Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:11 - ಕನ್ನಡ ಸಮಕಾಲಿಕ ಅನುವಾದ

11 ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸ್ತ್ರೀಯರಲ್ಲಿ ಹುಟ್ಟಿದವರಲ್ಲಿ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಹುಟ್ಟಲಿಲ್ಲ; ಆದರೂ ಪರಲೋಕ ರಾಜ್ಯದಲ್ಲಿರುವ ಅತ್ಯಂತ ಚಿಕ್ಕವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮಾನವನಾಗಿ ಜನಿಸಿದ್ದವರಲ್ಲಿ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಾರೂ ಹುಟ್ಟಿಲ್ಲ! ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಆದರೂ ಸ್ವರ್ಗಸಾಮ್ರಾಜ್ಯದಲ್ಲಿ ಕನಿಷ್ಠನಾದವನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕನಾದ ಯೋಹಾನನಿಗಿಂತ ದೊಡ್ಡವನು ಎದ್ದಿಲ್ಲ. ಆದರೂ ಪರಲೋಕರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಸ್ನಾನಿಕ ಯೋಹಾನನು ಹಿಂದೆ ಜೀವಿಸಿದ್ದವರಿಗಿಂತ ದೊಡ್ಡವನು. ಆದರೆ ಪರಲೋಕರಾಜ್ಯದಲ್ಲಿರುವ ಚಿಕ್ಕವನು ಸಹ ಯೋಹಾನನಿಗಿಂತಲೂ ಹೆಚ್ಚಿನವನಾಗಿದ್ದಾನೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಆಜ್ ಸಗೊಳ್ ಜಲ್ಮಲ್ಲ್ಯಾ ಮಾನ್ಸಾತ್ನಿ ಜುವಾಂವಾ ತವ್ಡೊ ಮೊಟೊ ಕೊನ್ ಬಿ ನಾ. ಖರೆ ಸರ್‍ಗಾಚ್ಯಾ ರಾಜಾತ್ ಎಗ್ದಮ್ ಬಾರಿಕ್ ಮನುನ್ ಹೊತ್ತೊಬಿ ಜುವಾಂವ್ ಬಾವ್ತಿಸಾಚ್ಯಾನ್ ಮೊಟೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:11
31 ತಿಳಿವುಗಳ ಹೋಲಿಕೆ  

ನಾನು ನಿಮಗೆ ಹೇಳುವುದೇನೆಂದರೆ, ಸ್ತ್ರೀಯರಲ್ಲಿ ಹುಟ್ಟಿದವರಲ್ಲಿ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಂತ ಚಿಕ್ಕವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ,” ಎಂದರು.


ನಾನು ಕರ್ತನ ಜನರೆಲ್ಲರಲ್ಲಿಯೂ ಅತ್ಯಲ್ಪನಾಗಿದ್ದೇನೆ. ಹಾಗಿದ್ದರೂ, ನನಗೆ ಈ ಕೃಪೆ ಕೊಡಲಾಯಿತು: ಏಕೆಂದರೆ, ನಾನು ಕ್ರಿಸ್ತನ ಅಪರಿಮಿತವಾದ ಐಶ್ವರ್ಯವನ್ನು ಯೆಹೂದ್ಯರಲ್ಲದವರಿಗೆ ಸಾರುವಂತೆಯೂ


“ಅವರನ್ನು ಕುರಿತು ಯೋಹಾನನು ಸಾಕ್ಷಿ ಕೊಡುತ್ತಾ, ‘ನನ್ನ ಬಳಿಕ ಬರುವವರು ನನಗಿಂತ ಮೊದಲೇ ಇದ್ದುದರಿಂದ ಅವರು ನನಗಿಂತಲೂ ಶ್ರೇಷ್ಠರು’ ಎಂದು ನಾನು ಹೇಳಿದವರು ಇವರೇ,” ಎಂದು ಘೋಷಿಸಿದನು.


ಆದ್ದರಿಂದ ಈ ಆಜ್ಞೆಗಳಲ್ಲಿ ಅತ್ಯಂತ ಚಿಕ್ಕದಾದ ಒಂದನ್ನು ಮೀರಿ, ಹಾಗೆಯೇ ಮೀರಲು ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಅತಿ ಚಿಕ್ಕವನೆಂದು ಎನಿಸಿಕೊಳ್ಳುವನು. ಆದರೆ ಈ ಆಜ್ಞೆಗಳನ್ನು ಪಾಲಿಸಿ ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಎನಿಸಿಕೊಳ್ಳುವನು.


“ನಾನಂತೂ ದೇವರ ಕಡೆಗೆ ತಿರುಗಿಕೊಂಡಿದ್ದಕ್ಕಾಗಿ ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ. ಆದರೆ ನನ್ನ ಬಳಿಕ ಬರುವವರು ನನಗಿಂತಲೂ ಶಕ್ತರು, ಅವರ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ. ಅವರಾದರೋ ಪವಿತ್ರಾತ್ಮರಲ್ಲಿಯೂ ಅಗ್ನಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಕೊಡುವರು.


“ಯಾರು ಈ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿಕೊಳ್ಳುತ್ತಾರೋ ಅವರು ನನ್ನನ್ನೇ ಸ್ವೀಕರಿಸಿಕೊಳ್ಳುತ್ತಾರೆ; ಯಾರು ನನ್ನನ್ನು ಸ್ವೀಕರಿಸಿಕೊಳ್ಳುತ್ತಾರೋ ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಳ್ಳುತ್ತಾರೆ. ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡವನಾಗಿರುವನು,” ಎಂದರು.


ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು, ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.


ಏಕೆಂದರೆ ನಮ್ಮೊಂದಿಗೆ ಅವರು ಪರಿಪೂರ್ಣರಾಗಬೇಕೆಂದು ದೇವರು ನಮಗೋಸ್ಕರ ಉತ್ತಮವಾದದ್ದನ್ನು ಸಂಕಲ್ಪಿಸಿದ್ದಾರೆ.


ನಾನಾದರೋ ಅಪೊಸ್ತಲರಲ್ಲಿ ಕನಿಷ್ಠನು, ಅಪೊಸ್ತಲನೆನಿಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ, ಏಕೆಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿದೆನು.


ಆದ್ದರಿಂದ ಇಂಥ ವ್ಯಾಜ್ಯಗಳ ಬಗ್ಗೆ ವ್ಯಾಜ್ಯಗಳಿದ್ದರೂ ಸಭೆಯಲ್ಲಿ ಮರ್ಯಾದೆ ಇಲ್ಲದವರನ್ನು ನ್ಯಾಯಾಧೀಶರಾಗಿ ನೇಮಿಸುವಿರೋ?


ಆಗ ಅನೇಕರು ಯೇಸುವಿನ ಬಳಿಗೆ ಬಂದು, “ಯೋಹಾನನು ಯಾವುದೇ ಸೂಚಕಕಾರ್ಯವನ್ನು ಮಾಡಲಿಲ್ಲ. ಆದರೆ ಇವರ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ಸತ್ಯವಾಗಿದೆ,” ಎಂದರು.


ಆತನು ಹೆಚ್ಚಾಗಬೇಕು ನಾನು ಕಡಿಮೆಯಾಗಬೇಕು.


ಹುಟ್ಟಿದಂದಿನಿಂದಲೇ ನಾನು ಪಾಪಿ. ನನ್ನ ತಾಯಿ ನನ್ನನ್ನು ಗರ್ಭಧರಿಸಿದಾಗಲೇ ನಾನು ಪಾಪಿಯೇ.


“ಮನುಷ್ಯನು ಎಷ್ಟರವನು? ಅವನು ಶುದ್ಧನಿರಲು ಸಾಧ್ಯವೇ? ಸ್ತ್ರೀಯರಲ್ಲಿ ಹುಟ್ಟಿದವನು ನೀತಿವಂತನಾಗಿರಬಹುದೆ?


ಅಶುದ್ಧತೆಯಿಂದ ಶುದ್ಧವಾದದ್ದನ್ನು ತರುವವನು ಯಾರು? ಯಾರೂ ತರಲಾರರು!


“ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನೂ, ಕಷ್ಟಸಂಕಟಗಳಿಂದ ತುಂಬಿದವನೂ ಆಗಿದ್ದಾನೆ.


ಯೋಹಾನನು ಉರಿದು ಪ್ರಕಾಶಿಸುವ ದೀಪವಾಗಿದ್ದನು. ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಅತ್ಯಾನಂದಪಡಲು ನೀವು ಇಚ್ಚಿಸಿದಿರಿ.


ಅವರೇ ನನ್ನ ಬಳಿಕ ಬರುವವರು. ಅವರ ಪಾದರಕ್ಷೆಗಳ ದಾರವನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,” ಎಂದು ಉತ್ತರಕೊಟ್ಟನು.


ಆ ದಿನದಲ್ಲಿ ಯೆಹೋವ ದೇವರು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವರು. ಆ ದಿವಸಗಳಲ್ಲಿ ಅವರಲ್ಲಿ ಅತ್ಯಂತ ಬಲಹೀನನು ದಾವೀದನಂತೆ ಬಲಾಢ್ಯನಾಗುವನು. ದಾವೀದನ ವಂಶವು ದೇವರ ಹಾಗೆಯೂ, ಮುಂದಾಳಾಗಿ ಯೆಹೋವ ದೇವರ ದೂತನ ಹಾಗೆಯೂ ಇರುವುದು.


ಆದರೆ ಯೇಸು ತಮ್ಮಲ್ಲಿ ನಂಬಿಕೆಯಿಡುವವರು ಹೊಂದಲಿರುವ ಪವಿತ್ರಾತ್ಮರನ್ನು ಕುರಿತು ಹೀಗೆ ಹೇಳಿದರು. ಯೇಸು ಇನ್ನೂ ಮಹಿಮೆ ಹೊಂದಿರಲಿಲ್ಲ. ಈ ಕಾರಣದಿಂದ ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ.


ಇಷ್ಟೇ ಅಲ್ಲದೆ ಯೆಹೋವ ದೇವರು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ, ಏಳು ದಿನಗಳ ಬೆಳಕಿನಂತಾಗುವುದು.


ಮನುಷ್ಯನು ದೇವರ ಮುಂದೆ ನೀತಿವಂತನಾಗುವುದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ಪರಿಶುದ್ಧನಾಗಿರುವುದು ಹೇಗೆ?


“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಹಿಂದೊಮ್ಮೆ ನಾವೆಲ್ಲರೂ ಅವರೊಂದಿಗೆ ನಮ್ಮ ದೇಹದ ಆಶೆಗಳ ಪ್ರಕಾರ ಜೀವಿಸುತ್ತಿದ್ದಾಗ ಮನಸ್ಸಿನ ಹಾಗೂ ಶರೀರದ ಆಶೆಗಳನ್ನು ನೆರವೇರಿಸುತ್ತಾ ನಡೆದು, ಉಳಿದವರಂತೆ ಸ್ವಾಭಾವಿಕವಾಗಿ ದೇವರ ಕೋಪಕ್ಕೆ ಗುರಿಯಾದವರಾಗಿದ್ದೆವು.


ಆದರೆ ಈಗ ನಮಗೆ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಕೃಪೆ ಪ್ರಕಟವಾಯಿತು. ಕ್ರಿಸ್ತ ಯೇಸು ಮರಣವನ್ನು ನಾಶಮಾಡಿ, ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವವನ್ನೂ ಪ್ರಕಾಶಗೊಳಿಸಿದರು.


ಅವನು ಕರ್ತದೇವರ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಕುಡಿಯುವುದಿಲ್ಲ, ಅವನು ತಾಯಿಯ ಗರ್ಭದಿಂದಲೇ ಪವಿತ್ರಾತ್ಮ ಭರಿತನಾಗಿರುವನು.


ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನು ಯೂದಾಯ ಪ್ರಾಂತದ ಅರಣ್ಯಕ್ಕೆ ಬಂದು,


ಯೋಹಾನನ ಕುರಿತು ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ.’


ಸ್ನಾನಿಕನಾದ ಯೋಹಾನನ ದಿನಗಳಿಂದ ಇದುವರೆಗೆ, ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಒಳಗಾಗಿದೆ, ಬಲಾತ್ಕಾರಿಗಳು ಅದನ್ನು ಬಲವಂತವಾಗಿ ತೆಗೆದುಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು