Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:21 - ಕನ್ನಡ ಸಮಕಾಲಿಕ ಅನುವಾದ

21 “ಖೊರಾಜಿನೇ, ನಿನಗೆ ಕಷ್ಟ! ಬೇತ್ಸಾಯಿದವೇ, ನಿನಗೆ ಕಷ್ಟ! ಏಕೆಂದರೆ ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ಟೈರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅಲ್ಲಿಯವರು ಬಹಳ ಕಾಲದ ಹಿಂದೆಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ದೇವರ ಕಡೆ ತಿರುಗಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 :ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣೀತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಾಪಕ್ಕೆ ವಿಮುಖರಾಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೇಗಂದರೆ - ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣೀತಟ್ಟು ಹೊದ್ದುಕೊಂಡು ಬೂದಿಯಲ್ಲಿ [ಕೂತುಕೊಂಡು] ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅನಿ,ಖೊರಾಜಿನಾ, ಮಿಯಾ ತುಜಿ ಗತ್ ಕಾಯ್ ಸಾಂಗು! ಬೆತ್ಸಾಯಿದಾ, ತುಜಿಬಿ ಗತ್ ಮಿಯಾ ಕಾಯ್ ಸಾಂಗು! ತುಮ್ಚ್ಯಾ ಮದ್ದಿ ಕರಲ್ಲಿ ತವ್ಡಿ ವಿಚಿತ್ರ್ ಕಾಮಾ ಮಿಯಾ ತಿರ್ ಅನಿ ಸಿದೊನಾತ್ ಕರ್ಲ್ಯಾರ್ ಥೈತ್ಲಿ ಲೊಕಾ ಅಪ್ನಿ ಪಾಪಾನಿತ್ನಾ ದೆವಾಕ್ಡೆ ಪರತ್ಲಾವ್ ಮನುನ್ ದಾಕ್ವುಕ್ ಕನ್ನಾಚ್ಕಿ ಆಂಗಾರ್ ಗೊನಿಚಿಲ್ ಘಾಲುನ್ ಘೆವ್ನ್ ರಕ್ಕಾ ಆಂಗಾ ವರ್‍ತಿ ಸಿಪ್ಡುನ್ ಘೆಯ್ ಹೊತ್ತಿ ಕಾಯ್ಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:21
31 ತಿಳಿವುಗಳ ಹೋಲಿಕೆ  

ಅವನು ಟೈರ್ ಮತ್ತು ಸೀದೋನಿನ ಜನರೊಂದಿಗೆ ಬಹು ಕೋಪವುಳ್ಳವನಾಗಿದ್ದನು. ಈಗ ಅವರೆಲ್ಲರೂ ಒಂದಾಗಿ ಅವನ ಬಳಿ ಬಂದು ಅರಸನ ನಂಬಿಗಸ್ತ ಸೇವಕನಾದ ಬ್ಲಾಸ್ತ ಎಂಬುವನ ಬೆಂಬಲವನ್ನು ಪಡೆದುಕೊಂಡು, ಸಂಧಾನ ಮಾಡಿಕೊಳ್ಳಲು ಅರಸನನ್ನು ಕೇಳಿಕೊಂಡರು. ಏಕೆಂದರೆ ಅವರ ಆಹಾರ ಧಾನ್ಯಗಳು ಅರಸನ ಸೀಮೆಯಿಂದ ಬರುತ್ತಿದ್ದವು.


ಇವರು ಗಲಿಲಾಯದ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ,” ಎಂದರು.


ಅಪೊಸ್ತಲರು ಹಿಂದಿರುಗಿ ಬಂದು, ತಾವು ಮಾಡಿದವುಗಳನ್ನೆಲ್ಲಾ ಯೇಸುವಿಗೆ ತಿಳಿಸಿದರು. ಆಗ ಯೇಸು ಬೇತ್ಸಾಯಿದ ಎಂಬ ಹೆಸರಿನ ಪಟ್ಟಣಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದರು.


ಇದಾದ ಕೂಡಲೇ ಯೇಸು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ತಮ್ಮ ಶಿಷ್ಯರು ದೋಣಿಯನ್ನು ಹತ್ತಿ ತಮಗಿಂತ ಮುಂದಾಗಿ ಬೇತ್ಸಾಯಿದಕ್ಕೆ ಹೋಗಬೇಕೆಂದು ಆಜ್ಞಾಪಿಸಿದರು.


ಯೇಸು ಅಲ್ಲಿಂದ ಹೊರಟು ಟೈರ್ ಸೀದೋನ್ ಪ್ರದೇಶಕ್ಕೆ ಬಂದರು.


ಆದ್ದರಿಂದ ನಾನು ಹೇಳಿದ್ದನ್ನೆಲ್ಲಾ ಹಿಂತೆಗೆದುಕೊಂಡು, ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ,” ಎಂದನು.


ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವುದಕ್ಕಾಗಿ ಬಿಳಾಮನ ದೋಷವನ್ನು ಮಾಡುವುದಕ್ಕೆ ದುರಾಶೆಯಿಂದ ಓಡುವವರಾಗಿದ್ದಾರೆ. ಅವರು ಕೋರಹನಂತೆ ಎದುರು ಮಾತನಾಡಿ ನಾಶವಾಗುವವರಾಗಿದ್ದಾರೆ. ಆದ್ದರಿಂದ ಅವರ ಗತಿ ಏನೆಂದು ಹೇಳಲಿ!


ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿದಕ್ಕೆ ಸೇರಿದವನು.


ಯೇಸು ಅವರೊಂದಿಗೆ ಕೆಳಗಿಳಿದು ಸಮತಟ್ಟಾದ ಭೂಮಿಯ ಮೇಲೆ ನಿಂತಿದ್ದಾಗ, ಅವರ ಶಿಷ್ಯರ ಗುಂಪು ಅಲ್ಲದೆ ಯೂದಾಯದಿಂದಲೂ ಯೆರೂಸಲೇಮಿನಿಂದಲೂ ಟೈರ್, ಸೀದೋನ್ ಪಟ್ಟಣಗಳಿರುವ ಸಮುದ್ರ ತೀರದಿಂದಲೂ


ಯೇಸು ಬೇತ್ಸಾಯಿದಕ್ಕೆ ಬಂದಾಗ, ಕೆಲವರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಬೇಡಿಕೊಂಡರು.


ಆಮೇಲೆ ಯೇಸು ಟೈರ್ ಪಟ್ಟಣದ ಸಮೀಪವಿದ್ದ ಪ್ರದೇಶದಿಂದ ಹೊರಟು ಸೀದೋನಿನ ಮಾರ್ಗವಾಗಿ ಗಲಿಲಾಯ ಸರೋವರ ತೀರವನ್ನು ಹಾದು ದೆಕಪೊಲಿ ಪ್ರದೇಶಕ್ಕೆ ಬಂದರು.


ಯೇಸು ಮಾಡುತ್ತಿದ್ದ ಎಲ್ಲವನ್ನು ಕೇಳಿ, ಬಹುಜನರು ಯೂದಾಯದಿಂದಲೂ ಯೆರೂಸಲೇಮ್ ನಗರದಿಂದಲೂ ಇದುಮಾಯದಿಂದಲೂ ಯೊರ್ದನ್ ನದಿಯ ಆಚೆಕಡೆಯಿಂದಲೂ ಟೈರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಯೇಸುವಿನ ಬಳಿಗೆ ಬಂದರು.


ಪಾಪಕ್ಕೆ ಕಾರಣವಾಗಿರುವ ಜಗತ್ತಿಗೆ ಕಷ್ಟ! ಇಂಥ ವಿಷಯಗಳು ಅನಿವಾರ್ಯ. ಆದರೆ ಪಾಪಕ್ಕೆ ಕಾರಣವಾಗಿರುವವರ ಗತಿಯನ್ನು ಏನೆಂದು ಹೇಳಲಿ!


ಆದರೂ ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ಟೈರ್ ಮತ್ತು ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ತಾಳಬಹುದಾಗಿರುವುದು.


ಮರುದಿನ ನಾವು ಸೀದೋನಿಗೆ ತಲುಪಿದೆವು. ಪೌಲನಿಗೆ ಯೂಲ್ಯನು ದಯೆತೋರಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗುವುದಕ್ಕೂ ಅವರಿಂದ ಉಪಚಾರವನ್ನು ಹೊಂದುವುದಕ್ಕೂ ಅನುಮತಿಸಿದನು.


ಅವರಲ್ಲಿ ಯಾರ ಬಳಿಗೂ ದೇವರು ಎಲೀಯನನ್ನು ಕಳುಹಿಸದೆ ಸೀದೋನ್ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೆ ಕಳುಹಿಸಿದರು.


ಯೇಸು ಆ ಸ್ಥಳವನ್ನು ಬಿಟ್ಟು ಟೈರ್ ಪಟ್ಟಣದ ಸಮೀಪವಿದ್ದ ಪ್ರದೇಶಕ್ಕೆ ಹೋದರು. ಯೇಸು ಒಂದು ಮನೆಯೊಳಗೆ ಹೋದಾಗ, ಅದು ಯಾರಿಗೂ ತಿಳಿಯಬಾರದೆಂದು ಬಯಸಿದರು. ಆದರೂ ಅವರು ಗುಟ್ಟಾಗಿರಲು ಸಾಧ್ಯವಾಗಲಿಲ್ಲ.


ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದರು.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ನಿನ್ನ ಕೀಳಾದ ವೇಶ್ಯತನವನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯ ಕಾರ್ಯಗಳನ್ನು ಕಂಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ಇನ್ನೆಷ್ಟು ಕಾಲ ನೀನು ಅಶುದ್ಧಳಾಗಿರುವೆ?”


“ಟೈರೇ, ಸೀದೋನೇ, ಫಿಲಿಷ್ಟಿಯದ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರೋಧವಾಗಿ ನಿಮಗೆ ಏನು ಇದೆ? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ಮುಯ್ಯಿ ನನಗೆ ಸಲ್ಲಿಸಿದರೆ, ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಟೈರ್ ಪಟ್ಟಣದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಸಹೋದರರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಸೆರೆಯಾಳುಗಳ ಸಂಪೂರ್ಣ ಸಮುದಾಯಗಳನ್ನು ಎದೋಮಿಗೆ ಮಾರಿಬಿಟ್ಟರು.


ಕುರಿಮರಿ ಆಗಿರುವವರು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾ ಭೂಕಂಪವಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.


ನನ್ನ ಇಬ್ಬರು ಸಾಕ್ಷಿಗಳಿಗೆ ಗೋಣಿತಟ್ಟುಗಳನ್ನು ಹೊದ್ದುಕೊಂಡು, ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವಂತೆ ಮಾಡುವೆನು,”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು