Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:29 - ಕನ್ನಡ ಸಮಕಾಲಿಕ ಅನುವಾದ

29 ಅದಕ್ಕೆ ಯೇಸು, “ಬಾ,” ಎಂದರು. ಆಗ ಪೇತ್ರನು ದೋಣಿಯಿಂದ ಇಳಿದು, ಯೇಸುವಿನ ಬಳಿಗೆ ಹೋಗುವುದಕ್ಕಾಗಿ ನೀರಿನ ಮೇಲೆ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆತನು, “ಬಾ” ಅಂದನು. ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವುದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಪೇತ್ರನು ದೋಣಿಯನ್ನು ಬಿಟ್ಟು ನೀರಿನ ಮೇಲೆ ನಡೆಯುತ್ತಾ ಯೇಸುವಿನತ್ತ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೇಸು, “ಪೇತ್ರನೇ, ಬಾ” ಅಂದನು. ಕೂಡಲೆ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ನೀರಿನ ಮೇಲೆ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಜೆಜುನ್ ತೆಕಾ,“ಯೆ, ತರ್!” ಮನುನ್ ಜಬಾಬ್ ದಿಲ್ಯಾನ್. ತನ್ನಾ ಪೆದ್ರು ಢೊನಿತ್ನಾ ಪಾನಿಯಾ ವರ್‍ತಿ ಯೆಲೊ ಅನಿ ಪಾನಿಯಾ ವರ್‍ತಿ ಚಲುನ್ಗೆತ್ ಜೆಜುಕ್ಡೆ ಯೆವ್‍ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:29
10 ತಿಳಿವುಗಳ ಹೋಲಿಕೆ  

ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ಆಗ ಯೇಸು ಅವನಿಗೆ, “ನಿನಗೆ ಸಾಧ್ಯವಿದ್ದರೆ ಎನ್ನುತ್ತೀಯಲ್ಲಾ? ನಂಬುವವನಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು.


ಯೇಸುವಿನ ನಾಮದಲ್ಲಿಟ್ಟ ವಿಶ್ವಾಸದಿಂದಲೇ ನೀವು ಕಂಡು ತಿಳಿದಿರುವ ಈ ಮನುಷ್ಯನು ಬಲಹೊಂದಿದ್ದಾನೆ. ಯೇಸುವಿನ ನಾಮವೂ ಅವರ ಮೂಲಕವಾಗಿ ಬರುವ ನಂಬಿಕೆಯೂ ಇವನಿಗೆ ಸಂಪೂರ್ಣ ಸ್ವಸ್ಥತೆಯನ್ನು ತಂದುಕೊಟ್ಟಿದೆ. ನೀವೆಲ್ಲರೂ ಇದನ್ನು ನೋಡಿದ್ದೀರಿ.


ಅದಕ್ಕೆ ಯೇಸು, “ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ, ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ,’ ಎಂದು ಹೇಳುವುದಾದರೆ ಅದು ನಿಮಗೆ ವಿಧೇಯವಾಗುವುದು.


ಅವನು ಆಗಲೇ ಸುಮಾರು ನೂರು ವರ್ಷದವನಾಗಿದ್ದು, ತನ್ನ ದೇಹವು ದುರ್ಬಲವಾಗಿದ್ದರೂ ಹೆಂಡತಿಯಾದ ಸಾರಳಿಗೆ ಗರ್ಭಧರಿಸುವ ಕಾಲ ಮುಗಿದು ಹೋಗಿದ್ದರೂ ನಂಬಿಕೆಯಲ್ಲಿ ಬಲಹೀನನಾಗಲಿಲ್ಲ.


ಯೇಸು ಉತ್ತರವಾಗಿ ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ಸಂದೇಹ ಪಡದೆ ನಂಬಿದರೆ, ನಾನು ಈ ಅಂಜೂರದ ಮರಕ್ಕೆ ಮಾಡಿದಂತೆಯೇ ನೀವೂ ಮಾಡುವಿರಿ. ಇದಲ್ಲದೆ ನೀವು ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೂ ಅದು ಹಾಗೆಯೇ ಆಗುವುದು.


ಯೇಸು ಅವರಿಗೆ, “ನಿಮ್ಮ ಅಪೂರ್ಣನಂಬಿಕೆಯೇ ಇದಕ್ಕೆ ಕಾರಣ. ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಆ ಸ್ಥಳಕ್ಕೆ ಹೋಗು’ ಎಂದು ಹೇಳಿದರೆ ಅದು ಹೋಗುವುದು. ಯಾವುದೂ ನಿಮಗೆ ಅಸಾಧ್ಯವಾಗಿರುವುದಿಲ್ಲ.


ಆಗ ಪೇತ್ರನು ಯೇಸುವಿಗೆ, “ಸ್ವಾಮೀ, ನೀವೇ ಆಗಿದ್ದರೆ, ನೀರಿನ ಮೇಲೆ ನಡೆದು ನಿಮ್ಮ ಬಳಿಗೆ ಬರಲು ನನಗೆ ಅಪ್ಪಣೆಕೊಡಿರಿ,” ಎಂದನು.


ಆದರೆ ಬಲವಾದ ಗಾಳಿಯನ್ನು ಕಂಡು, ಅವನು ಭಯಪಟ್ಟು ಮುಳುಗುತ್ತಾ, “ಸ್ವಾಮಿ, ನನ್ನನ್ನು ಕಾಪಾಡಿರಿ!” ಎಂದು ಕೂಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು