Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:36 - ಕನ್ನಡ ಸಮಕಾಲಿಕ ಅನುವಾದ

36 ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಜನರು ತಾವಾಡುವ ಪ್ರತಿಯೊಂದು ಜೊಳ್ಳುಮಾತಿಗೂ ತೀರ್ಪಿನ ದಿನ ಲೆಕ್ಕಕೊಡಬೇಕಾಗುವುದು ಎಂಬುದು ನಿಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಇದಲ್ಲದೆ ನಾನು ನಿಮಗೆ ಹೇಳುವದೇನಂದರೆ ಮನುಷ್ಯರು ಸುಮ್ಮನೆ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿ ನ್ಯಾಯವಿಚಾರಣೆಯ ದಿನದಲ್ಲಿ ಉತ್ತರಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಜನರು ನಿರ್ಲಕ್ಷ್ಯಭಾವದಿಂದ ಆಡಿದ ಪ್ರತಿಯೊಂದು ಮಾತಿಗೂ ನ್ಯಾಯವಿಚಾರಣೆಯ ದಿನದಲ್ಲಿ ಉತ್ತರ ಕೊಡಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 “ತುಮ್ಕಾ ಯಾದ್ ರ್‍ಹಂವ್ದಿತ್, ಝಡ್ತಿಚ್ಯಾ ದಿಸಿ ಸಗ್ಳೆ ಜಾನಾ ಉಪೆಗಾಕ್ ಪಡಿನಸಲ್ಲ್ಯಾ ಗೊಸ್ಟಿಯಾ ಬೊಲಲ್ಲ್ಯಾಚೊ ಲೆಕ್ಕ್ ದಿತಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:36
10 ತಿಳಿವುಗಳ ಹೋಲಿಕೆ  

ಏಕೆಂದರೆ ಒಳ್ಳೆಯದಾಗಿರಲಿ, ಕೆಟ್ಟದ್ದಾಗಿರಲಿ, ದೇವರು ಆ ಎಲ್ಲಾ ಕಾರ್ಯಗಳನ್ನೂ ಪ್ರತಿಯೊಂದು ರಹಸ್ಯವನ್ನೂ ನ್ಯಾಯವಿಚಾರಣೆಗೆ ತರುವರು.


ನಾನು ಸಾರುವ ಸುವಾರ್ತೆಯ ಪ್ರಕಾರ ದೇವರು ಕ್ರಿಸ್ತ ಯೇಸುವಿನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ವಿಚಾರಿಸುವ ದಿನದಲ್ಲಿ ಇವೆಲ್ಲಾ ಸಂಭವಿಸುವುದು.


ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ನ್ಯಾಯತೀರ್ಪಿನ ದಿನದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಗತಿಯು ಆ ಪಟ್ಟಣಕ್ಕಿಂತ ಹೆಚ್ಚು ತಾಳುವಂಥದ್ದಾಗಿರುವುದು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.


ಆದರೂ ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ಟೈರ್ ಮತ್ತು ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ತಾಳಬಹುದಾಗಿರುವುದು.


ನೀನು ನಿನ್ನ ಮಾತುಗಳಿಂದಲೇ ನೀತಿವಂತನೆಂದು ನಿರ್ಣಯಿಸಲಾಗುವುದು ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ನಿರ್ಣಯಿಸಲಾಗುವುದು,” ಎಂದು ಹೇಳಿದರು.


ಹೀಗಿರುವಾಗ ನಮ್ಮಲ್ಲಿ ಪ್ರತಿಯೊಬ್ಬರೂ ತಮ್ಮ ಬಗ್ಗೆ ದೇವರಿಗೆ ಲೆಕ್ಕ ಒಪ್ಪಿಸಬೇಕು.


ನಮ್ಮ ದೇಹದ ಅಂಗಗಳಲ್ಲಿ ನಾಲಿಗೆಯು ಸಹ ಬೆಂಕಿಯೂ ದುಷ್ಟ ಲೋಕವೂ ಆಗಿದೆ. ಹೀಗೆ ನಾಲಿಗೆಯು ನಮ್ಮ ಅಂಗಗಳಲ್ಲಿ ಇದ್ದು, ಇಡೀ ದೇಹವನ್ನೆಲ್ಲಾ ಮಲಿನಗೊಳಿಸುತ್ತದೆ. ಅದು ನರಕದ ಬೆಂಕಿಯಿಂದ ಹೊತ್ತಿಕೊಂಡು, ಮಾನವರ ಇಡೀ ಜೀವನಕ್ಕೆ ಬೆಂಕಿ ಹಚ್ಚುವದಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು