Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:36 - ಕನ್ನಡ ಸಮಕಾಲಿಕ ಅನುವಾದ

36 ತರುವಾಯ ಯೇಸು ಜನಸಮೂಹವನ್ನು ಕಳುಹಿಸಿಬಿಟ್ಟು ಮನೆಯೊಳಕ್ಕೆ ಹೋದರು. ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ಹೊಲದಲ್ಲಿರುವ ಕಳೆಯ ಸಾಮ್ಯವನ್ನು ನಮಗೆ ವಿವರಿಸಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು. ಆಗ ಆತನ ಶಿಷ್ಯರು ಆತನ ಬಳಿಗೆ ಬಂದು, ಹೊಲದ ಕಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಯೇಸುಸ್ವಾಮಿ ಜನರನ್ನು ಬೀಳ್ಕೊಟ್ಟು ಮನೆಗೆ ಬಂದರು. ಶಿಷ್ಯರು ಅವರ ಬಳಿಗೆ ಬಂದು, “ಹೊಲದಲ್ಲಿ ಬಿತ್ತಲಾದ ಕಳೆಗಳ ಸಾಮತಿಯನ್ನು ನಮಗೆ ವಿವರಿಸಿರಿ,” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆಗ ಯೇಸು ಜನರನ್ನು ಬಿಟ್ಟು ಮನೆಗೆ ಹೋದ ಮೇಲೆ ಆತನ ಶಿಷ್ಯರು ಬಂದು - ಹೊಲದಲ್ಲಿಯ ಹಣಜಿಯ ಸಾಮ್ಯದ ಅರ್ಥವನ್ನು ನಮಗೆ ಹೇಳು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ನಂತರ ಯೇಸು ಜನರನ್ನು ಬಿಟ್ಟು ಮನೆಯೊಳಕ್ಕೆ ಹೋದನು. ಆತನ ಶಿಷ್ಯರು ಆತನ ಬಳಿಗೆ ಬಂದು, “ಹೊಲದಲ್ಲಿರುವ ಹಣಜಿಯನ್ನು ಕುರಿತಾದ ಸಾಮ್ಯದ ಅರ್ಥವನ್ನು ನಮಗೆ ವಿವರಿಸು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಜೆಜು ಲೊಕಾಂಚ್ಯಾ ತಾಂಡ್ಯಾಕ್ ಸೊಡುನ್ ಭುತ್ತುರ್ ಘರಾತ್ ಗೆಲೊ. ತನ್ನಾ ತೆಚಿ ಶಿಸಾ ತೆಚೆಕ್ಡೆ ಯೆಲಿ. ಅನಿ,“ಶೆತಾತ್ಲ್ಯಾ ಕಳ್ಯಾಂಚ್ಯಾ ಕಾನಿಚೊ ಅರ್ತ್‍ ಅಮ್ಕಾ ಸಾಂಗ್.” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:36
13 ತಿಳಿವುಗಳ ಹೋಲಿಕೆ  

ಊಟಮಾಡಿದವರು ಸುಮಾರು ನಾಲ್ಕು ಸಾವಿರ ಮಂದಿ. ಯೇಸು ಅವರನ್ನು ಕಳುಹಿಸಿದ ನಂತರ,


ಆಮೇಲೆ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಪ್ರವೇಶಿಸಿದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, ಆ ಸಾಮ್ಯದ ವಿಷಯವಾಗಿ ಪ್ರಶ್ನಿಸಿದರು.


ಇದಾದ ಕೂಡಲೇ ಯೇಸು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ತಮ್ಮ ಶಿಷ್ಯರು ದೋಣಿಯನ್ನು ಹತ್ತಿ ತಮಗಿಂತ ಮುಂದಾಗಿ ಬೇತ್ಸಾಯಿದಕ್ಕೆ ಹೋಗಬೇಕೆಂದು ಆಜ್ಞಾಪಿಸಿದರು.


ಯೇಸು ಅದಕ್ಕೆ ಉತ್ತರವಾಗಿ ಹೇಳಿದ್ದು: “ಪರಲೋಕ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವ ಜ್ಞಾನವು ನಿಮಗೆ ಕೊಡಲಾಗಿದೆ, ಆದರೆ ಅವರಿಗಲ್ಲ.


ಅದೇ ದಿನದಲ್ಲಿ ಯೇಸು ಮನೆಯಿಂದ ಹೊರಟುಹೋಗಿ ಸರೋವರದ ಬಳಿಯಲ್ಲಿ ಕುಳಿತುಕೊಂಡರು.


ಯೇಸು ಮನೆಗೆ ಬಂದಾಗ, ಆ ಕುರುಡರು ಅವರ ಬಳಿಗೆ ಬಂದರು. ಆಗ ಯೇಸು ಅವರಿಗೆ, “ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ?” ಎಂದು ಕೇಳಿದರು. ಅದಕ್ಕವರು ಯೇಸುವಿಗೆ, “ಹೌದು ಕರ್ತನೆ,” ಎಂದರು.


ತರುವಾಯ ಯೇಸು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗದಾನ್ ಊರಿಗೆ ಬಂದರು.


ಇದಾದ ಕೂಡಲೇ ಯೇಸು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ತಮ್ಮ ಶಿಷ್ಯರು ದೋಣಿಯನ್ನು ಹತ್ತಿ ತಮಗಿಂತ ಮುಂದಾಗಿ ಆಚೆದಡಕ್ಕೆ ಹೋಗಬೇಕೆಂದು ಆಜ್ಞಾಪಿಸಿದರು.


ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ. ಆದರೆ ಯೇಸು ತಮ್ಮ ಶಿಷ್ಯರೊಡನೆ ಏಕಾಂತವಾಗಿದ್ದಾಗ ಮಾತ್ರ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.


“ಆದ್ದರಿಂದ ಬಿತ್ತುವವನ ಸಾಮ್ಯದ ಅರ್ಥವನ್ನು ನೀವು ಕೇಳಿರಿ:


ಆದರೆ ಜನರು ನಿದ್ರಿಸುತ್ತಿರುವಾಗ, ಅವನ ವೈರಿಯು ಬಂದು ಗೋಧಿಯ ನಡುವೆ ಕಳೆಯನ್ನು ಬಿತ್ತಿ ಹೊರಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು