫಲವನ್ನು ಪಡೆಯುವನು. ನನ್ನ ಹಿಂಬಾಲಕರಿಗೆ ಕೇವಲ ಒಂದು ಬಟ್ಟಲು ತಣ್ಣೀರನ್ನು ಕೊಟ್ಟರೂ ಸಹ ಅದಕ್ಕೆ ಬರತಕ್ಕ ಪ್ರತಿಫಲವು ತಪ್ಪುವುದೇ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ತುಮ್ಕಾ ಗೊತ್ತ್ ರ್‍ಹಾಂವ್ದಿ, ಹ್ಯಾ ಮಾಜ್ಯಾ ಫಾಟ್ನಾ ರ್‍ಹಾತಲ್ಯಾತ್ಲ್ಯಾ ಎಕ್ ಬಾರಿಕ್ಲ್ಯಾಕ್ ಸೈತ್ ತೊ ಮಾಜ್ಯಾ ಫಾಟ್ನಾ ರ್‍ಹಾತಲೊ ಮನುನ್ ಗೊತ್ತ್ ರ್‍ಹವ್ನಬಿ ತೆಕಾ ಫಿವ್ಕ್ ಎಕ್ ಘುಟುಕ್‍ ಬರ್ ಸೈತ್ ಪಾನಿ ದಿಲ್ಯಾರ್, ತೆಕಾ ತೆಚೊ ಭೊಮಾನ್ ಗಾವುನುಚ್ ಗಾವ್ತಾ”. ಮನುನ್ ಸಾಂಗಟ್ಲ್ಯಾನ್, ಅನಿ ತೆಂಕಾ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:42
21 ತಿಳಿವುಗಳ ಹೋಲಿಕೆ  

ಅವರು ನಿಮ್ಮ ಸೇವೆಯನ್ನೂ ನೀವು ಪರಿಶುದ್ಧರಿಗೆ ಸೇವೆಮಾಡಿದ್ದರಲ್ಲಿ ಇನ್ನೂ ಮಾಡುತ್ತಿರುವುದರಲ್ಲಿ ದೇವರ ಹೆಸರಿನ ಕಡೆಗೆ ತೋರಿಸಿದ ಪ್ರೀತಿಯನ್ನೂ ಅವರು ಮರೆಯುವುದಕ್ಕೆ ದೇವರು ಅನ್ಯಾಯಗಾರರಲ್ಲ.


“ಅದಕ್ಕೆ ನಾನು ಉತ್ತರವಾಗಿ ಅವರಿಗೆ, ‘ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ನೀವು ಈ ನನ್ನ ಸಹೋದರರಲ್ಲಿ ಅತ್ಯಲ್ಪನಾದವನೊಬ್ಬನಿಗೆ, ಮಾಡಿದ್ದು ನನಗೇ ಮಾಡಿದಂತಾಯಿತು,’ ಎನ್ನುವೆನು.


“ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ಹೀನೈಸದಂತೆ ನೋಡಿಕೊಳ್ಳಿರಿ. ಪರಲೋಕದಲ್ಲಿರುವ ಅವರ ದೂತರು ಪರಲೋಕದ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿದ್ದಾರೆ.


ಯಾರಿಗಾದರೂ ಕೊಡುವ ಮನಸ್ಸಿದ್ದರೆ, ಅದು ದೇವರ ದೃಷ್ಟಿಯಲ್ಲಿ ಕೊಟ್ಟಂತೆ ಪರಿಗಣಿಸಲಾಗುವುದು. ಏಕೆಂದರೆ ಕೊಡುವವರು ಎಷ್ಟು ಕೊಟ್ಟಿದ್ದಾರೆ ಎಂಬುದು ಪ್ರಾಮುಖ್ಯವಲ್ಲ, ಆದರೆ ಇಲ್ಲದಿರುವುದನ್ನು ದೇವರು ಬಯಸದೇ ಇರುವುದನ್ನು ಕೊಡಬಯಸುತ್ತಾರೆ.


ಆದರೆ ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಅವರಿಗೆ ಒಳ್ಳೆಯದನ್ನು ಮಾಡಿರಿ. ಏನನ್ನೂ ತಿರುಗಿ ನಿರೀಕ್ಷಿಸದೆ ಸಾಲ ಕೊಡಿರಿ, ಆಗ ನಿಮ್ಮ ಪ್ರತಿಫಲ ದೊಡ್ಡದಾಗಿರುವುದು. ನೀವು ಮಹೋನ್ನತ ದೇವರ ಮಕ್ಕಳಾಗಿರುವಿರಿ, ಅವರು ಕೃತಜ್ಞತೆಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವರಾಗಿದ್ದಾರೆ.


ಅಂತೆಯೇ ಜ್ಞಾನವು ನಿನಗೆ ಜೇನುತುಪ್ಪದಂತೆ ತಿಳಿದುಕೋ. ಅದು ಸಿಕ್ಕಿದಾಗ ನಿನಗೆ ಉಜ್ವಲ ಭವಿಷ್ಯವಿದೆ. ನಿನ್ನ ನಿರೀಕ್ಷೆಯು ನಿರರ್ಥಕವಾಗುವುದಿಲ್ಲ.


“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.


ಅಂಥವರು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಕ್ಕೆ ನಡೆಸುವುದಕ್ಕಿಂತ ಅವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದೊಳಗೆ ಬಿಸಾಡುವುದು ಉತ್ತಮವಾಗಿರುವುದು.


ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬರಾದರೂ ನಾಶವಾಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.


ನಾವು ಮಾಳಿಗೆಯ ಮೇಲೆ ಒಂದು ಚಿಕ್ಕ ಕೊಠಡಿಯನ್ನು ಕಟ್ಟಿಸಿ, ಅದರಲ್ಲಿ ಅವನಿಗೋಸ್ಕರ ಮಂಚವನ್ನೂ, ಮೇಜನ್ನೂ, ಕುರ್ಚಿಯನ್ನೂ, ದೀಪವನ್ನೂ ಇಡೋಣ. ಅವನು ನಮ್ಮ ಬಳಿಗೆ ಬರುವಾಗ ಅಲ್ಲಿ ಇರಲಿ,” ಎಂದಳು.


ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ; ಆತನು ಅವನ ಉಪಕಾರಕ್ಕಾಗಿ ಪ್ರತ್ಯುಪಕಾರ ಮಾಡುವನು.


ನಿನ್ನ ಆಹಾರ ಧಾನ್ಯವನ್ನು ಹೊರನಾಡಿನ ವ್ಯಾಪಾರಕ್ಕೆ ಕಳುಹಿಸು. ಬಹಳ ದಿನಗಳ ಮೇಲೆ ಅದರಿಂದ ನಿನಗೆ ಲಾಭ ಸಿಗುವುದು.


ಅವಳು ತೆಗೆದುಕೊಂಡು ಬರಲು ಹೋಗುತ್ತಿರುವಾಗ ಅವನು ಅವಳನ್ನು ಕರೆದು, “ನೀನು ದಯಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತೆಗೆದುಕೊಂಡು ಬಾ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು