Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:26 - ಕನ್ನಡ ಸಮಕಾಲಿಕ ಅನುವಾದ

26 ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಓಡಿಸಿದರೆ, ಅವನು ತನಗೆ ವಿರೋಧವಾಗಿ ವಿಭಾಗವಾಗಿರುವನು. ಹಾಗಾದರೆ ಅವನ ರಾಜ್ಯವು ನಿಲ್ಲುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅದರಂತೆ ಸೈತಾನನು ಸೈತಾನನನ್ನು ಹೊರಡಿಸಿದರೆ ತನ್ನ ವಿರುದ್ಧವಾಗಿ ಹೋರಾಡಿದ ಹಾಗಾಯಿತು, ಹಾಗಾದರೆ ಅವನ ರಾಜ್ಯವು ಹೇಗೆ ನಿಂತಿತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸೈತಾನನು ಸೈತಾನನನ್ನು ಹೊಡೆದೋಡಿಸುವುದಾದರೆ, ಸೈತಾನನ ಪಕ್ಷದವರೇ ಪರಸ್ಪರ ವಿರೋಧಿಗಳಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅದರಂತೆ ಸೈತಾನನು ಸೈತಾನನನ್ನು ಹೊರಡಿಸಿದರೆ ತನ್ನಲ್ಲಿ ಭೇದ ಹುಟ್ಟಿಸಿಕೊಂಡ ಹಾಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಹೀಗಿರಲು ಸೈತಾನನು ತನ್ನ ಸ್ವಂತ ದೆವ್ವಗಳನ್ನೇ ಹೊರಗೆ ಓಡಿಸಿದರೆ ಅವನು ತನ್ನಲ್ಲಿಯೇ ಒಡಕನ್ನು ಮಾಡಿದಂತಾಯಿತು. ಆಗ ಅವನು ಮತ್ತು ಅವನ ರಾಜ್ಯವು ಸ್ಥಿರವಾಗಿರಲು ಹೇಗೆ ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತಸೆಚ್ ಸೈತಾನಾಚ್ಯಾ ರಾಜಾತ್ ದೊನ್ ಭಾಗ್ ಹೊವ್ನ್ ಎಕಾಮೆಕಾಕ್ಡೆ ಝಗ್ಡುನ್ಗೆತ್ ರ್‍ಹಾಲ್ಯಾರ್, ತೆಚೊ ರಾಜ್ ಲಗ್ಗುನಾಚ್ ನಾಸ್ ಹೊವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:26
13 ತಿಳಿವುಗಳ ಹೋಲಿಕೆ  

ತಂದೆಯು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತಮ್ಮ ಪ್ರಿಯ ಪುತ್ರ ಕ್ರಿಸ್ತ ಯೇಸುವಿನ ರಾಜ್ಯದೊಳಗೆ ಸೇರಿಸಿದರು.


ನಾವು ದೇವರ ಮಕ್ಕಳೆಂದೂ ಲೋಕವೆಲ್ಲವು ಕೆಡುಕನ ನಿಯಂತ್ರಣದಲ್ಲಿ ಇದೆ ಎಂದೂ ನಮಗೆ ಗೊತ್ತಿದೆ.


ಐದನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಮೃಗದ ಸಿಂಹಾಸನದ ಮೇಲೆ ಸುರಿಯಲು, ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು,


ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.


ಹೀಬ್ರೂ ಭಾಷೆಯಲ್ಲಿ, ಅಬದ್ದೋನ್ ಎಂದೂ ಗ್ರೀಕ್ ಭಾಷೆಯಲ್ಲಿ, ಅಪೊಲ್ಲುವೋನ್ ಎಂಬ ಹೆಸರಿನ ಪಾತಾಳ ಲೋಕದ ದೂತನು ಅವರ ಅರಸನು.


ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು.


ಇಹಲೋಕಾಧಿಪತಿಗೆ ನ್ಯಾಯತೀರ್ಪಾದ ಕಾರಣದಿಂದ ನ್ಯಾಯತೀರ್ಪಿನ ವಿಷಯವಾಗಿಯೂ ಮನವರಿಕೆ ಮಾಡುವರು.


ಇನ್ನು ಮೇಲೆ ನಾನು ನಿಮ್ಮೊಂದಿಗೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕದ ಅಧಿಪತಿಯು ಬರಲಿದ್ದಾನೆ. ನನ್ನಲ್ಲಿ ಅವನಿಗೆ ಸೇರಿದ್ದು ಒಂದೂ ಇರುವುದಿಲ್ಲ.


ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಇಹಲೋಕದ ಅಧಿಪತಿಯನ್ನು ಈಗ ಹೊರಗೆ ಹಾಕಲಾಗುವುದು.


ಯೇಸು ಅವನಿಗೆ, “ಸೈತಾನನೇ, ತೊಲಗು. ಏಕೆಂದರೆ, ‘ನಿನ್ನ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.


ಆದರೆ ಫರಿಸಾಯರು, “ದೆವ್ವಗಳ ಅಧಿಪತಿಯಿಂದಲೇ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು.


ಯಾರಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ, ಕೆಡುಕನು ಬಂದು ಅವರ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದುಹಾಕುತ್ತಾನೆ, ಇದೇ ದಾರಿಯ ಪಕ್ಕದಲ್ಲಿ ಬಿತ್ತಲಾಗಿರುವ ಬೀಜವಾಗಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು