Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:8 - ಕನ್ನಡ ಸಮಕಾಲಿಕ ಅನುವಾದ

8 ರೋಗಿಗಳನ್ನು ಸ್ವಸ್ಥಮಾಡಿರಿ, ಮರಣಹೊಂದಿದವರನ್ನು ಎಬ್ಬಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ. ನೀವು ಉಚಿತವಾಗಿ ಪಡೆದಿದ್ದೀರಿ; ಉಚಿತವಾಗಿ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ. ದೆವ್ವಗಳನ್ನು ಬಿಡಿಸಿರಿ, ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠಹತ್ತಿದವರನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ರೋಗಿಗಳನ್ನು ವಾಸಿಮಾಡಿರಿ. ಸತ್ತವರನ್ನು ಬದುಕಿಸಿರಿ. ಕುಷ್ಠರೋಗಿಗಳನ್ನು ವಾಸಿಮಾಡಿರಿ. ಜನರನ್ನು ದೆವ್ವಗಳಿಂದ ಬಿಡಿಸಿರಿ. ನಾನು ನಿಮಗೆ ಈ ಅಧಿಕಾರಗಳನ್ನು ಉಚಿತವಾಗಿ ಕೊಡುತ್ತೇನೆ. ಆದ್ದರಿಂದ ಬೇರೆಯವರಿಗೆ ಉಚಿತವಾಗಿ ಸಹಾಯಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಶಿಕ್ ಹೊತ್ತ್ಯಾಕ್ನಿ ಬರೆ ಕರಾ, ಮರಲ್ಲ್ಯಾಕ್ನಿ ಝಿತ್ತೆ ಕರಾ, ಕುಸ್ಟ್‌ ರೊಗ್ ಹೊತ್ತ್ಯಾಕ್ನಿ ಗುನ್ ಕರಾ, ಅನಿ ಗಿರೆ ಭಾಯ್ರ್ ಕಾಡಾ, ತುಮ್ಕಾ ಫುಕೊಟ್ ಗಾವ್ಲಾ, ತಸೆಮನುನ್ ತುಮಿಬಿ ಫುಕೊಟ್ ದಿವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:8
15 ತಿಳಿವುಗಳ ಹೋಲಿಕೆ  

ಆಗ ಪೇತ್ರನು, “ಬೆಳ್ಳಿಬಂಗಾರ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ. ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಲ್ಲಿ, ಎದ್ದು ನಡೆ,” ಎಂದು ಹೇಳಿ,


ನಿಮ್ಮ ಪವಿತ್ರ ಸೇವಕ ಯೇಸುವಿನ ನಾಮದ ಮೂಲಕವಾಗಿ ಗುಣಪಡಿಸಲು, ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಮಾಡಲು ದೇವರೇ, ನಿಮ್ಮ ಹಸ್ತವನ್ನು ಚಾಚಿರಿ.”


ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿ, ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ,’ ಎಂದು ಹೇಳಿರಿ.


ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ತಮ್ಮ ಬಳಿಗೆ ಕರೆದು, ಅಶುದ್ಧಾತ್ಮಗಳನ್ನು ಓಡಿಸುವುದಕ್ಕೂ ಎಲ್ಲಾ ತರವಾದ ವ್ಯಾಧಿಯನ್ನೂ ರೋಗವನ್ನೂ ಸ್ವಸ್ಥಮಾಡುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು.


ಅವರು ಸರ್ಪಗಳನ್ನು ಎತ್ತುವರು ಮತ್ತು ಮಾರಣಾಂತಿಕವಾದ ಯಾವುದನ್ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಅವರು ರೋಗಿಗಳ ಮೇಲೆ ಕೈಗಳನ್ನಿಟ್ಟಾಗ ರೋಗಿಗಳು ಸ್ವಸ್ಥರಾಗುವರು,” ಎಂದು ಹೇಳಿದರು.


ಆದ್ದರಿಂದ ನೀನು ನಿನ್ನ ಪುತ್ರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ತೆರೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವ ಸೇವೆಯನ್ನು ನಿಮಗೆ ದಾನವಾಗಿ ಕೊಟ್ಟಿದ್ದೇನೆ. ಪರಕೀಯನು ಸಮೀಪಕ್ಕೆ ಬಂದರೆ ಮರಣಶಿಕ್ಷೆಯಾಗಬೇಕು,” ಎಂದರು.


ಬಾಯಾರಿದ ಸಕಲ ಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನೂ ಬರಲಿ. ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ. ಬನ್ನಿರಿ, ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡುಕೊಳ್ಳಿರಿ.


ನೀವು ಹೋಗುತ್ತಾ, ‘ಪರಲೋಕ ರಾಜ್ಯವು ಸಮೀಪವಾಯಿತು,’ ಎಂದು ಸಾರಿ ಹೇಳಿರಿ.


“ನಿಮ್ಮ ನಡುಕಟ್ಟುಗಳಲ್ಲಿ ಬಂಗಾರ, ಬೆಳ್ಳಿ ಮತ್ತು ತಾಮ್ರದ ನಾಣ್ಯಗಳನ್ನು ಇಟ್ಟುಕೊಳ್ಳಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು