Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:14 - ಕನ್ನಡ ಸಮಕಾಲಿಕ ಅನುವಾದ

14 ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನೆಂದರೆ, “ ‘ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಅದೇನೆಂದರೆ, ‘ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ. ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪ್ರವಾದಿ ಯೆಶಾಯನ ಈ ಪ್ರವಚನ ಅವರಲ್ಲಿ ಈಡೇರುತ್ತದೆ. ‘ಕೇಳಿ ಕೇಳಿಯೂ ಗ್ರಹಿಸರು ನೋಡಿ ನೋಡಿಯೂ ಕಾಣರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ; ಅದೇನಂದರೆ - ನೀವು ಕಿವಿಯಿದ್ದು ಕೇಳಿದರೂ ತಿಳುಕೊಳ್ಳುವದೇ ಇಲ್ಲ; ಕಣ್ಣಿದ್ದು ನೋಡಿದರೂ ಕಾಣುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇಂಥವರ ಬಗ್ಗೆ ಯೆಶಾಯನು ಹೇಳಿದ್ದೇನೆಂದರೆ: ‘ನೀವು ಆಲಿಸುತ್ತೀರಿ, ಕೇಳುತ್ತೀರಿ, ಆದರೆ ನಿಮಗೆ ಅರ್ಥವಾಗುವುದಿಲ್ಲ. ನೀವು ದೃಷ್ಟಿಸಿ ನೋಡುತ್ತೀರಿ, ಆದರೆ ನಿಮಗೆ ಕಾಣುವುದನ್ನು ಅರ್ಥಮಾಡಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 “ತೆಚೆಸಾಟ್ನಿ ದೆವಾನ್ ಇಸಾಯಿಯಾ ಪ್ರವಾದ್ಯಾಚ್ಯಾ ಮುಕಾಂತ್ರ್ ಸಾಂಗಲ್ಲೆ ಪುರಾ ಹೊತಾ, ಹಿ ಲೊಕಾ ಆಯಿಕ್ತ್ಯಾತ್ ಅನಿ ಆಯಿಕ್ತ್ಯಾತ್, ಖರೆ ತೆಂಕಾ ಕನ್ನಾಚ್ ಕಳಿನಾ; ತೆನಿ ಬಗ್- ಬಗ್ತ್ಯಾತ್ ಖರೆ, ತೆಂಕಾ ದಿಸಿನಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:14
11 ತಿಳಿವುಗಳ ಹೋಲಿಕೆ  

“ಮನುಷ್ಯಪುತ್ರನೇ, ನೀನು ತಿರುಗಿಬೀಳುವ ಮನೆತನದವರ ಮಧ್ಯದಲ್ಲಿ ವಾಸಿಸುತ್ತಿರುವ, ಅವರಿಗೆ ನೋಡುವುದಕ್ಕೆ ಕಣ್ಣುಗಳುಂಟು, ಆದರೆ ನೋಡುವುದಿಲ್ಲ; ಕೇಳುವುದಕ್ಕೆ ಕಿವಿಗಳುಂಟು, ಕೇಳುವುದಿಲ್ಲ. ಅವರು ತಿರುಗಿಬೀಳುವ ಮನೆತನದವರು.


ಆದರೆ ಇಸ್ರಾಯೇಲರ ಬುದ್ಧಿ ಮಂದವಾಯಿತು. ಈ ದಿನದವರೆಗೂ ಹಳೆಯ ಒಡಂಬಡಿಕೆಯು ಓದುವಾಗಲೆಲ್ಲಾ, ಅದೇ ಮುಸುಕು ಅವರಲ್ಲಿ ಇರುತ್ತದೆ. ಅದು ಕ್ರಿಸ್ತ ಯೇಸುವಿನಲ್ಲಿ ಮಾತ್ರವೇ ತೆಗೆಯಲು ಸಾಧ್ಯ. ಆದ್ದರಿಂದ ಅದು ಈಗಲೂ ತೆಗೆದುಹಾಕಲಾಗಿಲ್ಲ.


ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವುದಕ್ಕೆ ನಿಮಗೆ ಅನುಮತಿಸಲಾಗಿದೆ, ಆದರೆ ಉಳಿದವರಿಗೆ, “ ‘ಅವರು ಕಣ್ಣಾರೆ ನೋಡಿದರೂ ಕಾಣದಂತೆಯೂ; ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯಗಳಲ್ಲಿ ಮರೆಯಾಗಿವೆ.’


ಈ ಕಾರಣದಿಂದ, “ ‘ಅವರು ಕಣ್ಣಿದ್ದರೂ ಕಾಣುವುದಿಲ್ಲ. ಕೇಳಿಸಿಕೊಳ್ಳುತ್ತಿದ್ದರೂ ಗ್ರಹಿಸುವುದಿಲ್ಲ. ಹಾಗೆ ಮಾಡುವುದಾದರೆ, ಅವರು ದೇವರ ಕಡೆಗೆ ತಿರುಗಿಕೊಂಡು ಕ್ಷಮೆಹೊಂದುತ್ತಿದ್ದರು!’” ಎಂದರು.


ಆದರೂ ಯೆಹೋವ ದೇವರು ಇಂದಿನವರೆಗೂ ತಿಳಿದುಕೊಳ್ಳುವ ಹೃದಯವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ನಿಮಗೆ ಕೊಡಲಿಲ್ಲವಲ್ಲ!


ಏನೆಂದರೆ, ಓ ಮೂಢ ಬುದ್ಧಿಹೀನ ಜನರೇ, ಕಣ್ಣುಗಳಿದ್ದು ಕಾಣದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.


ಆದರೆ ಇಸ್ರಾಯೇಲರಲ್ಲಿ ಎಲ್ಲರೂ ಸುವಾರ್ತೆಯನ್ನು ಸ್ವೀಕರಿಸಲಿಲ್ಲ. ಏಕೆಂದರೆ, “ಕರ್ತನೇ, ನಮ್ಮ ಸಂದೇಶವನ್ನು ಯಾರು ನಂಬಿದರು?” ಎಂದು ಯೆಶಾಯ ಪ್ರವಾದಿಯು ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು