Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:51 - ಕನ್ನಡ ಸಮಕಾಲಿಕ ಅನುವಾದ

51 ಯೇಸು ಶಿಷ್ಯರಿಗೆ, “ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ?” ಎಂದು ಕೇಳಿದರು. ಅದಕ್ಕೆ, ಅವರು ಯೇಸುವಿಗೆ, “ಹೌದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 “ಈ ಎಲ್ಲಾ ಸಂಗತಿಗಳು ನಿಮಗೆ ಅರ್ಥವಾಯಿತೋ” ಎಂದು ಕೇಳಲು, ಶಿಷ್ಯರು, “ಅರ್ಥವಾಯಿತು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 “ಇದೆಲ್ಲ ನಿಮಗೆ ಅರ್ಥವಾಯಿತೇ?” ಎಂದು ಯೇಸುಸ್ವಾಮಿ ಕೇಳಿದರು. ಶಿಷ್ಯರು “ಅರ್ಥವಾಯಿತು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಈ ಎಲ್ಲಾ ಮಾತುಗಳ ಅರ್ಥವು ನಿಮಗೆ ತಿಳಿಯಿತೋ ಎಂದು ಕೇಳಲು ಅವರು - ತಿಳಿಯಿತು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಯೇಸು ತನ್ನ ಶಿಷ್ಯರಿಗೆ, “ನೀವು ಈ ವಿಷಯಗಳನ್ನೆಲ್ಲಾ ಅರ್ಥಮಾಡಿಕೊಂಡಿರೋ?” ಎಂದು ಕೇಳಿದನು. ಅದಕ್ಕೆ ಶಿಷ್ಯರು, “ನಾವು ಅರ್ಥಮಾಡಿಕೊಂಡೆವು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ತನ್ನಾ ಜೆಜುನ್ ಶಿಸಾಕ್ನಿ, ಹೆ ಸಗ್ಳೆ ತುಮ್ಕಾ ಕಳ್ಳೆ ಕಾಯ್? ಮನುನ್ ಇಚಾರ್‍ಲ್ಯಾನ್. ತನ್ನಾ ಶಿಸಾನಿ “ಹೊಯ್,” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:51
13 ತಿಳಿವುಗಳ ಹೋಲಿಕೆ  

ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ. ಆದರೆ ಯೇಸು ತಮ್ಮ ಶಿಷ್ಯರೊಡನೆ ಏಕಾಂತವಾಗಿದ್ದಾಗ ಮಾತ್ರ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.


ಯಾರಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ, ಕೆಡುಕನು ಬಂದು ಅವರ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದುಹಾಕುತ್ತಾನೆ, ಇದೇ ದಾರಿಯ ಪಕ್ಕದಲ್ಲಿ ಬಿತ್ತಲಾಗಿರುವ ಬೀಜವಾಗಿರುವದು.


ಯೇಸು ಅದಕ್ಕೆ ಉತ್ತರವಾಗಿ ಹೇಳಿದ್ದು: “ಪರಲೋಕ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವ ಜ್ಞಾನವು ನಿಮಗೆ ಕೊಡಲಾಗಿದೆ, ಆದರೆ ಅವರಿಗಲ್ಲ.


ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.


ಯೇಸು ಅವರಿಗೆ, “ನೀವೂ ಇಷ್ಟು ಬುದ್ಧಿಹೀನರೋ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದ್ದು ಅವನನ್ನು ಅಶುದ್ಧ ಮಾಡುವುದಿಲ್ಲವೆಂಬುದು ನಿಮಗೆ ತಿಳಿಯದೋ?


“ಆದ್ದರಿಂದ ಪ್ರವಾದಿ ದಾನಿಯೇಲನಿಂದ ಹೇಳಿದ ಹಾಗೆ ‘ಅಸಹ್ಯ ವಸ್ತು’ ಪವಿತ್ರ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ, ಓದುವವನು ತಿಳಿದುಕೊಳ್ಳಲಿ.


ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವುದು ಹೇಗೆ?” ಎಂದು ಕೇಳಿದರು.


“ಬಾಯೊಳಕ್ಕೆ ಹೋಗಿ ಹೊಟ್ಟೆಯಲ್ಲಿ ಸೇರುವುದೆಲ್ಲವೂ ವಿಸರ್ಜಿತವಾಗುವುದೆಂದು ನೀವು ಇನ್ನೂ ಗ್ರಹಿಸಲಿಲ್ಲವೋ?


ಅವರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು,” ಎಂದು ಹೇಳಿದರು.


ಯೇಸು ಅವರಿಗೆ, “ಆದಕಾರಣ ಪರಲೋಕ ರಾಜ್ಯದ ಶಿಷ್ಯನಾಗಿರುವ ಪ್ರತಿಯೊಬ್ಬ ನಿಯಮ ಬೋಧಕನು, ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು