Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:33 - ಕನ್ನಡ ಸಮಕಾಲಿಕ ಅನುವಾದ

33 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀಯು ತೆಗೆದುಕೊಂಡು ಹುಳಿಯಿಲ್ಲದ ಸುಮಾರು ಇಪ್ಪತ್ತೇಳು ಕಿಲೋಗ್ರಾಂ ಹಿಟ್ಟಿನಲ್ಲಿ ಕಲಸಿದಾಗ ಆ ಹಿಟ್ಟೆಲ್ಲಾ ಹುಳಿಯಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಯೇಸುಸ್ವಾಮಿ ಮತ್ತೊಂದು ಸಾಮತಿಯನ್ನು ಜನರಿಗೆ ಹೇಳಿದರು: “ಸ್ವರ್ಗಸಾಮ್ರಾಜ್ಯ ಹುದುಗೆಬ್ಬಿಸುವ ಹುಳಿಯನ್ನು ಹೋಲುತ್ತದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು; ಅದೇನಂದರೆ - ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಹೆಂಗಸು ತಕ್ಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಬಳಿಕ ಯೇಸು ಜನರಿಗೆ ಇನ್ನೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯವು ಒಬ್ಬ ಸ್ತ್ರೀ ರೊಟ್ಟಿ ಮಾಡುವುದಕ್ಕೆ ಒಂದು ದೊಡ್ಡ ಬೋಗುಣಿಯ ಹಿಟ್ಟಿಗೆ ಬೆರೆಸಿದ ಹುಳಿಗೆ ಹೋಲಿಕೆಯಾಗಿದೆ. ಆ ಹುಳಿಯು ನಾದಿದ ಹಿಟ್ಟನ್ನೆಲ್ಲಾ ಉಬ್ಬಿಸಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಜೆಜುನ್ ತೆಂಕಾ, ಅನಿಎಕ್ ಕಾನಿ ಸಾಂಗಟ್ಲ್ಯಾನ್: “ಸರ್ಗಾಚೊ ರಾಜ್ ಮಟ್ಲ್ಯಾರ್, ಎಕ್ ಬಾಯ್ಕೊಮನುಸ್ ಸೊಡಾ ಘೆತಾ ಅನಿ ತಿನ್ ಶೆರ್ ಪಿಟ್ಟಾತ್ ಘಾಲುನ್ ಥವ್ತಾ ಅನಿ ತೆ ಪಿಟ್ಟ್ ಸಗ್ಳೆ ಫುಗ್ತಾ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:33
19 ತಿಳಿವುಗಳ ಹೋಲಿಕೆ  

ಸ್ವಲ್ಪ ಹುಳಿಯು ಹಿಟ್ಟನ್ನೆಲ್ಲಾ ಹುಳಿಮಾಡುವುದು.


ಅದು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀಯು ತೆಗೆದುಕೊಂಡು ಹುಳಿಯಿಲ್ಲದ ಸುಮಾರು ಇಪ್ಪತ್ತೇಳು ಕಿಲೋಗ್ರಾಂ ಹಿಟ್ಟಿನಲ್ಲಿ ಕಲಸಿದಾಗ ಆ ಹಿಟ್ಟೆಲ್ಲಾ ಹುಳಿಯಾಯಿತು,” ಎಂದರು.


ನೀತಿವಂತರ ಮಾರ್ಗವು ಮುಂಜಾನೆಯ ಸೂರ್ಯನ ಬೆಳಕಿನಂತೆ ಇದ್ದು, ದಿನದ ಪೂರ್ಣ ಬೆಳಕಿನವರೆಗೂ ಪ್ರಕಾಶಿಸಿ ಹೊಳೆಯುತ್ತಾ ಇರುವುದು.


ನಾವು ಯೆಹೋವ ದೇವರನ್ನು ತಿಳಿದುಕೊಳ್ಳಲು, ಅವರನ್ನು ಹಿಂಬಾಲಿಸಿದರೆ ತಿಳಿದುಕೊಳ್ಳುವೆವು. ಅವರ ಆಗಮನವು ಅರುಣೋದಯದಂತೆ ನಿಶ್ಚಯ. ಅವರು ಮಳೆಯಂತೆಯೂ ಮುಂಗಾರಿನಂತೆಯೂ, ಭೂಮಿಯನ್ನು ತಂಪು ಮಾಡುವ ಹಿಂಗಾರಿನಂತೆಯೂ ಬಳಿಗೆ ಬರುವರು.


ಆದರೆ ನೀತಿವಂತನು ತನ್ನ ಮಾರ್ಗದಲ್ಲಿ ಮುಂದುವರಿಯುವನು; ಶುದ್ಧ ಕೈಗಳುಳ್ಳವರು ಬಲದಲ್ಲಿ ಬೆಳೆಯುತ್ತಾ ಇರುವರು.


ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ, “ಬೇಗನೇ ಮೂರು ಸೇರು ನಯವಾದ ಹಿಟ್ಟು ನಾದಿ, ಒಲೆಯ ಮೇಲೆ ರೊಟ್ಟಿಗಳನ್ನು ಮಾಡು,” ಎಂದನು.


ನೀವು ಕೃಪೆಯಲ್ಲಿ ಬೆಳೆಯಿರಿ ಮತ್ತು ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಅವರಿಗೆ ಈಗಲೂ ಸರ್ವಕಾಲವೂ ಮಹಿಮೆ ಇರಲಿ! ಆಮೆನ್.


ನಿಮ್ಮ ಪ್ರೀತಿಯು ಹೆಚ್ಚುತ್ತಾ ಜ್ಞಾನದಲ್ಲಿಯೂ ಒಳನೋಟದಲ್ಲಿಯೂ ಬಹು ಹೆಚ್ಚಾಗಿ ಸಮೃದ್ಧಿಯಾಗಲಿ.


ಒಳ್ಳೆಯ ಕೆಲಸಗಳನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಕ್ರಿಸ್ತ ಯೇಸುವಿನ ಪುನರಾಗಮನ ದಿನದವರೆಗೆ ಪೂರೈಸುವರು ಎಂಬುದೇ ನನ್ನ ದೃಢ ವಿಶ್ವಾಸವಾಗಿದೆ.


ನನ್ನಲ್ಲಿದ್ದು ಫಲವನ್ನು ಕೊಡದ ಪ್ರತಿಯೊಂದು ಕವಲುಬಳ್ಳಿಯನ್ನು ತಂದೆ ಮೇಲಕ್ಕೆ ಎತ್ತಿಡುವರು. ಆದರೆ ಫಲಕೊಡುವ ಪ್ರತಿಯೊಂದು ಕವಲುಬಳ್ಳಿಯು ಹೆಚ್ಚು ಫಲಕೊಡುವಂತೆ ಅದನ್ನು ಕತ್ತರಿಸಿ ಶುದ್ಧ ಮಾಡುತ್ತಾರೆ.


“ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾರೂ ತಪ್ಪಿಹೋಗುವುದಿಲ್ಲ. ಆದರೆ ತಾನು ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾರೆ.


ಯೇಸು ಮತ್ತೊಂದು ಸಾಮ್ಯವನ್ನು ಹೇಳಿದರು: “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.


ಆಗ ಗಿದ್ಯೋನನು ಒಳಗೆ ಹೋಗಿ, ಒಂದು ಮೇಕೆಯ ಮರಿಯನ್ನೂ, ಹದಿನಾರು ಕಿಲೋಗ್ರಾಂ ಹಿಟ್ಟಿನಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ಸಿದ್ಧಮಾಡಿ, ಮಾಂಸವನ್ನು ಪುಟ್ಟಿಯಲ್ಲಿ ಇಟ್ಟು, ರಸವನ್ನು ಪಾತ್ರೆಯಲ್ಲಿ ಹೊಯ್ದು, ಅದನ್ನು ಹೊರಗೆ ಏಲಾ ಮರದ ಕೆಳಗೆ ಇದ್ದ ಅವರ ಬಳಿಯಲ್ಲಿ ತಂದಿಟ್ಟನು.


ಅವನು ಎದೆಹಾಲು ಕುಡಿಯುವುದನ್ನು ಬಿಟ್ಟ ತರುವಾಯ, ಅವನನ್ನು ತನ್ನ ಸಂಗಡ ತೆಗೆದುಕೊಂಡು, ಮೂರು ವರ್ಷದ ಹೋರಿಯೊಂದನ್ನೂ, ಸುಮಾರು ಹದಿನಾರು ಕಿಲೋಗ್ರಾಂ ಹಿಟ್ಟನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಯೆಹೋವ ದೇವರ ಮನೆಗೆ ಹೋದಳು.


ಅಮ್ನೋನನು ಅದೇ ಪ್ರಕಾರ ರೋಗಿಷ್ಟನ ಹಾಗೆ ಮಲಗಿಕೊಂಡನು. ಅರಸನು ತನ್ನನ್ನು ನೋಡುವುದಕ್ಕೆ ಬಂದಾಗ ಅಮ್ನೋನನು ಅರಸನಿಗೆ, “ನೀವು ನನ್ನ ಸಹೋದರಿ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣು ಮುಂದೆ ಎರಡು ಭಕ್ಷ್ಯಗಳನ್ನು ಮಾಡುವುದಕ್ಕೆ ಬರಲಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು