Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:23 - ಕನ್ನಡ ಸಮಕಾಲಿಕ ಅನುವಾದ

23 ಆದರೆ ಒಳ್ಳೆಯ ಭೂಮಿಯಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿ ಅದನ್ನು ಗ್ರಹಿಸಿಕೊಳ್ಳುತ್ತಾರೆ. ಇವರು ಫಲ ಫಲಿಸುವವರಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇನ್ನೊಬ್ಬನು ವಾಕ್ಯವನ್ನು ಕೇಳುತ್ತಾನೆ, ಗ್ರಹಿಸಿಕೊಳ್ಳುತ್ತಾನೆ; ಫಲಪ್ರದನಾಗಿ ನೂರರಷ್ಟು, ಅರವತ್ತರಷ್ಟು, ಮೂವತ್ತರಷ್ಟು ಫಲಕೊಡುತ್ತಾನೆ. ಇವನು ಹದವಾದ ಭೂಮಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಒಬ್ಬನು ವಾಕ್ಯವನ್ನು ಕೇಳಿ ತಿಳುಕೊಂಡು ಫಲವಂತನಾಗಿ ನೂರರಷ್ಟಾಗಲಿ ಅರುವತ್ತರಷ್ಟಾಗಲಿ ಮೂವತ್ತರಷ್ಟಾಗಲಿ ಫಲವನ್ನು ಕೊಡುತ್ತಾನೆ; ಇವನೇ ಒಳ್ಳೆಯ ನೆಲವಾಗಿರುವವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಒಳ್ಳೆಯ ನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿ ಅದನ್ನು ಅರ್ಥಮಾಡಿಕೊಂಡ ವ್ಯಕ್ತಿಯೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವನು. ಆ ಮನುಷ್ಯನು ಬೆಳೆದು ಕೆಲವು ಸಾರಿ ನೂರರಷ್ಟು ಕೆಲವು ಸಾರಿ ಅರವತ್ತರಷ್ಟು ಮತ್ತು ಕೆಲವು ಸಾರಿ ಮೂವತ್ತರಷ್ಟು ಫಲ ಕೊಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಬರ್‍ಯಾ ಮಾಟಿತ್ ಸಿಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ದೆವಾಚಿ ಬರಿ ಖಬರ್ ಆಯ್ಕುನ್ ಅರ್ತ್‍ ಕರುನ್ ಘೆಟಲ್ಲಿ ಲೊಕಾ. ತೆಂಚ್ಯಾತ್ಲಿ ಉಲ್ಲಿ ಲೊಕಾ, ಸೆಂಬರಾಕ್ ಸೆಂಬರ್ ಫಳ್ ದಿತ್ಯಾತ್, ಉಲ್ಲೆ ಜಾನಾ ಸಾಟ್, ಅನಿ ಉಲ್ಲೆ ಜಾನಾ ತಿಸ್”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:23
43 ತಿಳಿವುಗಳ ಹೋಲಿಕೆ  

ದೇವರ ಮಹಿಮೆ ಹಾಗೂ ಸ್ತೋತ್ರಕ್ಕಾಗಿ ಕ್ರಿಸ್ತ ಯೇಸುವಿನ ಮೂಲಕ ಬರುವ ನೀತಿಯ ಫಲಗಳಿಂದ ತುಂಬಿದವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.


“ಮರವು ಒಳ್ಳೆಯದಾಗಿದ್ದರೆ, ಅದರ ಫಲವು ಒಳ್ಳೆಯದಾಗಿರುವುದು; ಮರವು ಕೆಟ್ಟದ್ದಾಗಿದ್ದರೆ, ಅದರ ಫಲವು ಕೆಟ್ಟದ್ದಾಗಿರುವುದು. ಏಕೆಂದರೆ ಮರವನ್ನು ಅದರ ಫಲದಿಂದಲೇ ಗುರುತಿಸಲಾಗುವುದು.


ಆದರೆ ಕೆಲವು ಬೀಜಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು, ಒಂದು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು ಇನ್ನು ಕೆಲವು ಮೂವತ್ತರಷ್ಟು ಫಲಕೊಟ್ಟವು.


ಆ ಸುವಾರ್ತೆಯು ಲೋಕದಲ್ಲೆಲ್ಲಾ ಹರಡಿದಂತೆ, ನಿಮಗೂ ತಲುಪಲು ನೀವು ಸಹ ಅದನ್ನು ಕೇಳಿ ದೇವರ ಕೃಪೆಯನ್ನು ನಿಜವಾಗಿಯೂ ತಿಳಿದುಕೊಂಡ ದಿವಸದಿಂದ ನಿಮ್ಮಲ್ಲಿಯೂ ಫಲಕೊಟ್ಟು ವೃದ್ಧಿಯಾಗುತ್ತಿದೆ.


ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ.


ಮುಂದಿನ ವರ್ಷ ಇದು ಫಲ ಫಲಿಸಿದರೆ, ಸರಿ! ಇಲ್ಲವಾದರೆ, ನೀನು ಇದನ್ನು ಕಡಿದುಹಾಕು, ಎಂದನು.’ ”


ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.


ನೀವು ಕೃಪೆಯಲ್ಲಿ ಬೆಳೆಯಿರಿ ಮತ್ತು ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಅವರಿಗೆ ಈಗಲೂ ಸರ್ವಕಾಲವೂ ಮಹಿಮೆ ಇರಲಿ! ಆಮೆನ್.


ಕರ್ತ ಯೇಸುವಿಗೆ ಯೋಗ್ಯರಾಗಿ ಜೀವಿಸಿ ಎಲ್ಲಾ ವಿಧದಲ್ಲಿ ಅವರನ್ನೇ ಮೆಚ್ಚಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯದಲ್ಲಿ ಫಲಕೊಡುತ್ತಾ ದೇವರ ತಿಳುವಳಿಕೆಯಲ್ಲಿ ವೃದ್ಧಿಯಾಗುತ್ತಿರಬೇಕೆಂತಲೂ


ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು: ನಾನು ನನ್ನ ನಿಯಮಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.


ಇಸ್ರಾಯೇಲರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರಿಹೇಳಲಾಯಿತು. ಆದರೆ ಕೇಳಿದವರು ವಿಧೇಯರಾದವರ ನಂಬಿಕೆಯಲ್ಲಿ ಭಾಗವಹಿಸದೇ ಹೋದದ್ದರಿಂದ, ಸಾರಿದ ವಾಕ್ಯವು ಅವರಿಗೆ ಪ್ರಯೋಜನವಾಗಲಿಲ್ಲ.


ಎಲ್ಲಾ ವಿಧವಾದ ದುಷ್ಟತನದ ವಂಚನೆಯಿಂದಲೂ ಕೂಡಿ ನಾಶವಾಗುವವರಲ್ಲಿ ಇದು ಸಂಭವಿಸುವುದು. ಏಕೆಂದರೆ ಅವರು ರಕ್ಷಣೆ ಹೊಂದುವಂತೆ ಸತ್ಯವನ್ನು ಪ್ರೀತಿಸಲು ನಿರಾಕರಿಸಿದ ಕಾರಣದಿಂದ ನಾಶವಾಗಿ ಹೋಗುವರು.


ಪ್ರಿಯರೇ, ನೀವು ಹೇಗೆ ನಡೆದುಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿದಂತೆಯೇ ಜೀವಿಸುತಿರುವಿರಿ. ಇದರಲ್ಲಿ ನೀವು ಹೆಚ್ಚೆಚ್ಚಾಗಿ ಮಾಡಬೇಕೆಂದು ನಾವು ಕಡೆಯದಾಗಿ ನಮಗೆ ಕರ್ತ ಆಗಿರುವ ಯೇಸುವಿನಲ್ಲಿ ನಿಮ್ಮನ್ನು ಪ್ರಬೋಧಿಸುತ್ತೇವೆ ಮತ್ತು ಉತ್ತೇಜಿಸುತ್ತೇವೆ.


ನಾನು ನಿಮ್ಮಿಂದ ದಾನವನ್ನು ನಿರೀಕ್ಷಿಸುವುದಿಲ್ಲ. ಆದರೆ ನಿಮ್ಮ ಲೆಕ್ಕಕ್ಕೆ ಲಾಭ ಹೆಚ್ಚಿಸುವುದನ್ನೇ ನೋಡುತ್ತಿದ್ದೇನೆ.


ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಊಟವನ್ನು ಒದಗಿಸುವ ದೇವರು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು, ಹೆಚ್ಚಿಸಿ ನಿಮ್ಮ ನೀತಿಯ ಸುಗ್ಗಿಯನ್ನು ವೃದ್ಧಿಪಡಿಸುವರು.


ಬೆರೋಯದಲ್ಲಿದ್ದವರು ಥೆಸಲೋನಿಕದವರಿಗಿಂತ ಹೆಚ್ಚು ಸದ್ಗುಣವುಳ್ಳವರು; ಅವರು ವಾಕ್ಯವನ್ನು ಅತ್ಯಾಸಕ್ತಿಯಿಂದ ಸ್ವೀಕರಿಸಿ, ಇವರು ಹೇಳಿದ್ದು ಸರಿಯಾದದ್ದೋ ಏನೋ ಎಂದು ಅವರು ಪ್ರತಿದಿನವೂ ಪವಿತ್ರ ವೇದಗಳನ್ನು ಪರೀಕ್ಷಿಸುತ್ತಿದ್ದರು.


ಅವರಲ್ಲಿ ಒಬ್ಬ ಮಹಿಳೆಯ ಹೆಸರು ಲುದ್ಯ ಎಂದಿತ್ತು. ಆಕೆ ಥುವತೈರ ಊರಿನವಳೂ ಕೆನ್ನೀಲಿ ಬಣ್ಣದ ಬಟ್ಟೆಗಳ ವ್ಯಾಪಾರಿಯೂ ದೇವರನ್ನು ಆರಾಧಿಸುವವಳೂ ಆಗಿದ್ದಳು. ಪೌಲನು ಹೇಳಿದ್ದನ್ನು ಲಕ್ಷ್ಯಕೊಡುವಂತೆ ಕರ್ತ ಯೇಸು ಆಕೆಯ ಹೃದಯವನ್ನು ತೆರೆದರು.


ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲ. ಆದ್ದರಿಂದ ನೀವು ಕಿವಿಗೊಡುವುದಿಲ್ಲ,” ಎಂದು ಹೇಳಿದರು.


ಆದರೆ ಬೀಜ ಬಿದ್ದ ಒಳ್ಳೆಯ ಭೂಮಿಯವರು ಯಾರೆಂದರೆ ಯಥಾರ್ಥವಾದ ಒಳ್ಳೆಯ ಹೃದಯದಿಂದ, ವಾಕ್ಯವನ್ನು ಕೇಳಿ ಅದನ್ನು ಕೈಕೊಂಡು, ತಾಳ್ಮೆಯಿಂದ ಫಲಿಸುವವರೇ,” ಎಂದು ಹೇಳಿದರು.


ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾರಾದರೂ ಚಿಕ್ಕಮಗುವಿನಂತೆ ದೇವರ ರಾಜ್ಯವನ್ನು ಸ್ವೀಕರಿಸದಿದ್ದರೆ, ಅವರು ಅದರೊಳಗೆ ಸೇರುವುದೇ ಇಲ್ಲ,” ಎಂದರು.


ಇನ್ನೂ ಕೆಲವರು ಒಳ್ಳೆಯ ಭೂಮಿಯಲ್ಲಿ ಬಿದ್ದ ಬೀಜದಂತಿದ್ದು, ವಾಕ್ಯವನ್ನು ಕೇಳಿ ಅಂಗೀಕರಿಸಿ, ಮೂವತ್ತರಷ್ಟು, ಅರವತ್ತರಷ್ಟು, ನೂರರಷ್ಟು ಫಲಕೊಡುತ್ತಾರೆ,” ಎಂದರು.


ಮರಗಳ ಬೇರಿಗೆ ಈಗಾಗಲೇ ಕೊಡಲಿ ಬಿದ್ದಿದೆ, ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕಲಾಗುವುದು.


ನಿಮಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮವನ್ನು ನಿಮ್ಮೊಳಗೆ ಇಡುವೆನು. ನಿಮ್ಮೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.


ನೀವು ಮಾಡುವ ದುಷ್ಕೃತ್ಯಗಳನ್ನೆಲ್ಲಾ ನಿಮ್ಮಿಂದ ಎಸೆದುಬಿಡಿರಿ. ಹೊಸ ಹೃದಯವನ್ನೂ, ಹೊಸ ಆತ್ಮವನ್ನೂ ನೀವು ಪಡೆದುಕೊಳ್ಳಿರಿ. ಇಸ್ರಾಯೇಲಿನ ಮನೆತನದವರೇ, ನೀವು ಸಾಯುವುದೇಕೆ?


ಭೂಮಿಯು ತನ್ನ ಮೇಲೆ ಆಗಾಗ್ಗೆ ಬೀಳುವ ಮಳೆಯನ್ನು ಹೀರಿಕೊಂಡು ಅದು ತನ್ನ ಒಡೆಯನಿಗೆ ಯೋಗ್ಯವಾದ ಬೆಳೆಯನ್ನು ಕೊಡುವುದಾದರೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ.


ಉಳಿದ ಬೀಜಗಳು ಒಳ್ಳೆಯ ನೆಲದ ಮೇಲೆ ಬಿದ್ದವು. ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು.” ಇದನ್ನು ಯೇಸು ಹೇಳಿ, “ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ,” ಎಂದು ಒತ್ತಿ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು