Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:5 - ಕನ್ನಡ ಸಮಕಾಲಿಕ ಅನುವಾದ

5 ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟಿದ್ದೇನೆಂದರೆ: “ಯೆಹೂದ್ಯರಲ್ಲದವರ ಬಳಿಗೆ ಹೋಗಬೇಡಿರಿ, ಸಮಾರ್ಯರ ಊರನ್ನೂ ಪ್ರವೇಶಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, “ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ಹನ್ನೆರಡುಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸುಸ್ವಾಮಿ ಅವರಿಗೆ ಕೊಟ್ಟ ಆದೇಶ ಇದು: “ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು. ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ - ಅನ್ಯಜನಗಳ ಕಡೆಗೆ ಹೋಗಬೇಡಿರಿ, ಸಮಾರ್ಯರ ಊರೊಳಗೆ ಕಾಲಿಡಬೇಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೇಸು ಈ ಹನ್ನೆರಡು ಅಪೊಸ್ತಲರಿಗೆ ಕೆಲವು ಆಜ್ಞೆಗಳನ್ನು ನೀಡಿ ಪರಲೋಕರಾಜ್ಯವನ್ನು ಕುರಿತು ತಿಳಿಸುವುದಕ್ಕಾಗಿ ಅವರನ್ನು ಕಳುಹಿಸಿದನು. ಯೇಸು ಅವರಿಗೆ ಹೇಳಿದ್ದೇನೆಂದರೆ: “ಯೆಹೂದ್ಯರಲ್ಲದ ಜನರ ಬಳಿಗಾಗಲಿ ಸಮಾರ್ಯದವರು ವಾಸಿಸುವ ಯಾವ ಊರಿಗಾಗಲಿ ಹೋಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹ್ಯಾ ಬಾರಾ ಜಾನಾ ಶಿಸಾಕ್ನಿ ಜೆಜುನ್ ಸುಚ್ನಾ ದಿವ್ನ್, “ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ನಾಹೊಲ್ಯಾರ್ ಸಮಾರಿಯಾಚ್ಯಾ ಗಾಂವಾತ್ನಿ ಜಾವ್‍ನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:5
27 ತಿಳಿವುಗಳ ಹೋಲಿಕೆ  

ಆದ್ದರಿಂದ ಆ ಸಮಾರ್ಯ ಸ್ತ್ರೀಯು ಯೇಸುವಿಗೆ, “ನೀನು ಯೆಹೂದ್ಯನಾಗಿದ್ದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದು ಹೇಗೆ,” ಎಂದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಒಡನಾಟ ಇರಲಿಲ್ಲ.


ಯೆಹೂದ್ಯರಲ್ಲದವರಿಗೆ ರಕ್ಷಣೆಯಾಗುವಂತೆ ಮಾತನಾಡುವ ನಮಗೆ ಅವರು ಅಡ್ಡಿ ಮಾಡುತ್ತಾರೆ. ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಹೆಚ್ಚೆಚ್ಚಾಗಿ ಕೂಡಿಸಿಕೊಳ್ಳುತ್ತಾ ಹೋಗುತ್ತಾರೆ. ಕೊನೆಗೆ ಕೋಪಾಗ್ನಿಯೂ ಅವರ ಮೇಲೆ ಬರಲಿದೆ.


ಯೇಸುವಿನ ಪಾದಕ್ಕೆ ಅಡ್ಡಬಿದ್ದು, ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದನು. ಅವನೋ ಸಮಾರ್ಯದವನಾಗಿದ್ದನು.


ಯೆಹೂದ್ಯರಲ್ಲದವರ ಮೇಲೆಯೂ ಪವಿತ್ರಾತ್ಮ ದೇವರು ವರವನ್ನು ಸುರಿಸಿದ್ದಕ್ಕೆ ಪೇತ್ರನೊಂದಿಗೆ ಸುನ್ನತಿಯಾದ ವಿಶ್ವಾಸಿಗಳು ಅತ್ಯಾಶ್ಚರ್ಯಪಟ್ಟರು.


ಶಿಷ್ಯರು ದೇವರ ರಾಜ್ಯವನ್ನು ಸಾರುವುದಕ್ಕೂ ರೋಗಿಗಳನ್ನು ಸ್ವಸ್ಥಮಾಡುವುದಕ್ಕೂ ಯೇಸು ಅವರನ್ನು ಕಳುಹಿಸಿಕೊಟ್ಟರು.


ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ಯೇಸು ತಿರುಗಿ ಅವರಿಗೆ, “ನಿಮಗೆ ಸಮಾಧಾನವಾಗಲಿ, ತಂದೆಯು ನನ್ನನ್ನು ಕಳುಹಿಸಿದಂತೆಯೇ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ,” ಎಂದರು.


ಆಗ ಯೆಹೂದಿ ನಾಯಕರು, “ನಾವು ಈತನನ್ನು ಕಾಣದ ಹಾಗೆ ಈತ ಎಲ್ಲಿಗೆ ಹೋಗಲಿದ್ದಾನೆ? ಗ್ರೀಕರ ನಡುವೆ ಚದರಿ ಹೋದವರ ಬಳಿಗೆ ಹೋಗಿ ಗ್ರೀಕರಿಗೆ ಬೋಧಿಸುವನೋ?


ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಸಮೀಪದಲ್ಲಿರುವ ಸುಖರೆಂಬ ಸಮಾರ್ಯದ ಪಟ್ಟಣಕ್ಕೆ ಯೇಸು ಬಂದರು.


ಆದರೆ ಒಬ್ಬ ಸಮಾರ್ಯದವನು, ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ಕಂಡು, ಕನಿಕರಪಟ್ಟು,


“ಜೆಬುಲೂನ್ ನಾಡು ಮತ್ತು ನೆಫ್ತಲೀಮ್ ನಾಡು, ಯೊರ್ದನ್ ನದಿಯ ಆಚೆ ಸರೋವರದ ಕಡೆ, ಯೆಹೂದ್ಯರಲ್ಲದವರಿರುವ ಗಲಿಲಾಯ ನಾಡು,


ಸೌಲನು ಸ್ತೆಫನನ ಕೊಲೆಗೆ ಸಮ್ಮತಿಸಿದ್ದನು. ಆ ದಿನವೇ ಯೆರೂಸಲೇಮಿನ ಸಭೆಗೆ ವಿರೋಧವಾಗಿ ಮಹಾಹಿಂಸೆ ಪ್ರಾರಂಭವಾಯಿತು, ಅಪೊಸ್ತಲರನ್ನು ಬಿಟ್ಟು ಉಳಿದವರೆಲ್ಲರೂ ಯೂದಾಯ ಮತ್ತು ಸಮಾರ್ಯ ಪ್ರಾಂತಗಳಿಗೆ ಚದರಿಹೋದರು.


ಅದಕ್ಕೆ ಯೆಹೂದಿ ನಾಯಕರು ಯೇಸುವಿಗೆ, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವ ಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೇ?” ಎಂದು ಕೇಳಿದರು.


ನಮ್ಮ ಪಿತೃಗಳು ಈ ಬೆಟ್ಟದ ಮೇಲೆ ದೇವರನ್ನು ಆರಾಧಿಸಿದರು. ಆದರೆ, ‘ಆರಾಧಿಸತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ’ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ,” ಎಂದಳು.


ಇವುಗಳಾದ ಮೇಲೆ ಕರ್ತದೇವರು ಬೇರೆ ಎಪ್ಪತ್ತೆರಡು ಮಂದಿಯನ್ನು ಸಹ ನೇಮಿಸಿ ತಾವೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತಮಗೆ ಮುಂದಾಗಿ ಕಳುಹಿಸಿದರು.


ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಸೇವಕರನ್ನು ಕಳುಹಿಸಿದನು. ಆದರೆ ಅವರು ಬರಲು ಒಪ್ಪಲಿಲ್ಲ.


ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಕರೆದು, ಅವರಿಗೆ ಅಶುದ್ಧಾತ್ಮಗಳನ್ನು ಹೊರಗಟ್ಟುವ ಅಧಿಕಾರವನ್ನು ಕೊಟ್ಟು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದರು.


ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ಎಲ್ಲಾ ದೆವ್ವಗಳನ್ನು ಓಡಿಸುವುದಕ್ಕೂ ರೋಗಗಳನ್ನು ಸ್ವಸ್ಥಮಾಡುವುದಕ್ಕೂ ಅವರಿಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು,


ನೀವು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು