Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:17 - ಕನ್ನಡ ಸಮಕಾಲಿಕ ಅನುವಾದ

17 ಹೀಗೆ ದೇವರು ಪ್ರವಾದಿಯಾದ ಯೆಶಾಯನ ಮುಖಾಂತರ ಹೇಳಿದ ಮಾತು ನೆರವೇರಿತು. ಅದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೀಗೆ ಯೆಶಾಯನೆಂಬ ಪ್ರವಾದಿಯ ಮೂಲಕ ಹೇಳಿಸಿರುವ ಮಾತು ನೆರವೇರಿತು; ಅದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೀಗೆ ದೇವರು ಪ್ರವಾದಿ ಯೆಶಾಯನ ಮುಖಾಂತರ ಹೇಳಿದ ಈ ವಚನ ನೆರವೇರಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೀಗೆ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿಸಿರುವ ಮಾತು ನೆರವೇರಿತು; ಅದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪ್ರವಾದಿಯಾದ ಯೆಶಾಯನು ಹೇಳಿದ್ದನ್ನು ನೆರವೇರಿಸುವುದಕ್ಕಾಗಿ ಯೇಸು ಇವುಗಳನ್ನು ಮಾಡಿದನು. ಯೆಶಾಯನು ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಇಸಾಯಿಯಾ ಪ್ರವಾದ್ಯಾಕ್ನಾ ದೆವಾನ್ ಸಾಂಗಲ್ಲೆ ಖರೆ ಹೊವ್‍ಸಾಟ್ನಿ ಮನುನ್ ತೆನಿ ಅಶೆ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:17
15 ತಿಳಿವುಗಳ ಹೋಲಿಕೆ  

ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ಹುಟ್ಟುವುದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ.


ಇದರಿಂದ, “ಸ್ವಾಮೀ, ನಮ್ಮ ಸುದ್ದಿಯನ್ನು ಯಾರು ನಂಬಿದರು? ಕರ್ತ ಆಗಿರುವವರ ಬಾಹುವು ಯಾರಿಗೆ ಪ್ರಕಟವಾಯಿತು?” ಎಂದು ಪ್ರವಾದಿ ಯೆಶಾಯನು ನುಡಿದದ್ದು ನೆರವೇರಿತು.


ಇದೆಲ್ಲವೂ ಪವಿತ್ರ ವೇದದಲ್ಲಿ ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಆಯಿತು. ಅದೇನೆಂದರೆ,


ಹೀಗೆ ಒಬ್ಬ ಪ್ರವಾದಿಯ ಮೂಲಕ ಹೇಳಿದ ಮಾತು ನೆರವೇರಿತು: “ನಾನು ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು. ನಾನು ಲೋಕ ಪ್ರಾರಂಭದಿಂದ ಮರೆಯಾದವುಗಳನ್ನು ಪ್ರಕಟಪಡಿಸುವೆನು.”


ತನ್ನ ಸೇವಕನ ಮಾತುಗಳನ್ನು ಸ್ಥಾಪಿಸುವವನು, ಮತ್ತು ತನ್ನ ದೂತರ ಆಲೋಚನೆಯನ್ನು ಪೂರೈಸುವವನು. “ಯೆರೂಸಲೇಮಿಗೆ, ‘ನೀನು ನಿವಾಸವಾಗುವೆ,’ ಯೆಹೂದ ಪಟ್ಟಣಗಳಿಗೆ, ‘ಅವು ಪುನಃ ಕಟ್ಟಲಾಗುವುದು,’ ಮತ್ತು ಅದರ ಹಾಳು ಸ್ಥಳಗಳಿಗೆ, ‘ನಾನು ಪುನಃಸ್ಥಾಪಿಸುವೆನು,’ ಎಂದು ಹೇಳುವವನು,


ಯೆರೂಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿಗಳೂ ಯೇಸುವನ್ನು ಯಾರೆಂದು ಗುರುತಿಸಿಲಿಲ್ಲ. ಆದರೂ ಅವರು ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ವಾಕ್ಯಗಳನ್ನೂ ಗ್ರಹಿಸಲಿಲ್ಲ. ಅವರು ಯೇಸುವನ್ನು ಅಪರಾಧಿಯೆಂದು ತೀರ್ಪು ಮಾಡಿ, ಪ್ರವಾದಿಗಳ ವಾಕ್ಯಗಳನ್ನು ನೆರವೇರಿಸಿದರು.


ಇದಾದ ಮೇಲೆ ಯೇಸು ಈಗ ಎಲ್ಲವೂ ಪೂರ್ತಿಯಾಗಿದೆಯೆಂದು ತಿಳಿದು, ಪವಿತ್ರ ವೇದದ ವಾಕ್ಯವು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದರು.


ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಆತನು ಕರೆದಿರುವುದಾದರೆ, ಪವಿತ್ರ ವೇದವು ಸುಳ್ಳಾಗಲಾರದು.


ಯೇಸು ಶಿಷ್ಯರಿಗೆ, “ಮೋಶೆಯ ನಿಯಮದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆದಿರುವುದೆಲ್ಲವೂ ನೆರವೇರುವುದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ನಿಮಗೆ ಹೇಳಿದ್ದೇನೆ,” ಎಂದರು.


ಏಕೆಂದರೆ ಪವಿತ್ರ ವೇದದಲ್ಲಿ ಬರೆದಿರುವವುಗಳೆಲ್ಲವೂ ನೆರವೇರಲು, ಇವು ದಂಡನೆಯ ದಿವಸಗಳಾಗಿವೆ.


ಹೀಗೆ, “ಅವರು ತಾವೇ ನಮ್ಮ ಬಲಹೀನತೆಗಳನ್ನು ತೆಗೆದುಕೊಂಡು, ನಮ್ಮ ರೋಗಗಳನ್ನು ಹೊತ್ತುಕೊಂಡರು,” ಎಂದು ಯೆಶಾಯ ಪ್ರವಾದಿಯು ಹೇಳಿದ್ದು ನೆರವೇರಿತು.


ಆದರೆ ಯೇಸು ತಾನು ಯಾರೆಂದು ಯಾರಿಗೂ ಪ್ರಕಟಿಸಬಾರದೆಂದು ಅವರನ್ನು ಎಚ್ಚರಿಸಿದರು.


“ಈತನು ನಾನು ಆರಿಸಿಕೊಂಡ ನನ್ನ ದಾಸನು, ಈ ನನ್ನ ಪ್ರಿಯನಲ್ಲಿ ನನ್ನ ಪ್ರಾಣವು ಸಂಪೂರ್ಣ ಮೆಚ್ಚಿದೆ. ನಾನು ಈತನ ಮೇಲೆ ನನ್ನ ಆತ್ಮವನ್ನು ಇರಿಸುವೆನು, ಈತನು ಜನಾಂಗಗಳಿಗೆ ನ್ಯಾಯವನ್ನು ಸಾರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು