Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:41 - ಕನ್ನಡ ಸಮಕಾಲಿಕ ಅನುವಾದ

41 ನಿನೆವೆ ಪಟ್ಟಣದವರು ನ್ಯಾಯತೀರ್ಪಿನಲ್ಲಿ ಈ ಸಂತತಿಗೆ ಎದುರಾಗಿ ಎದ್ದು ನಿಂತು ಇದನ್ನು ಅಪರಾಧ ಎಂದು ತೀರ್ಪುಮಾಡುವರು, ಏಕೆಂದರೆ ಯೋನನು ಸಾರಿದ್ದನ್ನು ಕೇಳಿ ಅವರು ದೇವರ ಕಡೆಗೆ ತಿರುಗಿಕೊಂಡರು; ಇಗೋ, ಇಲ್ಲಿ ಯೋನನಿಗಿಂತಲೂ ತುಂಬಾ ದೊಡ್ಡವನು ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ನಿನೆವೆ ಪಟ್ಟಣದವರು ಯೋನನು ಸಾರಿದ ವಾಕ್ಯವನ್ನು ಕೇಳಿ ಮಾನಸಾಂತರಪಟ್ಟರು. ಇಗೋ, ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ. ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಅವರು ಪಾಪಕ್ಕೆ ವಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ನ್ಯಾಯವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಹೇಳುವರು; ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ದೇವರಕಡೆಗೆ ತಿರುಗಿಕೊಂಡರು; ಆದರೆ ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ನ್ಯಾಯವಿಚಾರಣೆಯ ದಿನದಂದು ನಿನೆವೆ ಪಟ್ಟಣದ ಜನರು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ನಿಂತುಕೊಂಡು ನಿಮ್ಮನ್ನು ಅಪರಾಧಿಗಳೆಂದು ಘೋಷಿಸುವರು. ಏಕೆಂದರೆ ಯೋನನು ಬೋಧಿಸಿದಾಗ ಅವರು ತಮ್ಮ ಜೀವಿತವನ್ನು ಬದಲಾವಣೆ ಮಾಡಿಕೊಂಡರು. ಆದರೆ ನಾನು ನಿಮಗೆ ಹೇಳುವುದೇನೆಂದರೆ ನಾನು ಯೋನನಿಗಿಂತಲೂ ಹೆಚ್ಚಿನವನಾಗಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಝಡ್ತಿಚ್ಯಾ ದಿಸಿ ನಿನಿವೆಚಿ ಲೊಕಾ ಇಬೆ ರ್‍ಹಾವ್ನ್ ಹಿ ಪಿಳ್ಗಿ ಚುಕಿದಾರ್ ಮನುನ್ ದಾಕ್ವುನ್ ದಿತ್ಯಾತ್, ಕಶ್ಯಾಕ್ ಮಟ್ಲ್ಯಾರ್, ಜೊನಾನ್ ಸಾಂಗಟಲ್ಲೆ ತೆನಿ ಆಯಿಕ್ಲ್ಯಾನಿ, ಅನಿ ಪಾಪಾನಿತ್ನಾ ದೆವಾಕ್ಡೆ ಪರತ್ಲ್ಯಾನಿ, ಖರೆ ಮಿಯಾ ತುಮ್ಕಾ ಸಾಂಗ್ತಾ, ಹಿತ್ತೆ ಜೊನಾಚ್ಯಾನ್ಕಿ ಮೊಟೊ ಹಾಯ್!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:41
20 ತಿಳಿವುಗಳ ಹೋಲಿಕೆ  

ನ್ಯಾಯತೀರ್ಪಿನಲ್ಲಿ ದಕ್ಷಿಣದ ರಾಣಿಯು ಈ ಸಂತತಿಗೆ ಎದುರಾಗಿ ಎದ್ದು ಇವರನ್ನು ಅಪರಾಧಿಗಳೆಂದು ತೀರ್ಪುಮಾಡುವಳು. ಏಕೆಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕಾಗಿ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತಲೂ ತುಂಬಾ ದೊಡ್ಡವನು ಇಲ್ಲಿದ್ದಾನೆ.


ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಕೆ ಪಡೆದು ಭಕ್ತಿಯಲ್ಲಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧಮಾಡಿದನು. ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಗೆ ಅನುಸಾರವಾಗಿ ನಂಬಿಕೆಯಿಂದ ಬರುವ ನೀತಿಗೆ ಬಾಧ್ಯನಾದನು.


ಅವನು ಶಾರೀರಿಕವಾಗಿ ಸುನ್ನತಿಯಿಲ್ಲದವನಾಗಿದ್ದರೂ ನಿಯಮವನ್ನು ಅನುಸರಿಸುವುದರಿಂದ ಲಿಖಿತ ನಿಯಮವೂ ಸುನ್ನತಿಯೂ ಇದ್ದು ನಿಯಮವನ್ನು ಮೀರಿ ನಡೆಯುವ ನಿನ್ನನ್ನು ದೋಷಿಯೆಂದು ತೀರ್ಪು ಮಾಡುವನಲ್ಲವೇ?


“ಮೇಲಿನಿಂದ ಬರುವವರೇ ಎಲ್ಲರಿಗಿಂತಲೂ ಮೇಲಾದವರು, ಭೂಲೋಕದವನಾದರೋ ಭೂಮಿಗೆ ಸೇರಿದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವವರು ಎಲ್ಲವುಗಳಿಗಿಂತಲೂ ಮೇಲಾದವರು.


ದೇವಾಲಯಕ್ಕಿಂತಲೂ ದೊಡ್ಡವನು ಇಲ್ಲಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ.


“ನೀನು ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಪ್ರಸಂಗಿಸು, ಏಕೆಂದರೆ ಅವರ ಕೆಟ್ಟತನವು ನನ್ನ ಮುಂದೆ ಏರಿ ಬಂದಿದೆ,” ಎಂಬುದು.


ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲ್, ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ.


ಯಾಕೋಬನ ಮಕ್ಕಳು ಮತ್ತು ಪಶುಗಳು ಈ ಬಾವಿಯ ನೀರನ್ನು ಕುಡಿದರು. ಅದನ್ನು ನಮಗೆ ಕೊಟ್ಟ ನಮ್ಮ ತಂದೆ ಯಾಕೋಬನಿಗಿಂತ ನೀನು ದೊಡ್ಡವನೋ?” ಎಂದಳು.


ನಿನೆವೆ ಪಟ್ಟಣದವರು ನ್ಯಾಯತೀರ್ಪಿನಲ್ಲಿ ಈ ಸಂತತಿಗೆ ಎದುರಾಗಿ ಎದ್ದು ಇದನ್ನು ಅಪರಾಧ ಎಂದು ತೀರ್ಪುಮಾಡುವರು, ಏಕೆಂದರೆ ಯೋನನು ಸಾರಿದ್ದನ್ನು ಕೇಳಿ ಅವರು ದೇವರ ಕಡೆಗೆ ತಿರುಗಿಕೊಂಡರು; ಇಗೋ, ಇಲ್ಲಿ ಯೋನನಿಗಿಂತಲೂ ತುಂಬಾ ದೊಡ್ಡವನು ಇದ್ದಾನೆ,” ಎಂದು ಹೇಳಿದರು.


ನಿಮಗೆ ನಿಜವಾಗಿ ಹೇಳುತ್ತೇನೆ: ಇವೆಲ್ಲವೂ ಈ ಸಂತತಿಯವರ ಮೇಲೆ ಬರುವವು.


ಆಗ ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಇನ್ನೂ ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.


ವ್ಯಭಿಚಾರಿಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ, ಆದರೆ ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಸಿಕ್ಕುವುದಿಲ್ಲ,” ಎಂದು ಹೇಳಿ, ಯೇಸು ಅವರನ್ನು ಬಿಟ್ಟು ಹೊರಟು ಹೋದರು.


ಆಗ ಅದು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ಅಶುದ್ಧಾತ್ಮಗಳನ್ನು ತನ್ನೊಂದಿಗೆ ಕರೆದುಕೊಂಡು ಅವನ ಒಳಗೆ ಸೇರಿ ಅಲ್ಲಿ ವಾಸಮಾಡುವವು. ಹೀಗೆ ಆ ಮನುಷ್ಯನ ಕಡೆಯ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು. ಅದರಂತೆಯೇ ಈ ದುಷ್ಟ ಸಂತತಿಗೂ ಆಗುವುದು,” ಎಂದು ಹೇಳಿದರು.


ಯೇಸು ಉತ್ತರವಾಗಿ ಅವರಿಗೆ, “ವ್ಯಭಿಚಾರದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ. ಪ್ರವಾದಿ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಈ ಸಂತತಿಗೆ ಕೊಡಲಾಗುವುದಿಲ್ಲ.


ನಿನಗೆ ವಿರೋಧವಾಗಿ ನಿರ್ಮಿಸಿದ ಆಯುಧಗಳು ಸಫಲವಾಗುವುದಿಲ್ಲ. ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯತೀರ್ಪಿನಲ್ಲಿ ನೀನು ಖಂಡಿಸುವೆ. ಇದೇ ಯೆಹೋವ ದೇವರ ಸೇವಕರ ಬಾಧ್ಯತೆಯು, ಇದು ನನ್ನಿಂದ ಅವರಿಗೆ ದೊರೆಯುವ ಸಮರ್ಥನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆಗ ಯೋನನು ಒಂದು ದಿವಸದ ಪ್ರಯಾಣಮಾಡಿ, ಪಟ್ಟಣದಲ್ಲಿ ಪ್ರವೇಶಿಸಿ, “ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ನಾಶವಾಗುವುದು,” ಎಂದು ಕೂಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು