Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:31 - ಕನ್ನಡ ಸಮಕಾಲಿಕ ಅನುವಾದ

31 ಆದಕಾರಣ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಕ್ಕೂ ದೂಷಣೆಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮರಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದಕ್ಕೆ ಕ್ಷಮಾಪಣೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದಕಾರಣ ನಿಮಗೆ ಹೇಳುತ್ತೇನೆ ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವುದು. ಆದರೆ ಪವಿತ್ರಾತ್ಮನಿಗೆ ವಿರುದ್ಧವಾಗಿ ನುಡಿಯುವ ದೂಷಣೆಗೆ ಕ್ಷಮಾಪಣೆಯಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 “ಮಾನವರು ಮಾಡುವ ಪ್ರತಿಯೊಂದು ಪಾಪಕ್ಕೂ ಆಡುವ ದೇವದೂಷಣೆಗೂ ಕ್ಷಮೆ ಉಂಟು. ಆದರೆ ಪವಿತ್ರಾತ್ಮನ ವಿರುದ್ಧ ಆಡುವ ದೂಷಣೆಗೆ ಕ್ಷಮೆಯೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದಕಾರಣ ನಿಮಗೆ ಹೇಳುತ್ತೇನೆ, ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವದು; ಆದರೆ ಪವಿತ್ರಾತ್ಮ ದೂಷಣೆಗೆ ಕ್ಷಮಾಪಣೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಜನರು ಮಾಡುವ ಪ್ರತಿಯೊಂದು ಪಾಪಕ್ಕೂ ಹೇಳುವ ಪ್ರತಿಯೊಂದು ದೂಷಣೆ ಮಾತಿಗೂ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮ ದೂಷಣೆಗೆ ಕ್ಷಮಾಪಣೆ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತಸೆಮನುನ್ ಮಿಯಾ ತುಮ್ಕಾ ಸಾಂಗ್ತಾ, ಕೊನ್ಬಿ ಬುರ್ಶೆ ಬೊಲ್ಲ್ಯಾರ್ ನಾಹೊಲ್ಯಾರ್ ಪಾಪಾ ಕರಲ್ಲ್ಯಾಕ್ನಿ ಮಾಪಿ ಗಾವ್ತಾ, ಖರೆ ಪವಿತ್ರ್ ಆತ್ಮ್ಯಾಚ್ಯಾ ವಿರೊದ್ ಬುರ್ಶೆ ಬೊಲ್ತಾ ತೆಕಾ ಕನ್ನಾಚ್ ಮಾಪಿ ಗಾವಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:31
15 ತಿಳಿವುಗಳ ಹೋಲಿಕೆ  

ಮನುಷ್ಯಪುತ್ರನಾದ ನನಗೆ ವಿರೋಧವಾಗಿ ಮಾತನಾಡುವ ಪ್ರತಿಯೊಬ್ಬರಿಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮರಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದಕ್ಕೆ ಕ್ಷಮಾಪಣೆಯಿಲ್ಲ.


ಯಾವನು ದೇವಪುತ್ರರನ್ನೇ ತುಳಿದು ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಪವಿತ್ರಾತ್ಮ ದೇವರನ್ನು ತಿರಸ್ಕಾರ ಮಾಡಿದ್ದಾನೋ, ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗುವನೆಂಬುದನ್ನು ಯೋಚಿಸಿರಿ.


ಏಕೆಂದರೆ, ನಾವು ಸತ್ಯದ ಅರಿವನ್ನು ಹೊಂದಿದ ಮೇಲೆ ಬೇಕೆಂದು ಪಾಪ ಮಾಡುತ್ತಾ ಇದ್ದರೆ, ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.


“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!


ಮರಣಕರವಲ್ಲದ ಪಾಪವನ್ನು ಮಾಡುವ ಸಹೋದರ ಅಥವಾ ಸಹೋದರಿಯನ್ನು ಯಾರಾದರೂ ಕಂಡರೆ, ಆ ಸಹೋದರ ಅಥವಾ ಸಹೋದರಿಯರಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಅವರಿಗೆ ಜೀವವನ್ನು ದಯಪಾಲಿಸುವರು. ಮರಣಕರವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಆದರೆ ಮರಣಕರವಾದ ಪಾಪವೂ ಉಂಟು. ಈ ಮರಣಕರವಾದ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.


ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.


ಒಂದು ಸಾರಿ ಬೆಳಕನ್ನು ಪಡೆದು, ಪರಲೋಕದ ವರವನ್ನು ರುಚಿ ನೋಡಿ, ಪವಿತ್ರಾತ್ಮ ದೇವರ ಪಾಲನ್ನು ಹೊಂದಿ,


ದುಷ್ಟನು ತನ್ನ ದುರ್ಮಾರ್ಗವನ್ನೂ, ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು, ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು. ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.


ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’


“ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಹಿಮದಂತೆ ಬೆಳ್ಳಗಾಗುವುವು. ರಕ್ತದಂತೆ ಕಡುಕೆಂಪಾಗಿದ್ದರೂ ಉಣ್ಣೆಯಂತೆ ಆಗುವುವು.


ಯೆಹೋವ ದೇವರ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು. ಸಭೆಯವರೆಲ್ಲರೂ ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ಸ್ವದೇಶೀಯನಾಗಿರಲಿ, ಪರಕೀಯನಾಗಿರಲಿ ಯೆಹೋವ ದೇವರ ಹೆಸರನ್ನು ದೂಷಣೆ ಮಾಡಿದಾಗ, ಅವನನ್ನು ಮರಣ ಶಿಕ್ಷೆಗೆ ಒಳಪಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು