Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:40 - ಕನ್ನಡ ಸಮಕಾಲಿಕ ಅನುವಾದ

40 ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ದೊಡ್ಡ ಮೀನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಪುತ್ರನಾದ ನಾನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭದಲ್ಲಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿ ಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿ ಹಗಲು ಭೂಗರ್ಭದೊಳಗೆ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಯೋನನು ಮೂರುದಿನ ಹಗಲು ರಾತ್ರಿ ದೊಡ್ಡ ಮೀನಿನ ಉದರದಲ್ಲಿದ್ದನು. ಅದರಂತೆಯೇ ನರಪುತ್ರನು ಮೂರುದಿನ ಹಗಲು ರಾತ್ರಿ ಭೂಗರ್ಭದಲ್ಲಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿಹಗಲು ಭೂಗರ್ಭದೊಳಗೆ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಪ್ರವಾದಿಯಾದ ಯೋನನು ಮೂರು ದಿವಸ ಹಗಲಿರುಳು ಒಂದು ದೊಡ್ಡ ಮೀನಿನ ಹೊಟ್ಟೆಯಲ್ಲಿ ಹೇಗಿದ್ದನೋ ಅದೇ ರೀತಿಯಲ್ಲಿ ಮನುಷ್ಯಕುಮಾರನು ಸಮಾಧಿಯಲ್ಲಿ ಮೂರು ದಿನ ಹಗಲಿರುಳು ಇರುವನು. ಇದಲ್ಲದೆ ಬೇರೆ ಯಾವ ಸೂಚಕಕಾರ್ಯವನ್ನು ಅವರಿಗೆ ತೋರಿಸಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಜೊನಾ ತಿನ್ ದಿಸ್ ಅನಿ ತಿನ್ ರಾತ್ ಕಶೆ ಮಾಸೊಳಿಚ್ಯಾ ಪೊಟಾತ್ ರ್‍ಹಾಲೊ, ತಸೆಚ್ ಮಾನ್ಸಾಚೊ ಲೆಕ್‍ಬಿ ತಿನ್ ದಿಸ್ ಅನಿ ತಿನ್ ರಾತ್ ಜಿಮ್ನಿಚ್ಯಾ ಭುತ್ತುರ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:40
12 ತಿಳಿವುಗಳ ಹೋಲಿಕೆ  

ಆದರೆ ಯೆಹೋವ ದೇವರು ಯೋನನನ್ನು ನುಂಗುವಂತೆ ದೊಡ್ಡ ಮೀನನ್ನು ಸಿದ್ಧಮಾಡಿದ್ದರು. ಯೋನನು ಆ ಮೀನಿನ ಹೊಟ್ಟೆಯಲ್ಲಿ ಮೂರು ಹಗಲು ಮತ್ತು ಮೂರು ರಾತ್ರಿ ಇದ್ದನು.


ಅದಕ್ಕೆ ಯೇಸು ಅವರಿಗೆ, “ಈ ದೇವಾಲಯವನ್ನು ಕೆಡವಿರಿ. ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು,” ಎಂದು ಉತ್ತರಕೊಟ್ಟರು.


ಅವರು ನನ್ನನ್ನು ಕೊಲ್ಲುವರು, ಆದರೆ ಮೂರನೆಯ ದಿನದಲ್ಲಿ ನಾನು ತಿರುಗಿ ಜೀವಿತನಾಗಿ ಎದ್ದು ಬರುವೆನು,” ಎಂದು ಹೇಳಿದರು. ಅದಕ್ಕೆ ಶಿಷ್ಯರು ಬಹಳ ದುಃಖಪಟ್ಟರು.


“ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ, ನೀನು ದೇವಪುತ್ರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ,” ಎಂದರು.


ತಾವು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ಬಹು ಕಷ್ಟಗಳನ್ನು ಅನುಭವಿಸಿ ಕೊಲೆಗೀಡಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದು ಬರುವುದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತಮ್ಮ ಶಿಷ್ಯರಿಗೆ ತಿಳಿಸಲಾರಂಭಿಸಿದರು.


ನನ್ನ ಪ್ರಾಣಕ್ಕೆ ಕೇಡು ಬಯಸುವವರು ತಾವೇ ನಾಶವಾಗುವರು ಅವರು ಭೂಮಿಯ ಆಳಕ್ಕೆ ಹೋಗುವರು.


ಅದಕ್ಕೆ ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ, ಆದರೆ ಮನುಷ್ಯಪುತ್ರನಾದ ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ,” ಎಂದರು.


ಇದಲ್ಲದೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಗತ್‌ಹೇಫೆರಿನ ಪ್ರವಾದಿಯಾದ ಅಮಿತ್ತೈಯನ ಮಗ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದಂತೆ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಅರಾಬಾ ತಗ್ಗಿನ ಸಮುದ್ರದವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರುಗಿ ತೆಗೆದುಕೊಂಡನು.


ಏಕೆಂದರೆ ಮನುಷ್ಯಪುತ್ರನಾದ ನಾನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದೇನೆ,” ಎಂದು ಹೇಳಿದರು.


ಅವರು ಇಲ್ಲಿ ಇಲ್ಲ. ಅವರು ಹೇಳಿದಂತೆಯೇ ಜೀವಂತರಾಗಿ ಎದ್ದಿದ್ದಾರೆ. ಕರ್ತನನ್ನು ಇಟ್ಟಿದ್ದ ಸ್ಥಳವನ್ನು ಬಂದು ನೋಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು